ಚಿತ್ತೂರು ವಿವಿಧ ಮಾವಿನಹಣ್ಣುಗಳಿಗೆ ಹೆಸರುವಾಸಿಯಾದ ಊರಾಗಿದೆ. ಚಿತ್ತೂರು ಮಾವಿನ ಹಣ್ಣು ಗುಣಮಟ್ಟದಲ್ಲೂ ಶ್ರೇಷ್ಟವಾಗಿದೆ. ಹೀಗಾಗಿ ದೇಶದಾದ್ಯಂತದ ವ್ಯಾಪಾರಿಗಳಿಗೂ, ಗ್ರಾಹಕರಿಗೂ ಹೆಚ್ಚು ಬೇಡಿಕೆ ಇರುವ ಮಾವು. ಆದರೆ ಈ ಬಾರಿ ಹವಾಮಾನ ವೈಪರೀತ್ಯದಿಂದಾಗಿ ಮಾವಿನ ಕೃಷಿಯ ಮೇಲೆ ಪರಿಣಾಮವನ್ನು ಬೀರಿದೆ. ಹೂ ಬಿಡುವ ಹಂತದಲ್ಲಿ ವಿಳಂಬವಾಗಿರುವುದರಿಂದ ಈ ವರ್ಷ ಸಾಮಾನ್ಯ 7.9 ಲಕ್ಷ ಟನ್ ಇಳುವರಿ ಕಡಿಮೆಯಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಮುಂಬರುವ ಬೇಸಿಗೆಯಲ್ಲಿ ಚಿತ್ತೂರು ಜಿಲ್ಲೆಯ ರೈತರು 4.5 ಲಕ್ಷ ಟನ್ ತೋತಾಪುರಿ ತಳಿಯ ಮಾವಿನ ಇಳುವರಿ ನಿರೀಕ್ಷೆಯಲ್ಲಿದ್ದಾರೆ. ಆದರೆ ಹವಾಮಾನ ಪರಿಸ್ಥಿತಿಗಳಲ್ಲಿನ ಬದಲಾವಣೆಯಿಂದಾಗಿ ಈ ನಿರ್ದಿಷ್ಟ ವಿಧದ ತಳಿಯಲ್ಲಿ ಇಳುವರಿಯಲ್ಲಿನ ಕುಸಿತ ಕಾಣುತ್ತಿದೆ. ಸುಮಾರು 70,000 ಹೆಕ್ಟೇರ್ ಪ್ರದೇಶದಲ್ಲಿ ರೈತರು ತೋತಾಪುರಿ ತಳಿಯ ಮಾವು ಬೆಳೆಸಿದ್ದಾರೆ. ಮಾವಿನ ಇಳುವರಿ ಕಡಿಮೆಯಾದರೆ ಕೆಲವು ಉದ್ಯಮಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಬಂಗಾರುಪಾಳ್ಯಂ ಪ್ರದೇಶದ ರೈತ ಕೆ. ವೀರಸ್ವಾಮಿ ಹೇಳಿದ್ದಾರೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…