Advertisement
ಸುದ್ದಿಗಳು

ಈ ಆಟೋ ಏರಿದರೆ ನಿಮಗೆ ಸಿಗುತ್ತೆ ಬುಕ್ಸ್, ಬಿಸ್ಕೆಟ್, ಸ್ಯಾನಿಟರಿ ಪ್ಯಾಡ್, ನೀರು ಉಚಿತ…! | ನಿಜಕ್ಕೂ ಭೇಷ್

Share

ಆಟೋ ಅಂದ್ರೆ ಸಾಕು ಅಷ್ಟೂ ದುಬಾರಿ ಬೆಲೆ ಕೊಟ್ಟು ಯಾರು ಹೋಗ್ತಾರೆ. ಅದಕ್ಕಿಂತ ನಾಲ್ಕು ಹೆಜ್ಜೆ ನಡೆದ್ರೆನೆ ವಾಸಿ ಅನ್ಕೊತ್ತಾರೆ. ಆದರೆ, ಇಲ್ಲೊಬ್ಬ ಆಟೋ ರಿಕ್ಷಾ ಡ್ರೈವರ್‌ ತಮ್ಮ ಆಟೋದಲ್ಲಿ ಬುಕ್ಸ್‌, ಬಿಸ್ಕೆಟ್‌, ಸ್ಯಾನಿಟರಿ ಪ್ಯಾಡ್‌, ನೀರು ಉಚಿತವಾಗಿ ಇಡುವ ಮೂಲಕ ಪ್ರಯಾಣಿಕರನ್ನು ತನ್ನತ್ತ ಸೆಳೆಯುತ್ತಿದ್ದಾರೆ.

ನಾವೆಲ್ಲ ಪ್ರಯಾಣದ ವೇಳೆ ದಿನನಿತ್ಯ ಆಟೋ ರಿಕ್ಷಾಗಳನ್ನು ಬಳಸುತ್ತಲೆ ಇರುತ್ತೇವೆ.  ಕೆಲವರಿಗೆ ಕೆಲವೊಂದು ಅನುಭವ ಆಗಿರುತ್ತದೆ. ನಾವು ಹೇಳಿದಲ್ಲಿಗೆ ಯಾಕಾದ್ರು ಇವರು ಕರೀತಾರಪ್ಪಾ ಅನ್ನುವಷ್ಟರ ಮಟ್ಟಿಗೆ ಉದಾಸಿನತೆ ತೋರಿ ಬರುತ್ತಾರೆ. ಇನ್ನು ಒಂದು ರೂಪಾಯಿಗೂ ಚೌಕಸಿ ಮಾಡಿ ನಮ್ಮತ್ರ ಹಣ ಕಿತ್ತುಕೊಂಡೇ ಕಳುಹಿಸೋದು. ಆದ್ರೆ ಇಲ್ಲೊಬ್ರು ವಿಶೇಷ ವ್ಯಕ್ತಿ ಇದ್ದಾರೆ.

ಆಟೋ ರಿಕ್ಷಾ ಡ್ರೈವರ್‌ ರಾಜೇಶ್‌ ಎಂಬುವವರು  ತಮ್ಮ ಆಟೋದಲ್ಲಿ ಬುಕ್ಸ್‌, ಬಿಸ್ಕೆಟ್‌, ಸ್ಯಾನಿಟರಿ ಪ್ಯಾಡ್‌, ನೀರು ಉಚಿತವಾಗಿ ಇಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. “ಗ್ರಾಹಕರೇ ನನಗೆ ಎಲ್ಲಾ” ಎನ್ನುವ ರಾಜೇಶ್‌ ಅವರು ಗ್ರಾಹಕರಿಗೆ ಸಹಾಯವಾಗಲೆಂದು ತಮ್ಮ ಆಟೋದಲ್ಲಿ ಸಾಧನಗಳನ್ನು ಇಟ್ಟಿದ್ದಾರೆ. ಇದನ್ನು ಗಮನಿಸಿದ ಪ್ರಯಾಣಿಗ ಉತ್ತಮ್‌ ಕಶ್ಯಪ್‌ ಅವರು ತಮ್ಮ ಟ್ವಿಟರ್‌ ಮೂಲಕ ಟ್ವೀಟ್‌ ಮಾಡಿ ಈ ಆಟೋ ಡ್ರೈವರ್‌ ಅವರ ಕಾರ್ಯಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ರಾಜೇಶ್‌ ಅವರು ತಮ್ಮ ಆಟೋದಲ್ಲಿ ಪುಸ್ತಕ, ಸ್ಯಾನಿಟೈಸರ್‌, ಬ್ಯಾಂಡ್‌ಎಡ್‌, ಬಿಸ್ಕೆಟ್‌, ಚಾಕಲೇಟ್‌ ಮತ್ತು ನೀರಿನ ಬಾಟಲಿಗಳನ್ನು ಇಟ್ಟುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಜೊತೆಗೆ ತಮ್ಮ ಗ್ರಾಹಕರಿಗೆ  ಸರ್ವೀಸ್‌ ಮಾಡುತ್ತಾರೆ. ಇದಲ್ಲದೇ ಇಲ್ಲಿ ಇಟ್ಟಿರುವಂತಹ ಈ ಎಲ್ಲವೂ ಉಚಿತವಾಗಿಯೇ ಇರುತ್ತವೆ.

ಈ ಆಟೋ ಡ್ರೈವರ್‌ನ ಕಾರ್ಯವನ್ನು ಟ್ವೀಟ್‌ ಮಾಡಿದ್ದ ಉತ್ತಮ್‌ ಎನ್ನುವವರ ಪೋಸ್ಟ್‌ಗೆ ಜನರಿಂದ ತುಂಬಾ ಆಶ್ಚರ್ಯಕರವಾದ ಪ್ರತಿಕ್ರಿಯೆ ಬಂದಿದೆ. ಇದು ಬೆಂಗಳೂರಿನಲ್ಲಿ ವೈರಲ್‌ ಆಗುತ್ತಿರುವ ಒಬ್ಬ ಸಮಾಜ ಸೇವಕನ ಕಥೆ. ಇಂತಹವ ಜನರು ಈಗಿನ ಸಮಾಜದಲ್ಲಿ ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು. ರಾಜೇಶ್‌ ಅವರ ಈ ಕಾರ್ಯ ಪ್ರಶಂಸನೀಯವಾದದ್ದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರೈತರ ಬದುಕು ಉಳಿಸಲು ಭಾರತದಲ್ಲಿ ಹವಾಮಾನ–ಸ್ಥಿತಿಸ್ಥಾಪಕ ಕೃಷಿ ಅನಿವಾರ್ಯ

ಹವಾಮಾನ ಬದಲಾವಣೆಯಿಂದ ಬೆಳೆ ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ, ಭಾರತದಲ್ಲಿ…

1 hour ago

ರಾಷ್ಟ್ರೀಯ ರೈತ ದಿನಾಚರಣೆ ವಿಜೃಂಭಣೆ | ಕೃಷಿ ಕ್ಷೇತ್ರದ ಸಾಧಕರಿಗೆ ಸನ್ಮಾನ

ರಾಷ್ಟ್ರೀಯ ರೈತ ದಿನಾಚರಣೆಯನ್ನು ದಕ್ಷಿಣ ಕನ್ನಡದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಕೃಷಿ ಸಚಿವ ಎನ್.…

2 hours ago

ಸಾವಯವ ಕೃಷಿ ಇಂದಿನ ಅವಶ್ಯಕತೆ : ‘ಭಾರತದ ಗ್ರೀನ್ ಹೀರೋ’ ಆರ್.ಕೆ. ನಾಯರ್

ಸಾವಯವ ಕೃಷಿ ಇಂದಿನ ಅವಶ್ಯಕತೆ ಎಂದು ‘ಭಾರತದ ಗ್ರೀನ್ ಹೀರೋ’ ಆರ್.ಕೆ. ನಾಯರ್…

2 hours ago

ಬ್ರಹ್ಮಾವರ ಸರ್ಕಾರಿ ಡಿಪ್ಲೋಮಾ ಕೃಷಿ ಕಾಲೇಜು ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧಾರ

ಬ್ರಹ್ಮಾವರ ಸರ್ಕಾರಿ ಡಿಪ್ಲೋಮಾ ಕೃಷಿ ಕಾಲೇಜನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ…

2 hours ago

ಸೌರ ಪಂಪ್‌ಗಳ ಬಳಕೆಯಿಂದ ರೈತರ ಆದಾಯ ದ್ವಿಗುಣ

ಪಿಎಂ ಕುಸುಮ್ ಯೋಜನೆಯಿಂದ ರೈತರ ನೀರಾವರಿ ವೆಚ್ಚ ಕಡಿತ, ಸೌರ ಪಂಪ್ ಬಳಕೆ…

2 hours ago

ಬಟಾಟೆಯಂತೆ ಅಡಿಕೆಗೆ ವಿಕಿರಣ ಬಳಕೆ ಸಾಧ್ಯವೇ? ಹೇಗೆ ಬಳಸಬಹುದು?

ಅಡಿಕೆ ಸಂಗ್ರಹಣೆಯಲ್ಲಿ ಹುಳು, ಫಂಗಸ್ ಮತ್ತು ಗುಣಮಟ್ಟ ನಷ್ಟ ತಗ್ಗಿಸಲು ವಿಕಿರಣ ತಂತ್ರಜ್ಞಾನ…

2 hours ago