Advertisement
Opinion

ಇಷ್ಟೇನಾ ಅಂತ ಕೇಳ್ಬೇಡಿ – ಪರಿಸರವನ್ನು ಪ್ಲಾಸ್ಟಿಕ್‌ ಮಾಲಿನ್ಯದಿಂದ ಕಾಪಾಡಲು ಇಷ್ಟು ಸಾಕು..

Share

ಪ್ಲಾಸ್ಟಿಕ್‌(Plastic) ರಾಸಾಯನಿಕವಾಗಿ(Chemical) ಪಾಲಿ ಈಥೈಲೀನ್ ಪಾಲಿಮರ್ ಆಗಿದ್ದು ಇದು ಪೆಟ್ರೋಲಿಯಂ ಉತ್ಪನ್ನಗಳಿಂದ(Petroleum) ಪ್ರಧಾನವಾಗಿ ಮಾಡಲ್ಪಟ್ಟಿದೆ. ಸುಮಾರು ೧೩,೦೦೦ ಬಗೆಯ ರಾಸಾಯನಿಕಗಳು ಇದರ ಉತ್ಪತ್ತಿ ಮತ್ತು ಉಪಯೋಗದಲ್ಲಿ ಪ್ರಮುಖ ಪಾತ್ರವಹಿಸುತ್ತವೆಯಾದುದರಿಂದ ಇದರಿಂದುಂಟಾಗಬಹುದಾದ ಅನಾಹುತಗಳನ್ನು ಊಹಿಸಲು ಅಸಾಧ್ಯ. ಪ್ಲಾಸ್ಟಿಕ್ ಮಾಲಿನ್ಯವನ್ನು ಹೊಡೆದೋಡಿಸಿ ಇದರಿಂದುಂಟಾಗುವ ಭೂಮಿ(Earth), ಜಲ(Water) ಮತ್ತು ವಾಯುಮಾಲಿನ್ಯಗಳನ್ನು(Air polution) ತಡೆಯುವುದು ಅತ್ಯವಶ್ಯಕವಾಗಿದೆ.

ಕೃತಕವಾಗಿ ತಯಾರಿಸಲ್ಪಟ್ಟ ಪೆಟ್ರೋಲಿಯಂ ರಾಸಾಯನಿಕ ವಸ್ತುಗಳಿಂದ ಪ್ಲಾಸ್ಟಿಕ್ ರಚಿತವಾಗಿದ್ದು, ಇದನ್ನು ಸುಟ್ಟಾಗ ಅಥವಾ ಕರಗಿಸಿದಾಗ ಉಂಟಾಗುವ ಹಾನಿಕಾರಕ ರಾಸಾಯನಿಕಗಳು ಪರಿಸರ ಮಾಲಿನ್ಯವನ್ನುಂಟುಮಾಡುತ್ತವೆ. ಇತ್ತೀಚೆಗೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ಅತಿ ಹೆಚ್ಚಾಗಿದ್ದು, ಪ್ಲಾಸ್ಟಿಕ್ ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಇದನ್ನೀಗ ಮನುಜರಾದ ನಾವೇ ತಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಒಂದು ಸಣ್ಣ ಪ್ರಯತ್ನವೂ ಸಾಕಾಗುತ್ತದೆ. ಇಲ್ಲಿ ನೋಡಿ

Advertisement

ಇಷ್ಟೇನಾ ಅಂತ ಕೇಳ್ಬೇಡಿ ಮೊದಲೇ ಹೇಳಿ ಬಿಡುತ್ತೇನೆ… ವಿಷಯ ಸಿಂಪಲ್,,,, 10 ರೂಪಾಯಿ ಮಜೂರಿ ಅಷ್ಟೇ… ನಮ್ಮ ಬೊಳುವಾರಿನಲ್ಲಿ ಭಾಸ್ಕರಣ್ಣ ಅಂತ ಹಿರಿಯ ಟೈಲರ್ ಒಬ್ಬರು ಇದ್ದಾರೆ.  ವಯಸ್ಸು ಅಂದಾಜು 70 ರ ಆಸುಪಾಸು ಮೊದಲೆಲ್ಲಾ ತುಂಬಾ ಕೆಲಸ ಸಿಗುತ್ತಿತ್ತು. ಆದರೆ ಈಗ ಈ ರೆಡಿಮೇಡ್ ಬಟ್ಟೆಗಳಿಗೆ ಬೇಡಿಕೆ ಹೆಚ್ಚು ಇರುವುದರಿಂದ  ಈ ಬಟ್ಟೆ ಖರೀದಿ ಮಾಡಿ ಅದನ್ನು ಟೈಲರಗಳಿಗೆ ಹೊಲಿಯಲು ಕೊಡುವುದು ಜನರಿಗೆ ಕಾಯುವಷ್ಟು ಪುರುಸೋತ್ತು ಇಲ್ಲ,(ನನ್ನನ್ನು ಸೇರಿಸಿ)
ಒಂದು ಸಣ್ಣ ಕೆಲಸ, 10 ಮೀಟರ್ ಬಟ್ಟೆ (ಮೀಟರಿಗೆ 20ರೂಪಾಯಿ) ಖರೀದಿ ಮಾಡಿ 20 ಕೈಚೀಲ ಹೊಲಿದು ಕೊಡುತ್ತೀರಂತಾ ಕೇಳಿದೆ. ಒಂದು ಚೀಲ ಹೊಲಿದ ಮಜೂರಿ 10 ರೂಪಾಯಿ ಕೊಡುತ್ತೇನೆ ಹೇಗೆ ಕೆಲಸ ಮಾಡುತ್ತೀರಂತ ಕೇಳಿದೆ, ಸರಿ ಮಲ್ಯರೇ ಎಂದು ಕೆಲಸ ಶುರುಮಾಡಿದರು. ನೋಡಿ ಚೀಲ ಹೇಗಿದೆ.. ? ಸ್ವಲ್ಪ ತಾಳ್ಮೆ ಬೇಕು ಅಷ್ಟೇ..

ಈ ವಿಷಯದಲ್ಲಿ ಇನ್ನು ಈ ಚೀಲದ ಉಪಯೋಗ ಹೇಗಂತ ಕೇಳುತ್ತೀರಾ…. ನಾನೊಂದ ಪುಟ್ಟದಾದ ಜನರಲ್ ಸ್ಟೋರ್ ಅಂಗಡಿ ವ್ಯಾಪಾರ ಮಾಡಿಕೊಂಡಿದ್ದೇನೆ. ನನ್ನಲ್ಲಿ ನಿತ್ಯ ವ್ಯಾಪಾರಕ್ಕೆ ಬರುವಂತಾಹ ಗ್ರಾಹಕರೀಗೆ (300 ಮೇಲ್ಪಟ್ಟ ವ್ಯಾಪಾರಕ್ಕೆ) ಇದನ್ನು ನೀಡುತ್ತಿದ್ದೇನೆ. 500, 300 ರೂಪಾಯಿ ಖರೀದಿಗೆ ಬಿಲ್ನಲ್ಲಿ 5%10% ಡಿಸ್ಕೌಂಟ್ ಮಾಡುವ ಬದಲು ಇಂತಾಹ ಚೀಲಗಳನ್ನು ನಮ್ಮ ಆಸುಪಾಸಿನ ಈ ವಿಷಯದಲ್ಲಿ ಆಸಕ್ತಿ ಇರುವ ಟೈಲರಗಳಲ್ಲಿ ಹೊಲಿಯಲು ನೀಡಿ. ಅವರೀಗೂ ಕೆಲಸ ಆಗುತ್ತದೆ. ಪ್ಲಾಸ್ಟಿಕ್ ನಿಂದ ಸ್ವಲ್ಪ ಮುಕ್ತಿ ಸಿಗಬಹುದು.

Advertisement
ಬರಹ :
ಕಿರಣ ಶಂಕರ ಮಲ್ಯ
, ಸ್ವಚ್ಚಪುತ್ತೂರು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago