Advertisement
ಸುದ್ದಿಗಳು

#AgriTourism | ಕೃಷಿ ಪ್ರವಾಸೋದ್ಯಮಕ್ಕೆ ಕಾಯಕಲ್ಪ | ಆಸಕ್ತರು ತಡಮಾಡದೆ ಹೆಸರು ನೊಂದಾಯಿಸಿ, ಭಾಗಿಯಾಗಿ…|

Share

ಇತ್ತೀಚೆಗೆ ಕೃಷಿ ಪ್ರವಾಸೋದ್ಯಮ #Agritourism ಬೆಳವಣಿಗೆಯತ್ತ ಸಾಗುತ್ತಿದೆ. ಸರ್ಕಾರದ ಕಡೆಯಿಂದ ಅಲ್ಲದಿದ್ರು, ಕೃಷಿಕರೇ ಸೇರಿ ಈ ಪರಿಕಲ್ಪನೆಯನ್ನು ಬೆಳವಣಿಗೆಯ ಕಡೆ ಕೊಂಡೊಯ್ಯಿತ್ತಿದ್ದಾರೆ. ರೈತರು ಕೃಷಿಯನ್ನೇ ನಂಬಿ ಬದುಕುತ್ತಿರುವುದರಿಂದ ಮುಂದೆ ಇದರ ಅಗತ್ಯ ಬಹಳ ಇದೆ. ಈ ದೃಷ್ಟಿಯನ್ನು ಇಟ್ಟುಕೊಂಡು ಎಲ್ಲರು ಒಂದುಗೂಡಿ ಕೃಷಿ ಮತ್ತು ಗ್ರಾಮೀಣ ಕ್ಷೇತ್ರಗಳ ಸಬಲೀಕರಣದ ಪರಿಕಲ್ಪನೆಯನ್ನು ಹುಟ್ಟು ಹಾಕುತ್ತಿದ್ದಾರೆ. ಈ ಪ್ರಯುಕ್ತ ಮೈಸೂರಿನಲ್ಲಿ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಇದರ ಸದುಪಯೋಗವನ್ನು ಎಲ್ಲಾ ಆಸಕ್ತ ರೈತರು ಪಡೆದುಕೊಳ್ಳಬಹುದು. ಈ ಕೃಷಿ ಪ್ರವಾಸೋದ್ಯಮದ ಬೆಳವಣಿಗೆಗೆ ತಮ್ಮನ್ನು ತಾವು ತೊಡಗಿಸಿಕೊಳ್ಳಬಹುದು.

  • ಕೃಷಿ ಪ್ರವಾಸೋದ್ಯಮ ಅಂದರೇನು?
  • ಕೃಷಿ ಪ್ರವಾಸೋದ್ಯಮದ ಉದ್ದೇಶಗಳೇನು?
  • ಕೃಷಿ ಪ್ರವಾಸೋದ್ಯಮದ ವ್ಯಾಪ್ತಿ.
  • ಕೃಷಿ ಪ್ರವಾಸೋದ್ಯಮದ ತತ್ವಗಳು.
  • ಕೃಷಿ ಪ್ರವಾಸೋದ್ಯಮದ ಅಂಶಗಳು.
  • ಕೃಷಿ ಪ್ರವಾಸೋದ್ಯಮದ ಅವಶ್ಯಕತೆ ಏಕೆ?
  • ಕೃಷಿ ಪ್ರವಾಸೋದ್ಯಮದ ಸೇವೆ ಮತ್ತು ಚಟುವಟಿಕೆಗಳು.
  • ಕೃಷಿ ಪ್ರವಾಸೋದ್ಯಮ ಯಾರು ಪ್ರಾರಂಭಿಸಬಹುದು?
  • ಕೃಷಿ ಪ್ರವಾಸೋದ್ಯಮದ ನೀತಿ ನಿಯಮಗಳು ಹೇಗಿರಬೇಕು?
  • ಕೃಷಿ ಪ್ರವಾಸೋದ್ಯಮದ ಅವಕಾಶಗಳು ಮತ್ತು ಸವಾಲುಗಳು.
  • ಕೃಷಿ ಪ್ರವಾಸೋದ್ಯಮ ಕೇಂದ್ರಗಳ ಯಶಸ್ಸಿಗೆ ಪ್ರಮುಖ ಅಂಶಗಳು.
  • ಮಾದರಿ ಕೃಷಿ ಪ್ರವಾಸೋದ್ಯಮ ಕೇಂದ್ರಗಳ ವಿವರ.

ಮೇಲ್ಕಂಡ ವಿಚಾರಗಳ ಜೊತೆಗೆ ಕೃಷಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಗಳೊಂದಿಗೆ ಸೆಪ್ಟೆಂಬರ್ ತಿಂಗಳು ಮೈಸೂರಿನಲ್ಲಿ 03 ದಿನಗಳ ಕಾರ್ಯಗಾರ  ನಡೆಸುವ ಬಗ್ಗೆ ಉದ್ದೇಶಿಸಲಾಗಿದೆ.

ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಇಲಾಖೆಗೆ ಕಳೆದ 2023 ಜೂನ್ ತಿಂಗಳಿನಲ್ಲಿ ಕೃಷಿ ಪ್ರವಾಸೋದ್ಯಮ ನೀತಿ ರೂಪಿಸುವ ಸಂಬಂಧ ನೀಡಲಾದ ಮನವಿ ಮತ್ತು ವರದಿಯ ಅನುಸಾರ ಈಗಾಗಲೇ ಕೆಲಸಗಳು ಪ್ರಾರಂಭವಾಗಿರುತ್ತದೆ ಮತ್ತು ವಿವಿಧ ರಾಜ್ಯಗಳ ಪ್ರವಾಸೋದ್ಯಮ ನೀತಿ ಅಧ್ಯಾಯನ ಮಾಡಿ ನಮ್ಮ ರಾಜ್ಯಕ್ಕೆ ಸೂಕ್ತವಾಗುವ ನೀತಿ ರೂಪಿಸುವ ಕೆಲಸಗಳು ಪ್ರಗತಿಯಲ್ಲಿದೆ.

ಕಾರ್ಯಾಗಾರದಲ್ಲಿ ಪ್ರವಾಸೋದ್ಯಮ ಇಲಾಖೆಯವರು,ಕೃಷಿ ಪ್ರವಾಸೋದ್ಯಮ ನೆಡೆಸುತ್ತಿರುವ ಕೃಷಿಕರು,ಕೇಂದ್ರ ಪ್ರಾರಂಭ ಮಾಡಲು ಸಿದ್ಧತೆ ಮಾಡಿಕೊಂಡಿರುವ ಮತ್ತು ಪ್ರಾರಂಭ ಮಾಡಲು ಆಸಕ್ತಿ ಹೊಂದಿರುವ ಕೃಷಿಕರು, ಪ್ರವಾಸಿ ನಿರ್ವಾಹಕರು, ಕೃಷಿ/ತೋಟಗಾರಿಕೆ ಇಲಾಖೆಯವರು,ಸಂಪನ್ಮೂಲ ವ್ಯಕ್ತಿಗಳು ಹೀಗೆ ಸಂಬಂಧಪಟ್ಟವರೊಂದಿಗೆ ವಿಚಾರಗಳನ್ನು ಚರ್ಚಿಸುವುದು ಮತ್ತು ಕಾರ್ಯಗತ ಮಾಡುವ ಬಗ್ಗೆ ತೆಗೆದುಕೊಳ್ಳಬೇಕಾದ ಜವಾಬ್ದಾರಿಗಳು,ಇತ್ಯಾದಿ ಕಾರ್ಯಗಾರದ ಉದ್ದೇಶವಾಗಿರುತ್ತದೆ.

ಕೃಷಿ ಪ್ರವಾಸೋದ್ಯಮ ಕೇಂದ್ರ ಪ್ರಾರಂಭ ಮಾಡಲು ಮತ್ತು ಕಾರ್ಯಾಗಾರದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವವರು ಸಂಪರ್ಕಿಸಲು ಕೋರಲಾಗಿದೆ.

ಪ್ರಶಾಂತ್ ಜಯರಾಮ್, ಕೃಷಿಕರು & ಕೃಷಿ ಸಲಹೆಗಾರರು , ಮೊಬೈಲ್ :9342434530

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

5 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

6 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

15 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

16 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

24 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

1 day ago