ಬಿಜೆಪಿ ಪಕ್ಷವು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ 3ನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಹಾದೇವಪುರದಲ್ಲಿ ಲಿಂಬಾವಳಿ ಪತ್ನಿಗೆ ಟಿಕೆಟ್ ಲಭಿಸಿದೆ.
ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಮಹೇಶ್ ಟೆಂಗಿನಕಾಯಿ ಪಾಲಾಗಿದೆ. ಇನ್ನು ವಿ.ಸೋಮಣ್ಣನವರು ಪ್ರತಿನಿಧಿಸುತ್ತಿದ್ದ ಗೋವಿಂದರಾಜನಗರದ ಟಿಕೆಟ್ ಉಮೇಶ್ ಶೆಟ್ಟಿಗೆ ದೊರೆತಿದೆ
ಬಿಜೆಪಿಯ ಮೂರನೇ ಪಟ್ಟಿಯಲ್ಲಿ ರಾಮದಾಸ್ ಮತ್ತು ಅರವಿಂದ ಲಿಂಬಾವಳಿಗೆ ಟಿಕೆಟ್ ಮಿಸ್ ಆಗಿದೆ.
ಮಹಾದೇವಪುರದಿಂದ ಲಿಂಬಾವಳಿ ಪತ್ನಿ ಮಂಜುಳಾಗೆ ಟಿಕೆಟ್ ಸಿಕ್ಕಿದರೆ , ಹೆಬ್ಬಾಳದಿಂದ ಕಟ್ಟಾ ಸುಬ್ರಹ್ಮಣ್ಯ ಬದಲು ಕಟ್ಟಾ ಉಮೇಶ್ಗೆ ಟಿಕೆಟ್ ಘೋಷಣೆಯಾಗಿದೆ. ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಹೇಶ್ ಟೆಂಗಿನಕಾಯಿಗೆ ಟಿಕೆಟ್ ನೀಡಲಾಗಿದೆ.
ಸೋಮಣ್ಣ ಪ್ರತಿನಿಧಿಸುತ್ತಿದ್ದ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಟಿಕೆಟ್ ಉಮೇಶ್ ಶೆಟ್ಟಿಗೆ ಸಿಕ್ಕಿದೆ. ಇಂದಿನ ಪಟ್ಟಿಯಲ್ಲಿ ಮಾನ್ವಿ ಮತ್ತು ಶಿವಮೊಗ್ಗ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…