ಮರಗಳನ್ನು ಕಡಿಯುವ ಮರಗಳ್ಳರ(wood thief)ವಿರುದ್ಧ ಕಠಿಣ ರೀತಿಯ ಕಾನೂನುಗಳು(Law) ಬರಬೇಕೆನ್ನುವುದು ಹಲವು ವರ್ಷಗಳ ಕೂಗು. ಇದೀಗ ರಾಜ್ಯದಲ್ಲಿ ಅನುಮತಿ(Permission) ಇಲ್ಲದೇ ಮರ ಕಡಿದ್ರೆ ದಂಡದ(Fine) ಜೊತೆ ಜೈಲು ಶಿಕ್ಷೆ(Imprisonment) ವಿಧಿಸಲಾಗುತ್ತದೆ ಎಂದು ಅರಣ್ಯ ಸಚಿವ(Forest Minister) ಈಶ್ವರ್ ಖಂಡ್ರೆ(Eshwar Khandre) ಎಚ್ಚರಿಕೆ ನೀಡಿದ್ದಾರೆ. ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ವಿಶ್ವ ಪರಿಸರ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ರಾಜ್ಯದ ಅರಣ್ಯ, ಗೋಮಾಳ, ಸರ್ಕಾರಿ ಭೂಮಿ ಹಾಗೂ ಪಟ್ಟಾ ಭೂಮಿಯಲ್ಲಿ ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಅನುಮತಿ ಇಲ್ಲದೆ ಯಾರೇ ನಿಯಮ ಬಾಹಿರ ಮತ್ತು ಅಕ್ರಮವಾಗಿ ಮರ ಕಡಿದರೆ ಮರದ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಸುಮಾರು 7 ಕೋಟಿ ಸಸಿ ನೆಡುವ ಗುರಿ : ಕರ್ನಾಟಕದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸುವ ನಿಟ್ಟಿನಲ್ಲಿ “ಹಸಿರು ಹೊದಿಕೆಯ ಕ್ರಾಂತಿ” ಮಾಡುವ ಮಹದುದ್ದೇಶದಿಂದ ಕಳೆದ 2023-24ನೇ ಸಾಲಿನಲ್ಲಿ ಸುಮಾರು 5.40 ಕೋಟಿ ನೆಟ್ಟು ಪೋಷಿಸಲಾಗಿದೆ ಈ ವರ್ಷವೂ ಸಹ ರಾಜ್ಯಾದ್ಯಂತ ಸುಮಾರು 7 ಕೋಟಿ ಸಸಿ ನೆಡುವ ಗುರಿ ಹೊಂದಲಾಗಿದೆ ಎಂದರು. ಪರಿಸರವನ್ನು ನಾವು ರಕ್ಷಿಸಿದಾಗ ಮಾತ್ರ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರದೊಂದಿಗೆ ಸಮತೋಲನ, ಸಾಮರಸ್ಯ ಕಾಯ್ದುಕೊಳ್ಳುವುದು ಅತಿಮುಖ್ಯ. ಇದು ನಮ್ಮ ಕರ್ತವ್ಯ ಮಾತ್ರವಲ್ಲ, ನಮ್ಮ ಮುಂದಿನ ಪೀಳಿಗೆಯವರಿಗೆ ನಾವು ನೀಡಲೇಬೇಕಾದ ಬಳುವಳಿ. ಪರಿಸರವನ್ನು ಉಳಿಸೋಣ, ಹಸಿರನ್ನು ಬೆಳೆಸೋಣ ಎಂದರು.
– ಅಂತರ್ಜಾಲ ಮಾಹಿತಿ
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…