Advertisement
ಸುದ್ದಿಗಳು

ನೀರಿನ ಅಡಿಯಲ್ಲೇ ಮುಳುಗಿರುತ್ತೆ ಈ ಅಣೆಕಟ್ಟು | ಸರ್ ಎಂ ವಿಶ್ವೇಶ್ವರಯ್ಯನವರು ಶರಾವತಿ ನದಿಗೆ ಕಟ್ಟಿದ ಹಿರೇಭಾಸ್ಕರ ಡ್ಯಾಂ |

Share

ಕರ್ನಾಟಕ ನದಿಗಳ ತವರೂರು. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಅನೇಕ ನದಿಗಳು ಉಗಮಗೊಳ್ಳುತ್ತವೆ. ರೈತಾಪಿ ವರ್ಗಕ್ಕೆ ಈ ನದಿಗಳೇ ನೀರಿನ ಮೂಲ. ಕಡು ಬೇಸಿಗಯಲ್ಲೂ ನದಿಗಳು ಕೃಷಿಗೆ ನೀರು ಒದಗಿಸುತ್ತವೆ. ನಮ್ಮ ಪೂರ್ವಜರು ಕಟ್ಟಿದ ವಿವಿಧ ನಾವಿನ್ಯತೆಯ ಅಣೆಕಟ್ಟುಗಳು ಇದನ್ನು ಸಾಧ್ಯವಾಗಿಸಿವೆ. ರಾಜ್ಯದಲ್ಲಿ ಅನೇಕ ಜಲಾಶಯಗಳಿವೆ. ಆದರೆ ಈ ಜಲಾಶಯ ಮಾತ್ರ ವಿಶೇಷ.  ಹಾಗೆ ಈ ಜಲಾಶವನ್ನು ನೋಡಿರುವವರು ಬಹು ವಿರಳ. ಇದು ವರ್ಷಪೂರ್ತಿ ನೀರಿನಲ್ಲೇ ಮುಳುಗಿರುತ್ತದೆ.  ಈ ಜಲಾಶಯ  ಕಾಣಲು ಸಿಗೋದು ಹತ್ತಾರು ವರ್ಷಗಳಿಗೊಮ್ಮೆ ಮಾತ್ರ! ಶಿವಮೊಗ್ಗ ಜಿಲ್ಲೆಯ ಶರಾವತಿ ಒಡಲಲ್ಲಿ ಮುಳುಗಿ ಹೋಗಿರುವ ರಾಜ್ಯದ ಹಳೆಯ ಜಲಾಶಯ ಇದು.

Advertisement
Advertisement
Advertisement
Advertisement

ಲಿಂಗನಮಕ್ಕಿ ಜಲಾಶಯ ನಿರ್ಮಾಣಕ್ಕಿಂತ ಮೊದಲು, ಅಂದರೆ 20 ವರ್ಷಗಳ ಹಿಂದೆ ಇನ್ನೊಂದು ಜಲಾಶಯ ನಿರ್ಮಿಸಲಾಗಿತ್ತು. ಶರಾವತಿ ನದಿಗೆ ಅಡ್ಡಲಾಗಿ ಮೊದಲು ಹಿರೇಭಾಸ್ಕರ ಎಂಬ ಡ್ಯಾಂನ್ನು ಸರ್.ಎಂ.ವಿಶ್ವೇಶ್ವರಯ್ಯನವರು ನಿರ್ಮಿಸಿದ್ದು. ಶರಾವತಿ ಹಾಗೂ ಎಣ್ಣೆ ಹೊಳೆ ಸಂಗಮ ಸ್ಥಾನದ ಹಿರೇಬಚ್ಚಗಾರು ಎಂಬಲ್ಲಿ ಸಮುದ್ರ ಮಟ್ಟದಿಂದ 1778 ಅಡಿ ಎತ್ತರದಲ್ಲಿ ಡ್ಯಾಂ ನಿರ್ಮಾಣಗೊಂಡಿತ್ತು.

Advertisement
ಮಡೇನೂರು ಡ್ಯಾಂ, ಹಿರೇಭಾಸ್ಕರ ಡ್ಯಾಂ ಎಂದು ಸಹ ಕರೆಯಲಾಗುತ್ತೆ. 1939ರಲ್ಲಿ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಶಂಕುಸ್ಥಾಪನೆ ನೆರವೇರಿದ್ದರೂ, ಡ್ಯಾಂ ಕಾಮಗಾರಿ 1943ರಲ್ಲಿ ಪ್ರಾರಂಭಗೊಂಡು 1948ಕ್ಕೆ ಪೂರ್ಣಗೊಂಡಿತ್ತು.
ಈ ಡ್ಯಾಂನ ವಿನ್ಯಾಸ ಎಂಥವರೂ ವಿಸ್ಮಯಗೊಳ್ಳುವಂತಿದೆ. 50 ವರ್ಷಕ್ಕೂ ಹೆಚ್ಚು ಕಾಲ ಈ ಡ್ಯಾಂ ನೀರಿನಲ್ಲಿ ಮುಳುಗಿಯೇ ಇತ್ತು. ಆದ್ರೂ ಇದುವರೆಗೆ ಖಡಕ್ ಆಗಿ ಗಟ್ಟಿಮುಟ್ಟಾಗಿರುವುದು ಹಿರೇಭಾಸ್ಕರ್ ಡ್ಯಾಂನ ಇನ್ನೊಂದು ವಿಶೇಷ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

3 hours ago

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…

14 hours ago

ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…

14 hours ago

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ

ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…

14 hours ago

ಮಹಾಕುಂಭದಿಂದ ನಿರ್ಗಮಿಸಲು ವಿಶೇಷ ರೈಲು ಸಂಚಾರ | ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲು ಓಡಾಟ

ರೈಲ್ವೆ ಇಲಾಖೆ ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

15 hours ago

ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

ಮ್ಯಾನ್ಮಾರ್‌ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…

15 hours ago