ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತ್ಯು |

October 31, 2023
11:16 PM
ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.

ಜೀವನ ಕಟ್ಟಿಕೊಳ್ಳಲು ಬಂದ ಕಾರ್ಮಿಕರು ಮಡಿಕೇರಿಯಲ್ಲಿ ಬದುಕನ್ನೇ ಕಳೆದುಕೊಂಡಿದ್ದಾರೆ. ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ (Hill Collapse) ಪರಿಣಾಮ ಮೂವರು ಕೂಲಿ ಕಾರ್ಮಿಕರು (Labourers) ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ (Madikeri) ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.

Advertisement
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿವಾಸಿಗಳಾದ ಬಸಪ್ಪ, ನಿಂಗಪ್ಪ ಹಾಗೂ ಆನಂದ ಮೃತ ದುರ್ದೈವಿಗಳು. ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಗುಡ್ಡ ಕುಸಿದಿದೆ. ಈ ಘಟನೆಯಿಂದ ಐವರು ಕೆಲಸ ಮಾಡುವ ಸಂದರ್ಭ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಅದೃಷ್ಟವಶಾತ್ ಕಾರ್ಮಿಕ ರಾಜು ಇತರ ಕಾರ್ಮಿಕರ ಸಹಕಾರದಿಂದ ಮೇಲೆ ಬಂದು ಜೀವ ಉಳಿಸಿಕೊಂಡಿದ್ದಾರೆ. ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡ ಪರಿಣಾಮ ಮೇಲೆ ಬರಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ.

ದುರ್ಘಟನೆ ವೇಳೆ ಸುಮಾರು 8 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊಡಗು ಎಸ್‌ಪಿ ರಾಮರಾಜನ್, ಮಡಿಕೇರಿ ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜು ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾತಾನಾಡಿದ ಎಸ್‌ಪಿ ರಾಮರಾಜನ್, ಇಂದು 15 ಅಡ್ಡಿ ಎತ್ತರದ ತಡೆಗೋಡೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಗುಡ್ಡ ಕುಸಿದು, ಕಾರ್ಮಿಕರ ಮೇಲೆ ಬಿದ್ದಿದೆ. ಅದರಲ್ಲಿ 4 ಜನರ ಮೇಲೆ ಮಣ್ಣು ಬಿದ್ದಿದೆ. ಒಬ್ಬರನ್ನು ಅಲ್ಲಿನ ಸಿಬ್ಬಂದಿಯೇ ರಕ್ಷಣೆ ಮಾಡಿದ್ದಾರೆ. ಉಳಿದ ಮೂವರು 1 ಗಂಟೆ ಕಾಲ ಮಣ್ಣಿನಡಿ ಸಿಲುಕಿದ್ದರು. ಅವರನ್ನು ರಕ್ಷಿಸಲು ಎಲ್ಲರೂ ನಿರಂತರವಾಗಿ ಶ್ರಮಿಸಿದರು ಎಂದು ಹೇಳಿದರು.

The incident took place in Stewart Hill area of ​​Madikeri city where three laborers got trapped under the soil due to a hill collapse during the construction work.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು
April 10, 2025
9:58 AM
by: The Rural Mirror ಸುದ್ದಿಜಾಲ
ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |
April 10, 2025
8:13 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ
April 10, 2025
7:46 AM
by: ದ ರೂರಲ್ ಮಿರರ್.ಕಾಂ
ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ
April 10, 2025
7:35 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group