ಪ್ಲಾಸ್ಟಿಕ್(Plastic) ರಾಸಾಯನಿಕವಾಗಿ(Chemical) ಪಾಲಿ ಈಥೈಲೀನ್ ಪಾಲಿಮರ್ ಆಗಿದ್ದು ಇದು ಪೆಟ್ರೋಲಿಯಂ ಉತ್ಪನ್ನಗಳಿಂದ(Petroleum) ಪ್ರಧಾನವಾಗಿ ಮಾಡಲ್ಪಟ್ಟಿದೆ. ಸುಮಾರು ೧೩,೦೦೦ ಬಗೆಯ ರಾಸಾಯನಿಕಗಳು ಇದರ ಉತ್ಪತ್ತಿ ಮತ್ತು ಉಪಯೋಗದಲ್ಲಿ ಪ್ರಮುಖ ಪಾತ್ರವಹಿಸುತ್ತವೆಯಾದುದರಿಂದ ಇದರಿಂದುಂಟಾಗಬಹುದಾದ ಅನಾಹುತಗಳನ್ನು ಊಹಿಸಲು ಅಸಾಧ್ಯ. ಪ್ಲಾಸ್ಟಿಕ್ ಮಾಲಿನ್ಯವನ್ನು ಹೊಡೆದೋಡಿಸಿ ಇದರಿಂದುಂಟಾಗುವ ಭೂಮಿ(Earth), ಜಲ(Water) ಮತ್ತು ವಾಯುಮಾಲಿನ್ಯಗಳನ್ನು(Air polution) ತಡೆಯುವುದು ಅತ್ಯವಶ್ಯಕವಾಗಿದೆ.
ಕೃತಕವಾಗಿ ತಯಾರಿಸಲ್ಪಟ್ಟ ಪೆಟ್ರೋಲಿಯಂ ರಾಸಾಯನಿಕ ವಸ್ತುಗಳಿಂದ ಪ್ಲಾಸ್ಟಿಕ್ ರಚಿತವಾಗಿದ್ದು, ಇದನ್ನು ಸುಟ್ಟಾಗ ಅಥವಾ ಕರಗಿಸಿದಾಗ ಉಂಟಾಗುವ ಹಾನಿಕಾರಕ ರಾಸಾಯನಿಕಗಳು ಪರಿಸರ ಮಾಲಿನ್ಯವನ್ನುಂಟುಮಾಡುತ್ತವೆ. ಇತ್ತೀಚೆಗೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ಅತಿ ಹೆಚ್ಚಾಗಿದ್ದು, ಪ್ಲಾಸ್ಟಿಕ್ ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಇದನ್ನೀಗ ಮನುಜರಾದ ನಾವೇ ತಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಒಂದು ಸಣ್ಣ ಪ್ರಯತ್ನವೂ ಸಾಕಾಗುತ್ತದೆ. ಇಲ್ಲಿ ನೋಡಿ
ಇಷ್ಟೇನಾ ಅಂತ ಕೇಳ್ಬೇಡಿ ಮೊದಲೇ ಹೇಳಿ ಬಿಡುತ್ತೇನೆ… ವಿಷಯ ಸಿಂಪಲ್,,,, 10 ರೂಪಾಯಿ ಮಜೂರಿ ಅಷ್ಟೇ… ನಮ್ಮ ಬೊಳುವಾರಿನಲ್ಲಿ ಭಾಸ್ಕರಣ್ಣ ಅಂತ ಹಿರಿಯ ಟೈಲರ್ ಒಬ್ಬರು ಇದ್ದಾರೆ. ವಯಸ್ಸು ಅಂದಾಜು 70 ರ ಆಸುಪಾಸು ಮೊದಲೆಲ್ಲಾ ತುಂಬಾ ಕೆಲಸ ಸಿಗುತ್ತಿತ್ತು. ಆದರೆ ಈಗ ಈ ರೆಡಿಮೇಡ್ ಬಟ್ಟೆಗಳಿಗೆ ಬೇಡಿಕೆ ಹೆಚ್ಚು ಇರುವುದರಿಂದ ಈ ಬಟ್ಟೆ ಖರೀದಿ ಮಾಡಿ ಅದನ್ನು ಟೈಲರಗಳಿಗೆ ಹೊಲಿಯಲು ಕೊಡುವುದು ಜನರಿಗೆ ಕಾಯುವಷ್ಟು ಪುರುಸೋತ್ತು ಇಲ್ಲ,(ನನ್ನನ್ನು ಸೇರಿಸಿ)
ಒಂದು ಸಣ್ಣ ಕೆಲಸ, 10 ಮೀಟರ್ ಬಟ್ಟೆ (ಮೀಟರಿಗೆ 20ರೂಪಾಯಿ) ಖರೀದಿ ಮಾಡಿ 20 ಕೈಚೀಲ ಹೊಲಿದು ಕೊಡುತ್ತೀರಂತಾ ಕೇಳಿದೆ. ಒಂದು ಚೀಲ ಹೊಲಿದ ಮಜೂರಿ 10 ರೂಪಾಯಿ ಕೊಡುತ್ತೇನೆ ಹೇಗೆ ಕೆಲಸ ಮಾಡುತ್ತೀರಂತ ಕೇಳಿದೆ, ಸರಿ ಮಲ್ಯರೇ ಎಂದು ಕೆಲಸ ಶುರುಮಾಡಿದರು. ನೋಡಿ ಚೀಲ ಹೇಗಿದೆ.. ? ಸ್ವಲ್ಪ ತಾಳ್ಮೆ ಬೇಕು ಅಷ್ಟೇ..
ಈ ವಿಷಯದಲ್ಲಿ ಇನ್ನು ಈ ಚೀಲದ ಉಪಯೋಗ ಹೇಗಂತ ಕೇಳುತ್ತೀರಾ…. ನಾನೊಂದ ಪುಟ್ಟದಾದ ಜನರಲ್ ಸ್ಟೋರ್ ಅಂಗಡಿ ವ್ಯಾಪಾರ ಮಾಡಿಕೊಂಡಿದ್ದೇನೆ. ನನ್ನಲ್ಲಿ ನಿತ್ಯ ವ್ಯಾಪಾರಕ್ಕೆ ಬರುವಂತಾಹ ಗ್ರಾಹಕರೀಗೆ (300 ಮೇಲ್ಪಟ್ಟ ವ್ಯಾಪಾರಕ್ಕೆ) ಇದನ್ನು ನೀಡುತ್ತಿದ್ದೇನೆ. 500, 300 ರೂಪಾಯಿ ಖರೀದಿಗೆ ಬಿಲ್ನಲ್ಲಿ 5%10% ಡಿಸ್ಕೌಂಟ್ ಮಾಡುವ ಬದಲು ಇಂತಾಹ ಚೀಲಗಳನ್ನು ನಮ್ಮ ಆಸುಪಾಸಿನ ಈ ವಿಷಯದಲ್ಲಿ ಆಸಕ್ತಿ ಇರುವ ಟೈಲರಗಳಲ್ಲಿ ಹೊಲಿಯಲು ನೀಡಿ. ಅವರೀಗೂ ಕೆಲಸ ಆಗುತ್ತದೆ. ಪ್ಲಾಸ್ಟಿಕ್ ನಿಂದ ಸ್ವಲ್ಪ ಮುಕ್ತಿ ಸಿಗಬಹುದು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…