ಮರಗಳನ್ನು ಕಡಿಯುವ ಮರಗಳ್ಳರ(wood thief)ವಿರುದ್ಧ ಕಠಿಣ ರೀತಿಯ ಕಾನೂನುಗಳು(Law) ಬರಬೇಕೆನ್ನುವುದು ಹಲವು ವರ್ಷಗಳ ಕೂಗು. ಇದೀಗ ರಾಜ್ಯದಲ್ಲಿ ಅನುಮತಿ(Permission) ಇಲ್ಲದೇ ಮರ ಕಡಿದ್ರೆ ದಂಡದ(Fine) ಜೊತೆ ಜೈಲು ಶಿಕ್ಷೆ(Imprisonment) ವಿಧಿಸಲಾಗುತ್ತದೆ ಎಂದು ಅರಣ್ಯ ಸಚಿವ(Forest Minister) ಈಶ್ವರ್ ಖಂಡ್ರೆ(Eshwar Khandre) ಎಚ್ಚರಿಕೆ ನೀಡಿದ್ದಾರೆ. ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ವಿಶ್ವ ಪರಿಸರ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ರಾಜ್ಯದ ಅರಣ್ಯ, ಗೋಮಾಳ, ಸರ್ಕಾರಿ ಭೂಮಿ ಹಾಗೂ ಪಟ್ಟಾ ಭೂಮಿಯಲ್ಲಿ ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಅನುಮತಿ ಇಲ್ಲದೆ ಯಾರೇ ನಿಯಮ ಬಾಹಿರ ಮತ್ತು ಅಕ್ರಮವಾಗಿ ಮರ ಕಡಿದರೆ ಮರದ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಸುಮಾರು 7 ಕೋಟಿ ಸಸಿ ನೆಡುವ ಗುರಿ : ಕರ್ನಾಟಕದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸುವ ನಿಟ್ಟಿನಲ್ಲಿ “ಹಸಿರು ಹೊದಿಕೆಯ ಕ್ರಾಂತಿ” ಮಾಡುವ ಮಹದುದ್ದೇಶದಿಂದ ಕಳೆದ 2023-24ನೇ ಸಾಲಿನಲ್ಲಿ ಸುಮಾರು 5.40 ಕೋಟಿ ನೆಟ್ಟು ಪೋಷಿಸಲಾಗಿದೆ ಈ ವರ್ಷವೂ ಸಹ ರಾಜ್ಯಾದ್ಯಂತ ಸುಮಾರು 7 ಕೋಟಿ ಸಸಿ ನೆಡುವ ಗುರಿ ಹೊಂದಲಾಗಿದೆ ಎಂದರು. ಪರಿಸರವನ್ನು ನಾವು ರಕ್ಷಿಸಿದಾಗ ಮಾತ್ರ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರದೊಂದಿಗೆ ಸಮತೋಲನ, ಸಾಮರಸ್ಯ ಕಾಯ್ದುಕೊಳ್ಳುವುದು ಅತಿಮುಖ್ಯ. ಇದು ನಮ್ಮ ಕರ್ತವ್ಯ ಮಾತ್ರವಲ್ಲ, ನಮ್ಮ ಮುಂದಿನ ಪೀಳಿಗೆಯವರಿಗೆ ನಾವು ನೀಡಲೇಬೇಕಾದ ಬಳುವಳಿ. ಪರಿಸರವನ್ನು ಉಳಿಸೋಣ, ಹಸಿರನ್ನು ಬೆಳೆಸೋಣ ಎಂದರು.
– ಅಂತರ್ಜಾಲ ಮಾಹಿತಿ
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…
ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…