ಕರ್ನಾಟಕದ ಜೀವ ನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯ ಕುಂಡಿಕೆಯಲ್ಲಿ ಮೊಗೆದಷ್ಟು ನೀರು ಉತ್ಪತ್ತಿಯಾಗುತ್ತಿರುವುದು ವಿಸ್ಮಯಕಾರಿಯಾಗಿದ್ದು, ಈ ಜೀವಜಲವನ್ನು ಕೊಡಗಿನವರು ಸೇರಿದಂತೆ ಸಹಸ್ರಾರು ಮಂದಿ ಭಕ್ತಿಯಿಂದ ಪೂಜಿಸುತ್ತಾರೆ. ತಲಕಾವೇರಿಯಲ್ಲಿ ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.
ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ. ಜೀವ ನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುತ್ತದೆ. ಪವಿತ್ರ ತೀರ್ಥೋದ್ಭವಕ್ಕೆ ಸಿದ್ದತೆ ನಡೆಸಲಾಗುತ್ತಿದೆ.
ಪ್ರತಿ ವರ್ಷವೂ ತುಲಾ ಮಾಸದಲ್ಲಿ ನಡೆಯುವ ಈ ಜಾತ್ರೆಗೆ ಸೆ.27ರಿಂದಲೇ ಸಿದ್ಧತೆ ಶುರುವಾಗುತ್ತದೆ. ಅಕ್ಟೋಬರ್ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗುತ್ತದೆ. ಈ ಬಾರಿ ರಾತ್ರಿ ತೀರ್ಥೋದ್ಬವ ಅಗುತ್ತಿರುವುದರಿಂದ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸುವ ನಿರೀಕ್ಷೆ ಇದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…