ಸತತ ವರ್ಷದ 365 ದಿನವೂ ಮೈಸೂರಿನಲ್ಲಿ ಪ್ರವಾಸಿಗರ ದಂಡೇ ಆಗಮಿಸುತ್ತಿರುತ್ತದೆ. ಆದರೆ ಕೆಲವು ದಿನಗಳಲ್ಲಿ ಅನಿವಾರ್ಯ ಕಾರಣಗಳಿಂದ ಕೆಲವು ಭಾರಿ ಮೈಸೂರಿನ ಕೆಲವು ಪ್ರವಾಸಿ ತಾಣಗಳಿಗೆ ನಿರ್ಭಂಧ ಹೇರಲಾಗುತ್ತದೆ. ಅದೇ ರೀತಿ ಈ ಬಾರಿ ಮೈಸೂರು ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರವಾಸಿಗರು ಈ ಮಾಹಿತಿಯನ್ನು ಅನುಸರಿಸಿ ತಮ್ಮ ಮೈಸೂರು ಪ್ರವಾಸವನ್ನು ಪ್ಲಾನ್ ಮಾಡುವಂತೆ ಸೂಚನೆ ನೀಡಲಾಗಿದೆ.
ಪ್ರವಾಸಿಗರೇ ಗಮನಿಸಿ, ವಿಶ್ವವಿಖ್ಯಾತ ಮೈಸೂರು ಅರಮನೆಗೆ ಎರಡು ದಿನಗಳ ಕಾಲ ಪ್ರವೇಶ ನಿರ್ಬಂಧಿಸಲಾಗಿದೆ. ಆಗಸ್ಟ್ 1 ಹಾಗೂ 2ರಂದು ಮೈಸೂರು ಅರಮನೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಆಗಸ್ಟ್ 1 ಹಾಗೂ 2ರಂದು ಜಿ 20 ಶೃಂಗಸಭೆಯಲ್ಲಿ ಭಾಗವಹಿಸುವ ವಿದೇಶದ ಗಣ್ಯರು ಮೈಸೂರು ಅರಮನೆಯನ್ನು ವೀಕ್ಷಿಸುವುದಕ್ಕೆ ಭೇಟಿ ನೀಡಲಿದ್ದಾರೆ. ಈ ಕಾರಣ ಆಗಸ್ಟ್ 1 ಹಾಗೂ 2ರಂದು ಮೈಸೂರು ಅರಮನೆ ವೀಕ್ಷಣೆಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.
ಆಗಸ್ಟ್ 2ರಂದು ರಾತ್ರಿ 7 ರಿಂದ 8ರವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದ್ದು. ಈ ಕಾರ್ಯಕ್ರಮದ ವೀಕ್ಷಣೆಗೂ ಕೂಡ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ವಿದೇಶಿ ಗಣ್ಯರ ಅಗತ್ಯ ಮುಂಜಾಗ್ರತಾ ಕ್ರಮವಾಗಿ ಅರಮನೆ ವೀಕ್ಷಣೆಗೆ ಬರುವ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೈಸೂರು ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವ ಕಾರಣ ಪ್ರವಾಸಿಗರು ಈ ಮಾಹಿತಿಯನ್ನು ಅನುಸರಿಸಿ ಪ್ಲಾನ್ ಮಾಡುವಂತೆ ಸೂಚನೆ ನೀಡಲಾಗಿದೆ.
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…