ಅಡಿಕೆ ಧಾರಣೆಗೆ ಸಂಬಂಧಿಸಿದ ಅನಾವಶ್ಯಕ ಗೊಂದಲಗಳಿಂದ ಕೂಡಿದ, ಆಡಿಕೆ ಬೆಳೆಗಾರರ ಆತ್ಮ ಸೈರ್ಯ ಕುಗ್ಗಿಸುವ ಪ್ರಯತ್ನವನ್ನು ಕ್ಯಾಂಪ್ಕೊ ಸಂಸ್ಥೆ ಖಂಡಿಸುತ್ತದೆ. ಉತ್ತರ ಭಾರತದಲ್ಲಿ ಚಾಲಿ ಅಡಿಕೆಗೆ ಉತ್ತಮ ಬೇಡಿಕೆ ಇದ್ದು, ಧಾರಣೆ ಕುಸಿಯುವ ಯಾವ ಕಾರಣವು ಇಲ್ಲ ಹಾಗೂ ಕ್ಯಾಂಪ್ಕೋ ಅಡಿಕೆ ಬೆಳೆಗಾರರ ಹಿತ ಕಾಪಾಡುವಲ್ಲಿ ಪ್ರಾಮಾಣಿಕ ಸೇವೆ ನೀಡುತ್ತದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.…..ಮುಂದೆ ಓದಿ….
ಅಡಿಕೆ ಸೇಟುಗಳು ಹಾಗೂ ವ್ಯಾಪಾರಿಗಳಿಗೆ ಅವರ ಹಿತಾಸಕ್ತಿ ಮುಖ್ಯವೇ ಹೊರತು ರೈತರ ಕಾಳಜಿ ಇರುವುದಿಲ್ಲ. ಅವರುಗಳು ಹೇಳಿದಂತೆ, ವಿದೇಶಿ ಅಡಿಕೆ ಗುಣಮಟ್ಟದಲ್ಲಿಯಾಗಲಿ, ದರದಲ್ಲಿಯೂ ನಮ್ಮ ಅಡಿಕೆಗೆ ಸರಿಸಾಟಿ ಅಲ್ಲ. ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೆ ಈ ವದಂತಿಗಳಿಗೆ ಮಣಿಯದೇ, ತಮಗೆ ಅಗತ್ಯವಿರುವಷ್ಟು ಅಡಿಕೆಯನ್ನು ಹಂತ ಹಂತವಾಗಿ ಕ್ಯಾಂಪ್ಕೋ ಸಂಸ್ಥೆ , ಹಾಗೂ ಸಹಕಾರಿ ಸಂಸ್ಥೆಗಳಿಗೆ ಮಾರಾಟ ಮಾಡಬೇಕಾಗಿ ಕ್ಯಾಂಪ್ಕೊ ಅಧ್ಯಕ್ಷರು ವಿನಂತಿಸಿದ್ದಾರೆ.…..ಮುಂದೆ ಓದಿ….
ಈಗಾಗಲೆ ಚೋಲ್ ಅಡಿಕೆ ದರ ಹೆಚ್ಚಾಗಿದ್ದು, ಮಳೆಯಿಂದಾಗಿ ಹೊಸ ಅಡಿಕೆ ಗುಣಮಟ್ಟ ಸುಧಾರಣೆ ಆದಾಗ ಇನ್ನು ಹೆಚ್ಚಿನ ದರ ನಮ್ಮ ರೈತರಿಗೆ ಖಂಡಿತಾ ಸಿಗುತ್ತದೆ ಎಂಬ ಭರವಸೆಯನ್ನು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ನೀಡಿದ್ದಾರೆ. ರೈತರು ಯಾವುದೇ ಕಾರಣದಿಂದ ತಮ್ಮ ಹೆಸರಿನಲ್ಲಿ ವ್ಯಾಪಾರಿಗಳ ಕಳಪೆ ಗುಣಮಟ್ಟದ ಅಡಿಕೆಯನ್ನು ತಮ್ಮ ಉತ್ತಮ ಗುಣಮಟ್ಟದ ಅಡಿಕೆಯೊಂದಿಗೆ ಮಿಕ್ಸ್ ಮಾಡಿ ನಮ್ಮ ಸಂಸ್ಥೆಗೆ ನೀಡಬಾರದಾಗಿ ಅವರು ಇದೇ ವೇಳೆ ಮನವಿ ಮಾಡಿದ್ದಾರೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…