Advertisement
MIRROR FOCUS

ಅಡಿಕೆ ಧಾರಣೆ ಇಳಿಕೆ | ಅನಾವಶ್ಯಕ ಗೊಂದಲ ಬೇಡ | ಅಡಿಕೆಗೆ ಬೇಡಿಕೆ ಇದ್ದು ಧಾರಣೆ ಕುಸಿಯುವ ಲಕ್ಷಣವಿಲ್ಲ – ಕಿಶೋರ್‌ ಕುಮಾರ್‌ ಕೊಡ್ಗಿ |

Share

ಅಡಿಕೆ ಧಾರಣೆಗೆ ಸಂಬಂಧಿಸಿದ  ಅನಾವಶ್ಯಕ ಗೊಂದಲಗಳಿಂದ ಕೂಡಿದ, ಆಡಿಕೆ ಬೆಳೆಗಾರರ ಆತ್ಮ ಸೈರ್ಯ ಕುಗ್ಗಿಸುವ ಪ್ರಯತ್ನವನ್ನು ಕ್ಯಾಂಪ್ಕೊ ಸಂಸ್ಥೆ ಖಂಡಿಸುತ್ತದೆ.  ಉತ್ತರ ಭಾರತದಲ್ಲಿ  ಚಾಲಿ ಅಡಿಕೆಗೆ ಉತ್ತಮ ಬೇಡಿಕೆ ಇದ್ದು, ಧಾರಣೆ ಕುಸಿಯುವ ಯಾವ ಕಾರಣವು ಇಲ್ಲ ಹಾಗೂ ಕ್ಯಾಂಪ್ಕೋ ಅಡಿಕೆ ಬೆಳೆಗಾರರ ಹಿತ ಕಾಪಾಡುವಲ್ಲಿ  ಪ್ರಾಮಾಣಿಕ ಸೇವೆ ನೀಡುತ್ತದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.…..ಮುಂದೆ ಓದಿ….

ಅಡಿಕೆ ಸೇಟುಗಳು ಹಾಗೂ ವ್ಯಾಪಾರಿಗಳಿಗೆ ಅವರ ಹಿತಾಸಕ್ತಿ ಮುಖ್ಯವೇ ಹೊರತು ರೈತರ ಕಾಳಜಿ ಇರುವುದಿಲ್ಲ. ಅವರುಗಳು ಹೇಳಿದಂತೆ, ವಿದೇಶಿ ಅಡಿಕೆ ಗುಣಮಟ್ಟದಲ್ಲಿಯಾಗಲಿ, ದರದಲ್ಲಿಯೂ ನಮ್ಮ ಅಡಿಕೆಗೆ ಸರಿಸಾಟಿ ಅಲ್ಲ. ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೆ ಈ ವದಂತಿಗಳಿಗೆ ಮಣಿಯದೇ, ತಮಗೆ ಅಗತ್ಯವಿರುವಷ್ಟು ಅಡಿಕೆಯನ್ನು ಹಂತ ಹಂತವಾಗಿ ಕ್ಯಾಂಪ್ಕೋ ಸಂಸ್ಥೆ , ಹಾಗೂ ಸಹಕಾರಿ ಸಂಸ್ಥೆಗಳಿಗೆ ಮಾರಾಟ ಮಾಡಬೇಕಾಗಿ ಕ್ಯಾಂಪ್ಕೊ ಅಧ್ಯಕ್ಷರು ವಿನಂತಿಸಿದ್ದಾರೆ.…..ಮುಂದೆ ಓದಿ….

ಈಗಾಗಲೆ ಚೋಲ್ ಅಡಿಕೆ ದರ ಹೆಚ್ಚಾಗಿದ್ದು, ಮಳೆಯಿಂದಾಗಿ ಹೊಸ ಅಡಿಕೆ ಗುಣಮಟ್ಟ ಸುಧಾರಣೆ ಆದಾಗ ಇನ್ನು ಹೆಚ್ಚಿನ ದರ ನಮ್ಮ ರೈತರಿಗೆ ಖಂಡಿತಾ ಸಿಗುತ್ತದೆ ಎಂಬ ಭರವಸೆಯನ್ನು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ನೀಡಿದ್ದಾರೆ. ರೈತರು ಯಾವುದೇ ಕಾರಣದಿಂದ ತಮ್ಮ ಹೆಸರಿನಲ್ಲಿ ವ್ಯಾಪಾರಿಗಳ ಕಳಪೆ ಗುಣಮಟ್ಟದ ಅಡಿಕೆಯನ್ನು ತಮ್ಮ ಉತ್ತಮ ಗುಣಮಟ್ಟದ ಅಡಿಕೆಯೊಂದಿಗೆ ಮಿಕ್ಸ್ ಮಾಡಿ ನಮ್ಮ ಸಂಸ್ಥೆಗೆ ನೀಡಬಾರದಾಗಿ ಅವರು ಇದೇ ವೇಳೆ ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago