ತಿರುಪತಿ ತಿಮ್ಮಪ್ಪನ ದರ್ಶನವನ್ನು ಮಾಡಲು ಭಕ್ತಾದಿಗಳಿಗೆ ಟಿಕೆಟ್ಗಳನ್ನು ಟಿಟಿಡಿ ನೀಡುತ್ತಿತ್ತು. ಆದರೆ ಅದನ್ನೇ ಬಂಡಾವಾಳವನ್ನಾಗಿಸಿಕೊಂಡು ಕೆಲವರು ಈ ಟಿಕೆಟ್ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ವರದಿಯಾಗಿದೆ.
ತೆಲಂಗಾಣದ ಭಕ್ತರಿಗೆ 300 ರೂಪಾಯಿಯ ಟಿಕೆಟ್ನ್ನು 3,300 ರೂ.ಗೆ ನೀಡಲಾಗಿದೆ ಹಾಗೂ ಇನ್ನೂ ಕೆಲವರಿಗೆ 300 ರೂ ಮುಖಬೆಲೆಯ ವಿಶೇಷ ದರ್ಶದ ಟಿಕೆಟ್ನ್ನು 7 ಸಾವಿರ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ, ಎ.ಕೃಷ್ಣರಾವ್, ಅರುಣ್, ಬಾಲಾಜಿ ಸೇರಿದಂತೆ 7 ಜನರ ಮೇಲೆ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ವಿಷಯದಲ್ಲಿ ಮಧ್ಯವರ್ತಿ ಹಾಗೂ ಟಿಟಿಡಿ ಸಿಬ್ಬಂದಿಗಳೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…