ಅಡಿಕೆ ಧಾರಣೆಗೆ ಸಂಬಂಧಿಸಿದ ಅನಾವಶ್ಯಕ ಗೊಂದಲಗಳಿಂದ ಕೂಡಿದ, ಆಡಿಕೆ ಬೆಳೆಗಾರರ ಆತ್ಮ ಸೈರ್ಯ ಕುಗ್ಗಿಸುವ ಪ್ರಯತ್ನವನ್ನು ಕ್ಯಾಂಪ್ಕೊ ಸಂಸ್ಥೆ ಖಂಡಿಸುತ್ತದೆ. ಉತ್ತರ ಭಾರತದಲ್ಲಿ ಚಾಲಿ ಅಡಿಕೆಗೆ ಉತ್ತಮ ಬೇಡಿಕೆ ಇದ್ದು, ಧಾರಣೆ ಕುಸಿಯುವ ಯಾವ ಕಾರಣವು ಇಲ್ಲ ಹಾಗೂ ಕ್ಯಾಂಪ್ಕೋ ಅಡಿಕೆ ಬೆಳೆಗಾರರ ಹಿತ ಕಾಪಾಡುವಲ್ಲಿ ಪ್ರಾಮಾಣಿಕ ಸೇವೆ ನೀಡುತ್ತದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.…..ಮುಂದೆ ಓದಿ….
ಅಡಿಕೆ ಸೇಟುಗಳು ಹಾಗೂ ವ್ಯಾಪಾರಿಗಳಿಗೆ ಅವರ ಹಿತಾಸಕ್ತಿ ಮುಖ್ಯವೇ ಹೊರತು ರೈತರ ಕಾಳಜಿ ಇರುವುದಿಲ್ಲ. ಅವರುಗಳು ಹೇಳಿದಂತೆ, ವಿದೇಶಿ ಅಡಿಕೆ ಗುಣಮಟ್ಟದಲ್ಲಿಯಾಗಲಿ, ದರದಲ್ಲಿಯೂ ನಮ್ಮ ಅಡಿಕೆಗೆ ಸರಿಸಾಟಿ ಅಲ್ಲ. ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೆ ಈ ವದಂತಿಗಳಿಗೆ ಮಣಿಯದೇ, ತಮಗೆ ಅಗತ್ಯವಿರುವಷ್ಟು ಅಡಿಕೆಯನ್ನು ಹಂತ ಹಂತವಾಗಿ ಕ್ಯಾಂಪ್ಕೋ ಸಂಸ್ಥೆ , ಹಾಗೂ ಸಹಕಾರಿ ಸಂಸ್ಥೆಗಳಿಗೆ ಮಾರಾಟ ಮಾಡಬೇಕಾಗಿ ಕ್ಯಾಂಪ್ಕೊ ಅಧ್ಯಕ್ಷರು ವಿನಂತಿಸಿದ್ದಾರೆ.…..ಮುಂದೆ ಓದಿ….
ಈಗಾಗಲೆ ಚೋಲ್ ಅಡಿಕೆ ದರ ಹೆಚ್ಚಾಗಿದ್ದು, ಮಳೆಯಿಂದಾಗಿ ಹೊಸ ಅಡಿಕೆ ಗುಣಮಟ್ಟ ಸುಧಾರಣೆ ಆದಾಗ ಇನ್ನು ಹೆಚ್ಚಿನ ದರ ನಮ್ಮ ರೈತರಿಗೆ ಖಂಡಿತಾ ಸಿಗುತ್ತದೆ ಎಂಬ ಭರವಸೆಯನ್ನು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ನೀಡಿದ್ದಾರೆ. ರೈತರು ಯಾವುದೇ ಕಾರಣದಿಂದ ತಮ್ಮ ಹೆಸರಿನಲ್ಲಿ ವ್ಯಾಪಾರಿಗಳ ಕಳಪೆ ಗುಣಮಟ್ಟದ ಅಡಿಕೆಯನ್ನು ತಮ್ಮ ಉತ್ತಮ ಗುಣಮಟ್ಟದ ಅಡಿಕೆಯೊಂದಿಗೆ ಮಿಕ್ಸ್ ಮಾಡಿ ನಮ್ಮ ಸಂಸ್ಥೆಗೆ ನೀಡಬಾರದಾಗಿ ಅವರು ಇದೇ ವೇಳೆ ಮನವಿ ಮಾಡಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…