ಚಿತ್ತೂರು ವಿವಿಧ ಮಾವಿನಹಣ್ಣುಗಳಿಗೆ ಹೆಸರುವಾಸಿಯಾದ ಊರಾಗಿದೆ. ಚಿತ್ತೂರು ಮಾವಿನ ಹಣ್ಣು ಗುಣಮಟ್ಟದಲ್ಲೂ ಶ್ರೇಷ್ಟವಾಗಿದೆ. ಹೀಗಾಗಿ ದೇಶದಾದ್ಯಂತದ ವ್ಯಾಪಾರಿಗಳಿಗೂ, ಗ್ರಾಹಕರಿಗೂ ಹೆಚ್ಚು ಬೇಡಿಕೆ ಇರುವ ಮಾವು. ಆದರೆ ಈ ಬಾರಿ ಹವಾಮಾನ ವೈಪರೀತ್ಯದಿಂದಾಗಿ ಮಾವಿನ ಕೃಷಿಯ ಮೇಲೆ ಪರಿಣಾಮವನ್ನು ಬೀರಿದೆ. ಹೂ ಬಿಡುವ ಹಂತದಲ್ಲಿ ವಿಳಂಬವಾಗಿರುವುದರಿಂದ ಈ ವರ್ಷ ಸಾಮಾನ್ಯ 7.9 ಲಕ್ಷ ಟನ್ ಇಳುವರಿ ಕಡಿಮೆಯಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಮುಂಬರುವ ಬೇಸಿಗೆಯಲ್ಲಿ ಚಿತ್ತೂರು ಜಿಲ್ಲೆಯ ರೈತರು 4.5 ಲಕ್ಷ ಟನ್ ತೋತಾಪುರಿ ತಳಿಯ ಮಾವಿನ ಇಳುವರಿ ನಿರೀಕ್ಷೆಯಲ್ಲಿದ್ದಾರೆ. ಆದರೆ ಹವಾಮಾನ ಪರಿಸ್ಥಿತಿಗಳಲ್ಲಿನ ಬದಲಾವಣೆಯಿಂದಾಗಿ ಈ ನಿರ್ದಿಷ್ಟ ವಿಧದ ತಳಿಯಲ್ಲಿ ಇಳುವರಿಯಲ್ಲಿನ ಕುಸಿತ ಕಾಣುತ್ತಿದೆ. ಸುಮಾರು 70,000 ಹೆಕ್ಟೇರ್ ಪ್ರದೇಶದಲ್ಲಿ ರೈತರು ತೋತಾಪುರಿ ತಳಿಯ ಮಾವು ಬೆಳೆಸಿದ್ದಾರೆ. ಮಾವಿನ ಇಳುವರಿ ಕಡಿಮೆಯಾದರೆ ಕೆಲವು ಉದ್ಯಮಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಬಂಗಾರುಪಾಳ್ಯಂ ಪ್ರದೇಶದ ರೈತ ಕೆ. ವೀರಸ್ವಾಮಿ ಹೇಳಿದ್ದಾರೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…