Advertisement
Opinion

ಇಷ್ಟೇನಾ ಅಂತ ಕೇಳ್ಬೇಡಿ – ಪರಿಸರವನ್ನು ಪ್ಲಾಸ್ಟಿಕ್‌ ಮಾಲಿನ್ಯದಿಂದ ಕಾಪಾಡಲು ಇಷ್ಟು ಸಾಕು..

Share

ಪ್ಲಾಸ್ಟಿಕ್‌(Plastic) ರಾಸಾಯನಿಕವಾಗಿ(Chemical) ಪಾಲಿ ಈಥೈಲೀನ್ ಪಾಲಿಮರ್ ಆಗಿದ್ದು ಇದು ಪೆಟ್ರೋಲಿಯಂ ಉತ್ಪನ್ನಗಳಿಂದ(Petroleum) ಪ್ರಧಾನವಾಗಿ ಮಾಡಲ್ಪಟ್ಟಿದೆ. ಸುಮಾರು ೧೩,೦೦೦ ಬಗೆಯ ರಾಸಾಯನಿಕಗಳು ಇದರ ಉತ್ಪತ್ತಿ ಮತ್ತು ಉಪಯೋಗದಲ್ಲಿ ಪ್ರಮುಖ ಪಾತ್ರವಹಿಸುತ್ತವೆಯಾದುದರಿಂದ ಇದರಿಂದುಂಟಾಗಬಹುದಾದ ಅನಾಹುತಗಳನ್ನು ಊಹಿಸಲು ಅಸಾಧ್ಯ. ಪ್ಲಾಸ್ಟಿಕ್ ಮಾಲಿನ್ಯವನ್ನು ಹೊಡೆದೋಡಿಸಿ ಇದರಿಂದುಂಟಾಗುವ ಭೂಮಿ(Earth), ಜಲ(Water) ಮತ್ತು ವಾಯುಮಾಲಿನ್ಯಗಳನ್ನು(Air polution) ತಡೆಯುವುದು ಅತ್ಯವಶ್ಯಕವಾಗಿದೆ.

ಕೃತಕವಾಗಿ ತಯಾರಿಸಲ್ಪಟ್ಟ ಪೆಟ್ರೋಲಿಯಂ ರಾಸಾಯನಿಕ ವಸ್ತುಗಳಿಂದ ಪ್ಲಾಸ್ಟಿಕ್ ರಚಿತವಾಗಿದ್ದು, ಇದನ್ನು ಸುಟ್ಟಾಗ ಅಥವಾ ಕರಗಿಸಿದಾಗ ಉಂಟಾಗುವ ಹಾನಿಕಾರಕ ರಾಸಾಯನಿಕಗಳು ಪರಿಸರ ಮಾಲಿನ್ಯವನ್ನುಂಟುಮಾಡುತ್ತವೆ. ಇತ್ತೀಚೆಗೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ಅತಿ ಹೆಚ್ಚಾಗಿದ್ದು, ಪ್ಲಾಸ್ಟಿಕ್ ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಇದನ್ನೀಗ ಮನುಜರಾದ ನಾವೇ ತಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಒಂದು ಸಣ್ಣ ಪ್ರಯತ್ನವೂ ಸಾಕಾಗುತ್ತದೆ. ಇಲ್ಲಿ ನೋಡಿ

ಇಷ್ಟೇನಾ ಅಂತ ಕೇಳ್ಬೇಡಿ ಮೊದಲೇ ಹೇಳಿ ಬಿಡುತ್ತೇನೆ… ವಿಷಯ ಸಿಂಪಲ್,,,, 10 ರೂಪಾಯಿ ಮಜೂರಿ ಅಷ್ಟೇ… ನಮ್ಮ ಬೊಳುವಾರಿನಲ್ಲಿ ಭಾಸ್ಕರಣ್ಣ ಅಂತ ಹಿರಿಯ ಟೈಲರ್ ಒಬ್ಬರು ಇದ್ದಾರೆ.  ವಯಸ್ಸು ಅಂದಾಜು 70 ರ ಆಸುಪಾಸು ಮೊದಲೆಲ್ಲಾ ತುಂಬಾ ಕೆಲಸ ಸಿಗುತ್ತಿತ್ತು. ಆದರೆ ಈಗ ಈ ರೆಡಿಮೇಡ್ ಬಟ್ಟೆಗಳಿಗೆ ಬೇಡಿಕೆ ಹೆಚ್ಚು ಇರುವುದರಿಂದ  ಈ ಬಟ್ಟೆ ಖರೀದಿ ಮಾಡಿ ಅದನ್ನು ಟೈಲರಗಳಿಗೆ ಹೊಲಿಯಲು ಕೊಡುವುದು ಜನರಿಗೆ ಕಾಯುವಷ್ಟು ಪುರುಸೋತ್ತು ಇಲ್ಲ,(ನನ್ನನ್ನು ಸೇರಿಸಿ)
ಒಂದು ಸಣ್ಣ ಕೆಲಸ, 10 ಮೀಟರ್ ಬಟ್ಟೆ (ಮೀಟರಿಗೆ 20ರೂಪಾಯಿ) ಖರೀದಿ ಮಾಡಿ 20 ಕೈಚೀಲ ಹೊಲಿದು ಕೊಡುತ್ತೀರಂತಾ ಕೇಳಿದೆ. ಒಂದು ಚೀಲ ಹೊಲಿದ ಮಜೂರಿ 10 ರೂಪಾಯಿ ಕೊಡುತ್ತೇನೆ ಹೇಗೆ ಕೆಲಸ ಮಾಡುತ್ತೀರಂತ ಕೇಳಿದೆ, ಸರಿ ಮಲ್ಯರೇ ಎಂದು ಕೆಲಸ ಶುರುಮಾಡಿದರು. ನೋಡಿ ಚೀಲ ಹೇಗಿದೆ.. ? ಸ್ವಲ್ಪ ತಾಳ್ಮೆ ಬೇಕು ಅಷ್ಟೇ..

ಈ ವಿಷಯದಲ್ಲಿ ಇನ್ನು ಈ ಚೀಲದ ಉಪಯೋಗ ಹೇಗಂತ ಕೇಳುತ್ತೀರಾ…. ನಾನೊಂದ ಪುಟ್ಟದಾದ ಜನರಲ್ ಸ್ಟೋರ್ ಅಂಗಡಿ ವ್ಯಾಪಾರ ಮಾಡಿಕೊಂಡಿದ್ದೇನೆ. ನನ್ನಲ್ಲಿ ನಿತ್ಯ ವ್ಯಾಪಾರಕ್ಕೆ ಬರುವಂತಾಹ ಗ್ರಾಹಕರೀಗೆ (300 ಮೇಲ್ಪಟ್ಟ ವ್ಯಾಪಾರಕ್ಕೆ) ಇದನ್ನು ನೀಡುತ್ತಿದ್ದೇನೆ. 500, 300 ರೂಪಾಯಿ ಖರೀದಿಗೆ ಬಿಲ್ನಲ್ಲಿ 5%10% ಡಿಸ್ಕೌಂಟ್ ಮಾಡುವ ಬದಲು ಇಂತಾಹ ಚೀಲಗಳನ್ನು ನಮ್ಮ ಆಸುಪಾಸಿನ ಈ ವಿಷಯದಲ್ಲಿ ಆಸಕ್ತಿ ಇರುವ ಟೈಲರಗಳಲ್ಲಿ ಹೊಲಿಯಲು ನೀಡಿ. ಅವರೀಗೂ ಕೆಲಸ ಆಗುತ್ತದೆ. ಪ್ಲಾಸ್ಟಿಕ್ ನಿಂದ ಸ್ವಲ್ಪ ಮುಕ್ತಿ ಸಿಗಬಹುದು.

ಬರಹ :
ಕಿರಣ ಶಂಕರ ಮಲ್ಯ
, ಸ್ವಚ್ಚಪುತ್ತೂರು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

10 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

11 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

13 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

13 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago