Advertisement
ಸುದ್ದಿಗಳು

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

Share

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ ಸಾಕು ಎಂದೆನಿಸಿ ಬಿಡುತ್ತದೆ. ಹಾಗೆಯೇ ನಾವು ಆರೋಗ್ಯವಾಗಿ ಇದ್ದೇವೆ ಎಂದು ಬೇರೆ ಯಾರೂ ಹೇಳಬೇಕಾಗಿಲ್ಲ. ನಮ್ಮ ದೇಹವೇ ಕೆಲವೊಂದು ಸಂಕೇತದ ಮೂಲಕ ತಿಳಿಸಿಕೊಡುತ್ತದೆ. ಈ ಸಂಕೇತವೂ ನಮಗೆ ತಿಳಿದರೆ ಸಾಕು. ಆರೋಗ್ಯದ ಬಗ್ಗೆ ಚಿಂತಿಸುವ ಅಗತ್ಯವಿರುವುದಿಲ್ಲ.

ಯಾವೆಲ್ಲಾ ಸಂಕೇತಗಳೆಂದರೆ: 

  • ಬೆಳಗ್ಗೆ ತಾಜಾತನದಿಂದ ಏಳುವುದು: ಉಲ್ಲಾಸದಿಂದ ಬೆಳಿಗ್ಗೆ ಯಾರೂ ಏಳುತ್ತಾರೋ ಅವರೇ ಆರೋಗ್ಯವಂತರು. ಏಕೆಂದರೆ ದೇಹವು ಆರೋಗ್ಯವಾಗಿದೆ ಎಂಬುದನ್ನು ಸೂಚಿಸುವಲ್ಲಿ ನಿದ್ರೆ ಒಂದು. ರಾತ್ರಿ ಗುಣಮಟ್ಟದ ನಿದ್ರೆಯು ಆರೋಗ್ಯದ ರೋಗ ನಿರೋಧಕ ಶಕ್ತಿಯನ್ನು ಸೂಚಿಸುತ್ತದೆ.
  • ಸರಿಯಾದ ಮಲವಿಸರ್ಜನೆ ಹಾಗೂ ಸ್ವಚ್ಛವಾದ ಮೂತ್ರ: ಬೆಳಿಗ್ಗಿನ ಮೂತ್ರವೂ ಸ್ಚಚ್ಛವಾಗಿದ್ದರೆ ಕಿಡ್ನಿಯೂ ಉತ್ತಮ ಕಾರ್ಯನಿರ್ವಹಣೆ ಮಾಡುತ್ತಿದೆ ಎಂದರ್ಥ. ಹಾಗೂ ಯಾವುದೇ ತೊಂದರೆ ಇಲ್ಲದೆ ಮಲವಿಸರ್ಜನೆ ಸಾಧ್ಯವಾದರೆ ಅದು ಕರುಳಿನ ಉತ್ತಮ ಕಾರ್ಯನಿರ್ವಹಣೆ ಹಾಗೂ ಜೀರ್ಣಾಂಗ ವ್ಯವಸ್ಥೆಯ ಉತ್ತಮ ಸ್ಥಿತಿಯನ್ನು ಸೂಚಿಸುತ್ತದೆ.
  • ಗಾಯ: ದೇಹಕ್ಕೆ ಆಗುವ ಗಾಯವೂ ಬೇಗನೆ ವಾಸಿಯಾದರೆ ನಮ್ಮ ದೇಹವೂ ರೋಗನಿರೋಧಕ ಶಕ್ತಿ ಹಾಗೂ ನಾವು ಸರಿಯಾದ ಪೋಷಕಾಂಶಗಳನ್ನು ಸೇವಿಸುತ್ತಿದ್ದೇವೆ ಎಂಬುದರ ಸಂಕೇತವಾಗಿದೆ.
  • ಚರ್ಮದ ಆರೋಗ್ಯ: ನಮ್ಮ ಚರ್ಮವೂ ಆರೋಗ್ಯಕರವಾಗಿ ಕಾಂತಿಯುತವಾಗಿದೆ ಎಂದರೆ ನಮ್ಮ ದೇಹಕ್ಕೆ ಸರಿಯಾದ ಜಲಸಂಚಯನವಾಗುತ್ತಿದೆ ಎಂದರ್ಥ.
  • ಆಯಾಸವಿಲ್ಲದ ನಡೆ: ವೇಗಾಗಿ ನಡೆಯುವಾಗ ಬೇಗನೆ ಆಯಾಸವಾಗುವುದಿಲ್ಲ ಎಂದರೆ ರಕ್ತ ಪರಿಚಲನೆ, ನರವ್ಯೂಹ, ಸ್ನಾಯುಗಳು ಆರೋಗ್ಯ ಉತ್ತಮವಾಗಿದೆ ಎಂಬುದನ್ನು ಇದು ಸೂಚಿಸುತ್ತದೆ.
  • ಸ್ಮರಣಶಕ್ತಿ: ಸ್ಮರಣಶಕ್ತಿ ಉತ್ತಮವಾಗಿದ್ದರೆ ಮೆದುಳಿನ ಸರಿಯಾದ ಕಾರ್ಯನಿರ್ವಹಣೆಯನ್ನು ಸೂಚಿಸುತ್ತದೆ.
  • ಸ್ಥಿರವಾದ ಉಸಿರಾಟ: ಸಾಮಾನ್ಯ ಹಾಗೂ ಸ್ಥಿರವಾದ ಉಸಿರಾಟದ ಮಾದರಿ ಆರೋಗ್ಯಕರ ಉಸಿರಾಟದ ವ್ಯವಸ್ಥೆಯನ್ನು ಸೂಚಿಸುತ್ತದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

2 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

4 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

13 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

14 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

14 hours ago