ಅಡಿಕೆ ಧಾರಣೆಗೆ ಸಂಬಂಧಿಸಿದ ಅನಾವಶ್ಯಕ ಗೊಂದಲಗಳಿಂದ ಕೂಡಿದ, ಆಡಿಕೆ ಬೆಳೆಗಾರರ ಆತ್ಮ ಸೈರ್ಯ ಕುಗ್ಗಿಸುವ ಪ್ರಯತ್ನವನ್ನು ಕ್ಯಾಂಪ್ಕೊ ಸಂಸ್ಥೆ ಖಂಡಿಸುತ್ತದೆ. ಉತ್ತರ ಭಾರತದಲ್ಲಿ ಚಾಲಿ ಅಡಿಕೆಗೆ ಉತ್ತಮ ಬೇಡಿಕೆ ಇದ್ದು, ಧಾರಣೆ ಕುಸಿಯುವ ಯಾವ ಕಾರಣವು ಇಲ್ಲ ಹಾಗೂ ಕ್ಯಾಂಪ್ಕೋ ಅಡಿಕೆ ಬೆಳೆಗಾರರ ಹಿತ ಕಾಪಾಡುವಲ್ಲಿ ಪ್ರಾಮಾಣಿಕ ಸೇವೆ ನೀಡುತ್ತದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.…..ಮುಂದೆ ಓದಿ….
ಅಡಿಕೆ ಸೇಟುಗಳು ಹಾಗೂ ವ್ಯಾಪಾರಿಗಳಿಗೆ ಅವರ ಹಿತಾಸಕ್ತಿ ಮುಖ್ಯವೇ ಹೊರತು ರೈತರ ಕಾಳಜಿ ಇರುವುದಿಲ್ಲ. ಅವರುಗಳು ಹೇಳಿದಂತೆ, ವಿದೇಶಿ ಅಡಿಕೆ ಗುಣಮಟ್ಟದಲ್ಲಿಯಾಗಲಿ, ದರದಲ್ಲಿಯೂ ನಮ್ಮ ಅಡಿಕೆಗೆ ಸರಿಸಾಟಿ ಅಲ್ಲ. ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೆ ಈ ವದಂತಿಗಳಿಗೆ ಮಣಿಯದೇ, ತಮಗೆ ಅಗತ್ಯವಿರುವಷ್ಟು ಅಡಿಕೆಯನ್ನು ಹಂತ ಹಂತವಾಗಿ ಕ್ಯಾಂಪ್ಕೋ ಸಂಸ್ಥೆ , ಹಾಗೂ ಸಹಕಾರಿ ಸಂಸ್ಥೆಗಳಿಗೆ ಮಾರಾಟ ಮಾಡಬೇಕಾಗಿ ಕ್ಯಾಂಪ್ಕೊ ಅಧ್ಯಕ್ಷರು ವಿನಂತಿಸಿದ್ದಾರೆ.…..ಮುಂದೆ ಓದಿ….
ಈಗಾಗಲೆ ಚೋಲ್ ಅಡಿಕೆ ದರ ಹೆಚ್ಚಾಗಿದ್ದು, ಮಳೆಯಿಂದಾಗಿ ಹೊಸ ಅಡಿಕೆ ಗುಣಮಟ್ಟ ಸುಧಾರಣೆ ಆದಾಗ ಇನ್ನು ಹೆಚ್ಚಿನ ದರ ನಮ್ಮ ರೈತರಿಗೆ ಖಂಡಿತಾ ಸಿಗುತ್ತದೆ ಎಂಬ ಭರವಸೆಯನ್ನು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ನೀಡಿದ್ದಾರೆ. ರೈತರು ಯಾವುದೇ ಕಾರಣದಿಂದ ತಮ್ಮ ಹೆಸರಿನಲ್ಲಿ ವ್ಯಾಪಾರಿಗಳ ಕಳಪೆ ಗುಣಮಟ್ಟದ ಅಡಿಕೆಯನ್ನು ತಮ್ಮ ಉತ್ತಮ ಗುಣಮಟ್ಟದ ಅಡಿಕೆಯೊಂದಿಗೆ ಮಿಕ್ಸ್ ಮಾಡಿ ನಮ್ಮ ಸಂಸ್ಥೆಗೆ ನೀಡಬಾರದಾಗಿ ಅವರು ಇದೇ ವೇಳೆ ಮನವಿ ಮಾಡಿದ್ದಾರೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…