Advertisement
Opinion

ಇಷ್ಟೇನಾ ಅಂತ ಕೇಳ್ಬೇಡಿ – ಪರಿಸರವನ್ನು ಪ್ಲಾಸ್ಟಿಕ್‌ ಮಾಲಿನ್ಯದಿಂದ ಕಾಪಾಡಲು ಇಷ್ಟು ಸಾಕು..

Share

ಪ್ಲಾಸ್ಟಿಕ್‌(Plastic) ರಾಸಾಯನಿಕವಾಗಿ(Chemical) ಪಾಲಿ ಈಥೈಲೀನ್ ಪಾಲಿಮರ್ ಆಗಿದ್ದು ಇದು ಪೆಟ್ರೋಲಿಯಂ ಉತ್ಪನ್ನಗಳಿಂದ(Petroleum) ಪ್ರಧಾನವಾಗಿ ಮಾಡಲ್ಪಟ್ಟಿದೆ. ಸುಮಾರು ೧೩,೦೦೦ ಬಗೆಯ ರಾಸಾಯನಿಕಗಳು ಇದರ ಉತ್ಪತ್ತಿ ಮತ್ತು ಉಪಯೋಗದಲ್ಲಿ ಪ್ರಮುಖ ಪಾತ್ರವಹಿಸುತ್ತವೆಯಾದುದರಿಂದ ಇದರಿಂದುಂಟಾಗಬಹುದಾದ ಅನಾಹುತಗಳನ್ನು ಊಹಿಸಲು ಅಸಾಧ್ಯ. ಪ್ಲಾಸ್ಟಿಕ್ ಮಾಲಿನ್ಯವನ್ನು ಹೊಡೆದೋಡಿಸಿ ಇದರಿಂದುಂಟಾಗುವ ಭೂಮಿ(Earth), ಜಲ(Water) ಮತ್ತು ವಾಯುಮಾಲಿನ್ಯಗಳನ್ನು(Air polution) ತಡೆಯುವುದು ಅತ್ಯವಶ್ಯಕವಾಗಿದೆ.

ಕೃತಕವಾಗಿ ತಯಾರಿಸಲ್ಪಟ್ಟ ಪೆಟ್ರೋಲಿಯಂ ರಾಸಾಯನಿಕ ವಸ್ತುಗಳಿಂದ ಪ್ಲಾಸ್ಟಿಕ್ ರಚಿತವಾಗಿದ್ದು, ಇದನ್ನು ಸುಟ್ಟಾಗ ಅಥವಾ ಕರಗಿಸಿದಾಗ ಉಂಟಾಗುವ ಹಾನಿಕಾರಕ ರಾಸಾಯನಿಕಗಳು ಪರಿಸರ ಮಾಲಿನ್ಯವನ್ನುಂಟುಮಾಡುತ್ತವೆ. ಇತ್ತೀಚೆಗೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ಅತಿ ಹೆಚ್ಚಾಗಿದ್ದು, ಪ್ಲಾಸ್ಟಿಕ್ ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಇದನ್ನೀಗ ಮನುಜರಾದ ನಾವೇ ತಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಒಂದು ಸಣ್ಣ ಪ್ರಯತ್ನವೂ ಸಾಕಾಗುತ್ತದೆ. ಇಲ್ಲಿ ನೋಡಿ

ಇಷ್ಟೇನಾ ಅಂತ ಕೇಳ್ಬೇಡಿ ಮೊದಲೇ ಹೇಳಿ ಬಿಡುತ್ತೇನೆ… ವಿಷಯ ಸಿಂಪಲ್,,,, 10 ರೂಪಾಯಿ ಮಜೂರಿ ಅಷ್ಟೇ… ನಮ್ಮ ಬೊಳುವಾರಿನಲ್ಲಿ ಭಾಸ್ಕರಣ್ಣ ಅಂತ ಹಿರಿಯ ಟೈಲರ್ ಒಬ್ಬರು ಇದ್ದಾರೆ.  ವಯಸ್ಸು ಅಂದಾಜು 70 ರ ಆಸುಪಾಸು ಮೊದಲೆಲ್ಲಾ ತುಂಬಾ ಕೆಲಸ ಸಿಗುತ್ತಿತ್ತು. ಆದರೆ ಈಗ ಈ ರೆಡಿಮೇಡ್ ಬಟ್ಟೆಗಳಿಗೆ ಬೇಡಿಕೆ ಹೆಚ್ಚು ಇರುವುದರಿಂದ  ಈ ಬಟ್ಟೆ ಖರೀದಿ ಮಾಡಿ ಅದನ್ನು ಟೈಲರಗಳಿಗೆ ಹೊಲಿಯಲು ಕೊಡುವುದು ಜನರಿಗೆ ಕಾಯುವಷ್ಟು ಪುರುಸೋತ್ತು ಇಲ್ಲ,(ನನ್ನನ್ನು ಸೇರಿಸಿ)
ಒಂದು ಸಣ್ಣ ಕೆಲಸ, 10 ಮೀಟರ್ ಬಟ್ಟೆ (ಮೀಟರಿಗೆ 20ರೂಪಾಯಿ) ಖರೀದಿ ಮಾಡಿ 20 ಕೈಚೀಲ ಹೊಲಿದು ಕೊಡುತ್ತೀರಂತಾ ಕೇಳಿದೆ. ಒಂದು ಚೀಲ ಹೊಲಿದ ಮಜೂರಿ 10 ರೂಪಾಯಿ ಕೊಡುತ್ತೇನೆ ಹೇಗೆ ಕೆಲಸ ಮಾಡುತ್ತೀರಂತ ಕೇಳಿದೆ, ಸರಿ ಮಲ್ಯರೇ ಎಂದು ಕೆಲಸ ಶುರುಮಾಡಿದರು. ನೋಡಿ ಚೀಲ ಹೇಗಿದೆ.. ? ಸ್ವಲ್ಪ ತಾಳ್ಮೆ ಬೇಕು ಅಷ್ಟೇ..

ಈ ವಿಷಯದಲ್ಲಿ ಇನ್ನು ಈ ಚೀಲದ ಉಪಯೋಗ ಹೇಗಂತ ಕೇಳುತ್ತೀರಾ…. ನಾನೊಂದ ಪುಟ್ಟದಾದ ಜನರಲ್ ಸ್ಟೋರ್ ಅಂಗಡಿ ವ್ಯಾಪಾರ ಮಾಡಿಕೊಂಡಿದ್ದೇನೆ. ನನ್ನಲ್ಲಿ ನಿತ್ಯ ವ್ಯಾಪಾರಕ್ಕೆ ಬರುವಂತಾಹ ಗ್ರಾಹಕರೀಗೆ (300 ಮೇಲ್ಪಟ್ಟ ವ್ಯಾಪಾರಕ್ಕೆ) ಇದನ್ನು ನೀಡುತ್ತಿದ್ದೇನೆ. 500, 300 ರೂಪಾಯಿ ಖರೀದಿಗೆ ಬಿಲ್ನಲ್ಲಿ 5%10% ಡಿಸ್ಕೌಂಟ್ ಮಾಡುವ ಬದಲು ಇಂತಾಹ ಚೀಲಗಳನ್ನು ನಮ್ಮ ಆಸುಪಾಸಿನ ಈ ವಿಷಯದಲ್ಲಿ ಆಸಕ್ತಿ ಇರುವ ಟೈಲರಗಳಲ್ಲಿ ಹೊಲಿಯಲು ನೀಡಿ. ಅವರೀಗೂ ಕೆಲಸ ಆಗುತ್ತದೆ. ಪ್ಲಾಸ್ಟಿಕ್ ನಿಂದ ಸ್ವಲ್ಪ ಮುಕ್ತಿ ಸಿಗಬಹುದು.

ಬರಹ :
ಕಿರಣ ಶಂಕರ ಮಲ್ಯ
, ಸ್ವಚ್ಚಪುತ್ತೂರು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

3 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

3 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

11 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

13 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago