ಉತ್ತರ ಬೆಂಗಳೂರಲ್ಲಿ ಶ್ವಾಸತಾಣ ಕೊರತೆ ಇದ್ದು, ಯಲಹಂಕ ಆರ್.ಟಿ.ಓ. ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ “ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ’ಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಅವರು 70ನೇ ವನ್ಯಜೀವಿ ಸಪ್ತಾಹದ ಸಮಾರೋಪ ಅಂಗವಾಗಿ ಬೆಂಗಳೂರಿನಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.ಭಾರತೀಯ ಅರಣ್ಯ ಸಮೀಕ್ಷಾ ವರದಿ ಪ್ರಕಾರ ಬೆಂಗಳೂರು ನಗರ ಬಾರತದಲ್ಲೇ 3ನೇ ಅತಿ ಹೆಚ್ಚು ಭೂ ಪ್ರದೇಶ ಹೊಂದಿರುವ ನಗರವಾಗಿದೆ. ಸುಮಾರು 89 ಚದರ ಕಿಲೋಮೀಟರ್ ನಷ್ಟು ಅರಣ್ಯ ಪ್ರದೇಶ ಹೊಂದಿದೆ. ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರು ನಗರದಲ್ಲಿ ಐದು ಚದರ ಕಿಲೋಮೀಟರ್ ನಷ್ಟು ಹಸಿರು ಹೊದಿಕೆ ಕಡಿಮೆಯಾಗಿದೆ ಎಂದು ಹೇಳಿದರು. ವನ್ಯಮೃಗಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮುಂದಿನ ಪೀಳಿಗೆಗೆ ವನ್ಯಮೃಗಗಳ ಮಹತ್ವ ತಿಳಿಸಲು ವನ್ಯಜೀವಿ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಈ ವೇಳೆ ಅರಣ್ಯ, ಜೀವಿಶಾಸ್ತ್ರ, ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಕಾರ್ಯಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್ , ಮುಖ್ಯ ವನ್ಯಜೀವಿ ಪರಿಪಾಲಕ ಸುಭಾಷ್ ಮಾಲ್ಪಡೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…