ಅಡಿಕೆ ಧಾರಣೆಗೆ ಸಂಬಂಧಿಸಿದ ಅನಾವಶ್ಯಕ ಗೊಂದಲಗಳಿಂದ ಕೂಡಿದ, ಆಡಿಕೆ ಬೆಳೆಗಾರರ ಆತ್ಮ ಸೈರ್ಯ ಕುಗ್ಗಿಸುವ ಪ್ರಯತ್ನವನ್ನು ಕ್ಯಾಂಪ್ಕೊ ಸಂಸ್ಥೆ ಖಂಡಿಸುತ್ತದೆ. ಉತ್ತರ ಭಾರತದಲ್ಲಿ ಚಾಲಿ ಅಡಿಕೆಗೆ ಉತ್ತಮ ಬೇಡಿಕೆ ಇದ್ದು, ಧಾರಣೆ ಕುಸಿಯುವ ಯಾವ ಕಾರಣವು ಇಲ್ಲ ಹಾಗೂ ಕ್ಯಾಂಪ್ಕೋ ಅಡಿಕೆ ಬೆಳೆಗಾರರ ಹಿತ ಕಾಪಾಡುವಲ್ಲಿ ಪ್ರಾಮಾಣಿಕ ಸೇವೆ ನೀಡುತ್ತದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.…..ಮುಂದೆ ಓದಿ….
ಅಡಿಕೆ ಸೇಟುಗಳು ಹಾಗೂ ವ್ಯಾಪಾರಿಗಳಿಗೆ ಅವರ ಹಿತಾಸಕ್ತಿ ಮುಖ್ಯವೇ ಹೊರತು ರೈತರ ಕಾಳಜಿ ಇರುವುದಿಲ್ಲ. ಅವರುಗಳು ಹೇಳಿದಂತೆ, ವಿದೇಶಿ ಅಡಿಕೆ ಗುಣಮಟ್ಟದಲ್ಲಿಯಾಗಲಿ, ದರದಲ್ಲಿಯೂ ನಮ್ಮ ಅಡಿಕೆಗೆ ಸರಿಸಾಟಿ ಅಲ್ಲ. ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೆ ಈ ವದಂತಿಗಳಿಗೆ ಮಣಿಯದೇ, ತಮಗೆ ಅಗತ್ಯವಿರುವಷ್ಟು ಅಡಿಕೆಯನ್ನು ಹಂತ ಹಂತವಾಗಿ ಕ್ಯಾಂಪ್ಕೋ ಸಂಸ್ಥೆ , ಹಾಗೂ ಸಹಕಾರಿ ಸಂಸ್ಥೆಗಳಿಗೆ ಮಾರಾಟ ಮಾಡಬೇಕಾಗಿ ಕ್ಯಾಂಪ್ಕೊ ಅಧ್ಯಕ್ಷರು ವಿನಂತಿಸಿದ್ದಾರೆ.…..ಮುಂದೆ ಓದಿ….
ಈಗಾಗಲೆ ಚೋಲ್ ಅಡಿಕೆ ದರ ಹೆಚ್ಚಾಗಿದ್ದು, ಮಳೆಯಿಂದಾಗಿ ಹೊಸ ಅಡಿಕೆ ಗುಣಮಟ್ಟ ಸುಧಾರಣೆ ಆದಾಗ ಇನ್ನು ಹೆಚ್ಚಿನ ದರ ನಮ್ಮ ರೈತರಿಗೆ ಖಂಡಿತಾ ಸಿಗುತ್ತದೆ ಎಂಬ ಭರವಸೆಯನ್ನು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ನೀಡಿದ್ದಾರೆ. ರೈತರು ಯಾವುದೇ ಕಾರಣದಿಂದ ತಮ್ಮ ಹೆಸರಿನಲ್ಲಿ ವ್ಯಾಪಾರಿಗಳ ಕಳಪೆ ಗುಣಮಟ್ಟದ ಅಡಿಕೆಯನ್ನು ತಮ್ಮ ಉತ್ತಮ ಗುಣಮಟ್ಟದ ಅಡಿಕೆಯೊಂದಿಗೆ ಮಿಕ್ಸ್ ಮಾಡಿ ನಮ್ಮ ಸಂಸ್ಥೆಗೆ ನೀಡಬಾರದಾಗಿ ಅವರು ಇದೇ ವೇಳೆ ಮನವಿ ಮಾಡಿದ್ದಾರೆ.
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…
ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…