ಸತತ ವರ್ಷದ 365 ದಿನವೂ ಮೈಸೂರಿನಲ್ಲಿ ಪ್ರವಾಸಿಗರ ದಂಡೇ ಆಗಮಿಸುತ್ತಿರುತ್ತದೆ. ಆದರೆ ಕೆಲವು ದಿನಗಳಲ್ಲಿ ಅನಿವಾರ್ಯ ಕಾರಣಗಳಿಂದ ಕೆಲವು ಭಾರಿ ಮೈಸೂರಿನ ಕೆಲವು ಪ್ರವಾಸಿ ತಾಣಗಳಿಗೆ ನಿರ್ಭಂಧ ಹೇರಲಾಗುತ್ತದೆ. ಅದೇ ರೀತಿ ಈ ಬಾರಿ ಮೈಸೂರು ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರವಾಸಿಗರು ಈ ಮಾಹಿತಿಯನ್ನು ಅನುಸರಿಸಿ ತಮ್ಮ ಮೈಸೂರು ಪ್ರವಾಸವನ್ನು ಪ್ಲಾನ್ ಮಾಡುವಂತೆ ಸೂಚನೆ ನೀಡಲಾಗಿದೆ.
ಪ್ರವಾಸಿಗರೇ ಗಮನಿಸಿ, ವಿಶ್ವವಿಖ್ಯಾತ ಮೈಸೂರು ಅರಮನೆಗೆ ಎರಡು ದಿನಗಳ ಕಾಲ ಪ್ರವೇಶ ನಿರ್ಬಂಧಿಸಲಾಗಿದೆ. ಆಗಸ್ಟ್ 1 ಹಾಗೂ 2ರಂದು ಮೈಸೂರು ಅರಮನೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಆಗಸ್ಟ್ 1 ಹಾಗೂ 2ರಂದು ಜಿ 20 ಶೃಂಗಸಭೆಯಲ್ಲಿ ಭಾಗವಹಿಸುವ ವಿದೇಶದ ಗಣ್ಯರು ಮೈಸೂರು ಅರಮನೆಯನ್ನು ವೀಕ್ಷಿಸುವುದಕ್ಕೆ ಭೇಟಿ ನೀಡಲಿದ್ದಾರೆ. ಈ ಕಾರಣ ಆಗಸ್ಟ್ 1 ಹಾಗೂ 2ರಂದು ಮೈಸೂರು ಅರಮನೆ ವೀಕ್ಷಣೆಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.
ಆಗಸ್ಟ್ 2ರಂದು ರಾತ್ರಿ 7 ರಿಂದ 8ರವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದ್ದು. ಈ ಕಾರ್ಯಕ್ರಮದ ವೀಕ್ಷಣೆಗೂ ಕೂಡ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ವಿದೇಶಿ ಗಣ್ಯರ ಅಗತ್ಯ ಮುಂಜಾಗ್ರತಾ ಕ್ರಮವಾಗಿ ಅರಮನೆ ವೀಕ್ಷಣೆಗೆ ಬರುವ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೈಸೂರು ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವ ಕಾರಣ ಪ್ರವಾಸಿಗರು ಈ ಮಾಹಿತಿಯನ್ನು ಅನುಸರಿಸಿ ಪ್ಲಾನ್ ಮಾಡುವಂತೆ ಸೂಚನೆ ನೀಡಲಾಗಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…