ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತ್ಯು |

October 31, 2023
11:16 PM
ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.

ಜೀವನ ಕಟ್ಟಿಕೊಳ್ಳಲು ಬಂದ ಕಾರ್ಮಿಕರು ಮಡಿಕೇರಿಯಲ್ಲಿ ಬದುಕನ್ನೇ ಕಳೆದುಕೊಂಡಿದ್ದಾರೆ. ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ (Hill Collapse) ಪರಿಣಾಮ ಮೂವರು ಕೂಲಿ ಕಾರ್ಮಿಕರು (Labourers) ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ (Madikeri) ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.

Advertisement
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿವಾಸಿಗಳಾದ ಬಸಪ್ಪ, ನಿಂಗಪ್ಪ ಹಾಗೂ ಆನಂದ ಮೃತ ದುರ್ದೈವಿಗಳು. ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಗುಡ್ಡ ಕುಸಿದಿದೆ. ಈ ಘಟನೆಯಿಂದ ಐವರು ಕೆಲಸ ಮಾಡುವ ಸಂದರ್ಭ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಅದೃಷ್ಟವಶಾತ್ ಕಾರ್ಮಿಕ ರಾಜು ಇತರ ಕಾರ್ಮಿಕರ ಸಹಕಾರದಿಂದ ಮೇಲೆ ಬಂದು ಜೀವ ಉಳಿಸಿಕೊಂಡಿದ್ದಾರೆ. ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡ ಪರಿಣಾಮ ಮೇಲೆ ಬರಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ.

ದುರ್ಘಟನೆ ವೇಳೆ ಸುಮಾರು 8 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊಡಗು ಎಸ್‌ಪಿ ರಾಮರಾಜನ್, ಮಡಿಕೇರಿ ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜು ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾತಾನಾಡಿದ ಎಸ್‌ಪಿ ರಾಮರಾಜನ್, ಇಂದು 15 ಅಡ್ಡಿ ಎತ್ತರದ ತಡೆಗೋಡೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಗುಡ್ಡ ಕುಸಿದು, ಕಾರ್ಮಿಕರ ಮೇಲೆ ಬಿದ್ದಿದೆ. ಅದರಲ್ಲಿ 4 ಜನರ ಮೇಲೆ ಮಣ್ಣು ಬಿದ್ದಿದೆ. ಒಬ್ಬರನ್ನು ಅಲ್ಲಿನ ಸಿಬ್ಬಂದಿಯೇ ರಕ್ಷಣೆ ಮಾಡಿದ್ದಾರೆ. ಉಳಿದ ಮೂವರು 1 ಗಂಟೆ ಕಾಲ ಮಣ್ಣಿನಡಿ ಸಿಲುಕಿದ್ದರು. ಅವರನ್ನು ರಕ್ಷಿಸಲು ಎಲ್ಲರೂ ನಿರಂತರವಾಗಿ ಶ್ರಮಿಸಿದರು ಎಂದು ಹೇಳಿದರು.

The incident took place in Stewart Hill area of ​​Madikeri city where three laborers got trapped under the soil due to a hill collapse during the construction work.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊಕ್ಕೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ
February 19, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ
February 18, 2026
10:36 PM
by: ಸಾಯಿಶೇಖರ್ ಕರಿಕಳ
ಅಡಿಕೆ ವೈಜ್ಞಾನಿಕ ವಿಶ್ಲೇಷಣೆಯ ಪುಸ್ತಕ “ARECANUT” ಬಿಡುಗಡೆ
February 18, 2026
10:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror