Advertisement
ಸುದ್ದಿಗಳು

ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತ್ಯು |

Share

ಜೀವನ ಕಟ್ಟಿಕೊಳ್ಳಲು ಬಂದ ಕಾರ್ಮಿಕರು ಮಡಿಕೇರಿಯಲ್ಲಿ ಬದುಕನ್ನೇ ಕಳೆದುಕೊಂಡಿದ್ದಾರೆ. ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ (Hill Collapse) ಪರಿಣಾಮ ಮೂವರು ಕೂಲಿ ಕಾರ್ಮಿಕರು (Labourers) ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ (Madikeri) ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿವಾಸಿಗಳಾದ ಬಸಪ್ಪ, ನಿಂಗಪ್ಪ ಹಾಗೂ ಆನಂದ ಮೃತ ದುರ್ದೈವಿಗಳು. ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಗುಡ್ಡ ಕುಸಿದಿದೆ. ಈ ಘಟನೆಯಿಂದ ಐವರು ಕೆಲಸ ಮಾಡುವ ಸಂದರ್ಭ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಅದೃಷ್ಟವಶಾತ್ ಕಾರ್ಮಿಕ ರಾಜು ಇತರ ಕಾರ್ಮಿಕರ ಸಹಕಾರದಿಂದ ಮೇಲೆ ಬಂದು ಜೀವ ಉಳಿಸಿಕೊಂಡಿದ್ದಾರೆ. ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡ ಪರಿಣಾಮ ಮೇಲೆ ಬರಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ.

ದುರ್ಘಟನೆ ವೇಳೆ ಸುಮಾರು 8 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊಡಗು ಎಸ್‌ಪಿ ರಾಮರಾಜನ್, ಮಡಿಕೇರಿ ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜು ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾತಾನಾಡಿದ ಎಸ್‌ಪಿ ರಾಮರಾಜನ್, ಇಂದು 15 ಅಡ್ಡಿ ಎತ್ತರದ ತಡೆಗೋಡೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಗುಡ್ಡ ಕುಸಿದು, ಕಾರ್ಮಿಕರ ಮೇಲೆ ಬಿದ್ದಿದೆ. ಅದರಲ್ಲಿ 4 ಜನರ ಮೇಲೆ ಮಣ್ಣು ಬಿದ್ದಿದೆ. ಒಬ್ಬರನ್ನು ಅಲ್ಲಿನ ಸಿಬ್ಬಂದಿಯೇ ರಕ್ಷಣೆ ಮಾಡಿದ್ದಾರೆ. ಉಳಿದ ಮೂವರು 1 ಗಂಟೆ ಕಾಲ ಮಣ್ಣಿನಡಿ ಸಿಲುಕಿದ್ದರು. ಅವರನ್ನು ರಕ್ಷಿಸಲು ಎಲ್ಲರೂ ನಿರಂತರವಾಗಿ ಶ್ರಮಿಸಿದರು ಎಂದು ಹೇಳಿದರು.

The incident took place in Stewart Hill area of ​​Madikeri city where three laborers got trapped under the soil due to a hill collapse during the construction work.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 hour ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

2 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

2 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

12 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

18 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

18 hours ago