ತಲಕಾವೇರಿಯಲ್ಲಿ ಅ.17ರ ಮಧ್ಯರಾತ್ರಿ 1:27ಕ್ಕೆ ತೀರ್ಥೋದ್ಭವ | ತೀರ್ಥರೂಪಿಣಿಯಾಗಿ ಉಕ್ಕಿ ಬರುವ ಕಾವೇರಿ |

September 20, 2023
2:04 PM
ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.

ಕರ್ನಾಟಕದ ಜೀವ ನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯ ಕುಂಡಿಕೆಯಲ್ಲಿ ಮೊಗೆದಷ್ಟು ನೀರು ಉತ್ಪತ್ತಿಯಾಗುತ್ತಿರುವುದು ವಿಸ್ಮಯಕಾರಿಯಾಗಿದ್ದು, ಈ ಜೀವಜಲವನ್ನು ಕೊಡಗಿನವರು ಸೇರಿದಂತೆ ಸಹಸ್ರಾರು ಮಂದಿ ಭಕ್ತಿಯಿಂದ ಪೂಜಿಸುತ್ತಾರೆ. ತಲಕಾವೇರಿಯಲ್ಲಿ  ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.

ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ. ಜೀವ ನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುತ್ತದೆ. ಪವಿತ್ರ  ತೀರ್ಥೋದ್ಭವಕ್ಕೆ  ‌ಸಿದ್ದತೆ ನಡೆಸಲಾಗುತ್ತಿದೆ.

ಪ್ರತಿ ವರ್ಷವೂ ತುಲಾ ಮಾಸದಲ್ಲಿ ನಡೆಯುವ ಈ ಜಾತ್ರೆಗೆ ಸೆ.27ರಿಂದಲೇ ಸಿದ್ಧತೆ ಶುರುವಾಗುತ್ತದೆ. ಅಕ್ಟೋಬರ್‌ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗುತ್ತದೆ. ಈ ಬಾರಿ ರಾತ್ರಿ ತೀರ್ಥೋದ್ಬವ ಅಗುತ್ತಿರುವುದರಿಂದ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸುವ ನಿರೀಕ್ಷೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror