Advertisement
ಸುದ್ದಿಗಳು

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

Share

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ ಸಾಕು ಎಂದೆನಿಸಿ ಬಿಡುತ್ತದೆ. ಹಾಗೆಯೇ ನಾವು ಆರೋಗ್ಯವಾಗಿ ಇದ್ದೇವೆ ಎಂದು ಬೇರೆ ಯಾರೂ ಹೇಳಬೇಕಾಗಿಲ್ಲ. ನಮ್ಮ ದೇಹವೇ ಕೆಲವೊಂದು ಸಂಕೇತದ ಮೂಲಕ ತಿಳಿಸಿಕೊಡುತ್ತದೆ. ಈ ಸಂಕೇತವೂ ನಮಗೆ ತಿಳಿದರೆ ಸಾಕು. ಆರೋಗ್ಯದ ಬಗ್ಗೆ ಚಿಂತಿಸುವ ಅಗತ್ಯವಿರುವುದಿಲ್ಲ.

ಯಾವೆಲ್ಲಾ ಸಂಕೇತಗಳೆಂದರೆ: 

  • ಬೆಳಗ್ಗೆ ತಾಜಾತನದಿಂದ ಏಳುವುದು: ಉಲ್ಲಾಸದಿಂದ ಬೆಳಿಗ್ಗೆ ಯಾರೂ ಏಳುತ್ತಾರೋ ಅವರೇ ಆರೋಗ್ಯವಂತರು. ಏಕೆಂದರೆ ದೇಹವು ಆರೋಗ್ಯವಾಗಿದೆ ಎಂಬುದನ್ನು ಸೂಚಿಸುವಲ್ಲಿ ನಿದ್ರೆ ಒಂದು. ರಾತ್ರಿ ಗುಣಮಟ್ಟದ ನಿದ್ರೆಯು ಆರೋಗ್ಯದ ರೋಗ ನಿರೋಧಕ ಶಕ್ತಿಯನ್ನು ಸೂಚಿಸುತ್ತದೆ.
  • ಸರಿಯಾದ ಮಲವಿಸರ್ಜನೆ ಹಾಗೂ ಸ್ವಚ್ಛವಾದ ಮೂತ್ರ: ಬೆಳಿಗ್ಗಿನ ಮೂತ್ರವೂ ಸ್ಚಚ್ಛವಾಗಿದ್ದರೆ ಕಿಡ್ನಿಯೂ ಉತ್ತಮ ಕಾರ್ಯನಿರ್ವಹಣೆ ಮಾಡುತ್ತಿದೆ ಎಂದರ್ಥ. ಹಾಗೂ ಯಾವುದೇ ತೊಂದರೆ ಇಲ್ಲದೆ ಮಲವಿಸರ್ಜನೆ ಸಾಧ್ಯವಾದರೆ ಅದು ಕರುಳಿನ ಉತ್ತಮ ಕಾರ್ಯನಿರ್ವಹಣೆ ಹಾಗೂ ಜೀರ್ಣಾಂಗ ವ್ಯವಸ್ಥೆಯ ಉತ್ತಮ ಸ್ಥಿತಿಯನ್ನು ಸೂಚಿಸುತ್ತದೆ.
  • ಗಾಯ: ದೇಹಕ್ಕೆ ಆಗುವ ಗಾಯವೂ ಬೇಗನೆ ವಾಸಿಯಾದರೆ ನಮ್ಮ ದೇಹವೂ ರೋಗನಿರೋಧಕ ಶಕ್ತಿ ಹಾಗೂ ನಾವು ಸರಿಯಾದ ಪೋಷಕಾಂಶಗಳನ್ನು ಸೇವಿಸುತ್ತಿದ್ದೇವೆ ಎಂಬುದರ ಸಂಕೇತವಾಗಿದೆ.
  • ಚರ್ಮದ ಆರೋಗ್ಯ: ನಮ್ಮ ಚರ್ಮವೂ ಆರೋಗ್ಯಕರವಾಗಿ ಕಾಂತಿಯುತವಾಗಿದೆ ಎಂದರೆ ನಮ್ಮ ದೇಹಕ್ಕೆ ಸರಿಯಾದ ಜಲಸಂಚಯನವಾಗುತ್ತಿದೆ ಎಂದರ್ಥ.
  • ಆಯಾಸವಿಲ್ಲದ ನಡೆ: ವೇಗಾಗಿ ನಡೆಯುವಾಗ ಬೇಗನೆ ಆಯಾಸವಾಗುವುದಿಲ್ಲ ಎಂದರೆ ರಕ್ತ ಪರಿಚಲನೆ, ನರವ್ಯೂಹ, ಸ್ನಾಯುಗಳು ಆರೋಗ್ಯ ಉತ್ತಮವಾಗಿದೆ ಎಂಬುದನ್ನು ಇದು ಸೂಚಿಸುತ್ತದೆ.
  • ಸ್ಮರಣಶಕ್ತಿ: ಸ್ಮರಣಶಕ್ತಿ ಉತ್ತಮವಾಗಿದ್ದರೆ ಮೆದುಳಿನ ಸರಿಯಾದ ಕಾರ್ಯನಿರ್ವಹಣೆಯನ್ನು ಸೂಚಿಸುತ್ತದೆ.
  • ಸ್ಥಿರವಾದ ಉಸಿರಾಟ: ಸಾಮಾನ್ಯ ಹಾಗೂ ಸ್ಥಿರವಾದ ಉಸಿರಾಟದ ಮಾದರಿ ಆರೋಗ್ಯಕರ ಉಸಿರಾಟದ ವ್ಯವಸ್ಥೆಯನ್ನು ಸೂಚಿಸುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

4 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

7 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

8 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

11 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

12 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

15 hours ago