Advertisement
ಸುದ್ದಿಗಳು

ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತ್ಯು |

Share

ಜೀವನ ಕಟ್ಟಿಕೊಳ್ಳಲು ಬಂದ ಕಾರ್ಮಿಕರು ಮಡಿಕೇರಿಯಲ್ಲಿ ಬದುಕನ್ನೇ ಕಳೆದುಕೊಂಡಿದ್ದಾರೆ. ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ (Hill Collapse) ಪರಿಣಾಮ ಮೂವರು ಕೂಲಿ ಕಾರ್ಮಿಕರು (Labourers) ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ (Madikeri) ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿವಾಸಿಗಳಾದ ಬಸಪ್ಪ, ನಿಂಗಪ್ಪ ಹಾಗೂ ಆನಂದ ಮೃತ ದುರ್ದೈವಿಗಳು. ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಗುಡ್ಡ ಕುಸಿದಿದೆ. ಈ ಘಟನೆಯಿಂದ ಐವರು ಕೆಲಸ ಮಾಡುವ ಸಂದರ್ಭ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಅದೃಷ್ಟವಶಾತ್ ಕಾರ್ಮಿಕ ರಾಜು ಇತರ ಕಾರ್ಮಿಕರ ಸಹಕಾರದಿಂದ ಮೇಲೆ ಬಂದು ಜೀವ ಉಳಿಸಿಕೊಂಡಿದ್ದಾರೆ. ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡ ಪರಿಣಾಮ ಮೇಲೆ ಬರಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ.

ದುರ್ಘಟನೆ ವೇಳೆ ಸುಮಾರು 8 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊಡಗು ಎಸ್‌ಪಿ ರಾಮರಾಜನ್, ಮಡಿಕೇರಿ ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜು ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾತಾನಾಡಿದ ಎಸ್‌ಪಿ ರಾಮರಾಜನ್, ಇಂದು 15 ಅಡ್ಡಿ ಎತ್ತರದ ತಡೆಗೋಡೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಗುಡ್ಡ ಕುಸಿದು, ಕಾರ್ಮಿಕರ ಮೇಲೆ ಬಿದ್ದಿದೆ. ಅದರಲ್ಲಿ 4 ಜನರ ಮೇಲೆ ಮಣ್ಣು ಬಿದ್ದಿದೆ. ಒಬ್ಬರನ್ನು ಅಲ್ಲಿನ ಸಿಬ್ಬಂದಿಯೇ ರಕ್ಷಣೆ ಮಾಡಿದ್ದಾರೆ. ಉಳಿದ ಮೂವರು 1 ಗಂಟೆ ಕಾಲ ಮಣ್ಣಿನಡಿ ಸಿಲುಕಿದ್ದರು. ಅವರನ್ನು ರಕ್ಷಿಸಲು ಎಲ್ಲರೂ ನಿರಂತರವಾಗಿ ಶ್ರಮಿಸಿದರು ಎಂದು ಹೇಳಿದರು.

The incident took place in Stewart Hill area of ​​Madikeri city where three laborers got trapped under the soil due to a hill collapse during the construction work.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

2 days ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

3 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

4 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

4 days ago