ಕರ್ನಾಟಕದ ಜೀವ ನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯ ಕುಂಡಿಕೆಯಲ್ಲಿ ಮೊಗೆದಷ್ಟು ನೀರು ಉತ್ಪತ್ತಿಯಾಗುತ್ತಿರುವುದು ವಿಸ್ಮಯಕಾರಿಯಾಗಿದ್ದು, ಈ ಜೀವಜಲವನ್ನು ಕೊಡಗಿನವರು ಸೇರಿದಂತೆ ಸಹಸ್ರಾರು ಮಂದಿ ಭಕ್ತಿಯಿಂದ ಪೂಜಿಸುತ್ತಾರೆ. ತಲಕಾವೇರಿಯಲ್ಲಿ ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.
ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ. ಜೀವ ನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುತ್ತದೆ. ಪವಿತ್ರ ತೀರ್ಥೋದ್ಭವಕ್ಕೆ ಸಿದ್ದತೆ ನಡೆಸಲಾಗುತ್ತಿದೆ.
ಪ್ರತಿ ವರ್ಷವೂ ತುಲಾ ಮಾಸದಲ್ಲಿ ನಡೆಯುವ ಈ ಜಾತ್ರೆಗೆ ಸೆ.27ರಿಂದಲೇ ಸಿದ್ಧತೆ ಶುರುವಾಗುತ್ತದೆ. ಅಕ್ಟೋಬರ್ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗುತ್ತದೆ. ಈ ಬಾರಿ ರಾತ್ರಿ ತೀರ್ಥೋದ್ಬವ ಅಗುತ್ತಿರುವುದರಿಂದ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸುವ ನಿರೀಕ್ಷೆ ಇದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…