Advertisement
MIRROR FOCUS

ಇನ್ನೂ ಬಾರದ ಮಳೆ… | ಬರಗಾಲದ ಹೊಡೆತಕ್ಕೆ ಹಾವೇರಿಯ ಅಡಿಕೆ ಬೆಳೆಗಾರರು ಕಂಗಾಲು |

Share

ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ರಾಜ್ಯಾದ್ಯಂತ ಭೀಕರ ಬರ(Drought) ತಲೆದೋರಿದೆ. ಕೆಲವು ಕಡೆ ಪೂರ್ವ ಮುಂಗಾರು ಮಳೆ(Pre Mansoon rain) ಸುರಿದ ಕಾರಣ ರೈತರು(Farmers) ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಕೆಲ ಜಿಲ್ಲೆಗಳಲ್ಲಿ ಮಳೆಯ(Rain) ಸುಳಿವೇ ಇಲ್ಲ. ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಅದರಲ್ಲೂ ರೈತರ ಪಾಡು ಹೇಳತೀರದು. ಹಾವೇರಿ ಜಿಲ್ಲೆಯಲ್ಲಿ ಅಡಿಕೆ ಬೆಳೆ(Areca crop) ನಂಬಿದ್ದ ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ತಲೆದೋರಿದೆ. ಕಳೆದ ವರ್ಷ ಬಂದಪ್ಪಳಿಸಿದ ಭೀಕರ ಬರಗಾಲದಿಂದ(Drought Effect) ಅಡಿಕೆ ತೋಟಗಳು ಒಣಗಿವೆ. ಕೊಳವೆ ಬಾವಿಗಳಲ್ಲಿ ನೀರು ಖಾಲಿಯಾಗಿದೆ. ಇತ್ತ ಹಾವೇರಿ, ರಾಣೆಬೆನ್ನೂರು ತಾಲೂಕಿನ ರೈತರು ಸಂಕಷ್ಟದಲ್ಲಿದ್ದಾರೆ.

ಹಾವೇರಿ ಕೃಷಿಕರಿಗೆ ಮೊದಲಿನಿಂದಲೂ ಅಡಿಕೆ ಬೆಳೆ ಬೆಳೆಯುವ ಆಸೆ. ಅದರಲ್ಲೂ ಶಿರಸಿ, ಬನವಾಸಿ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿನ ಅಡಿಕೆ ತೋಟಗಳನ್ನು ನೋಡುತ್ತಿದ್ದ ಅವರಿಗೆ ತಮ್ಮ ಜಿಲ್ಲೆಯಲ್ಲೂ ಅಡಿಕೆ ಬೆಳೆಯುವ ಹಂಬಲವಿತ್ತು. ಅದರಲ್ಲೂ ಅಡಿಕೆಗೆ ಚಿನ್ನದ ಬೆಲೆ ಬಂದ ಮೇಲಂತೂ ಹಾವೇರಿಯ ರೈತರು ಅಡಿಕೆ ಗಿಡಗಳನ್ನು ನೆಟ್ಟು ತೋಟ ಮಾಡಲಾರಂಭಿಸಿದರು. ಈ ಪ್ರಯತ್ನದಲ್ಲಿ ಸಾಕಷ್ಟು ಮಂದಿ ಯಶಸ್ವಿಯೂ ಆದರು. ತೋಟ ಮಾಡಿ ಆರು ವರ್ಷಕ್ಕೆ ಇಳುವರಿ ಪಡೆಯಲಾರಂಭಿಸಿದರು. 8,000 ಹೆಕ್ಟೇರ್​ ಇದ್ದ ಅಡಿಕೆ ತೋಟಗಳ ವಿಸ್ತೀರ್ಣ ಮೂರು ವರ್ಷಗಳಲ್ಲೇ 14 ಸಾವಿರ ಹೆಕ್ಟೇರ್‌ ತಲುಪಿತ್ತು.

ರಾಜ್ಯ ಸರ್ಕಾರ ಮಲೆನಾಡು ಅಭಿವೃದ್ಧಿ ನಿಗಮಕ್ಕೆ ಬರುವ ಹಾವೇರಿ ಜಿಲ್ಲೆಯ ಹಿರೇಕೆರೂರು, ಶಿಗ್ಗಾಂವ್, ಸವಣೂರು, ಬ್ಯಾಡಗಿ ಮತ್ತು ಹಾನಗಲ್ ತಾಲೂಕುಗಳ ರೈತರಿಗೆ ನರೇಗಾ ಯೋಜನೆಯಲ್ಲಿ ಹಣ ನೀಡಿತು. ಆದರೆ ರಾಣೆಬೆನ್ನೂರು ತಾಲೂಕುಗಳ ಅಡಿಕೆ ರೈತರಿಗೆ ಬಯಲುಸೀಮೆ ಎಂಬ ಕಾರಣಕ್ಕೆ ಸಬ್ಸಿಡಿ ಸಿಗಲಿಲ್ಲ. ಹೀಗಿದ್ದರೂ ತಾಲೂಕಿನಲ್ಲಿ ಅಡಿಕೆ ಬೆಳೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಕೊಳವೆ ಬಾವಿ ನೀರಿನ ಲಭ್ಯತೆ ಮೇಲೆ ತಮಗಿರುವ ಜಮೀನಿನಲ್ಲಿ ಎಕರೆಗೆ 600-700 ಅಡಿಕೆ ಗಿಡ ನೆಟ್ಟು ಬೆಳೆಸಿ ಈ ವರ್ಷ ಕೈತುಂಬಾ ಫಸಲಿನ ಕನಸು ಕಂಡಿದ್ದರು.

ಆದರೆ, ಬರ ಬಂದಪ್ಪಳಿಸಿ ತೋಟಗಳು ಒಣಗಿವೆ. ಕೊಳವೆ ಬಾವಿಗಳಲ್ಲಿ ನೀರು ಖಾಲಿಯಾಗಿದೆ. ಆರಂಭದಲ್ಲಿ ಅಕ್ಕಪಕ್ಕದ ಜಮೀನುಗಳ ರೈತರ ಕೊಳವೆಬಾವಿ ಸಹಾಯದಿಂದ ನೀರುಣಿಸುತ್ತಿದ್ದರು. ಇದೀಗ ನೀರು ನೀಡುತ್ತಿರುವ ರೈತರ ಕೊಳವೆಬಾವಿಗಳಲ್ಲೇ ನೀರಿಲ್ಲ. ಹಾಗಾಗಿ, ಅವರು ತಮ್ಮ ಅಡಿಕೆ ಬೆಳೆ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ.

  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

7 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

7 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

8 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

11 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago