Advertisement
ಸುದ್ದಿಗಳು

ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತ್ಯು |

Share

ಜೀವನ ಕಟ್ಟಿಕೊಳ್ಳಲು ಬಂದ ಕಾರ್ಮಿಕರು ಮಡಿಕೇರಿಯಲ್ಲಿ ಬದುಕನ್ನೇ ಕಳೆದುಕೊಂಡಿದ್ದಾರೆ. ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ (Hill Collapse) ಪರಿಣಾಮ ಮೂವರು ಕೂಲಿ ಕಾರ್ಮಿಕರು (Labourers) ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ (Madikeri) ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿವಾಸಿಗಳಾದ ಬಸಪ್ಪ, ನಿಂಗಪ್ಪ ಹಾಗೂ ಆನಂದ ಮೃತ ದುರ್ದೈವಿಗಳು. ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಗುಡ್ಡ ಕುಸಿದಿದೆ. ಈ ಘಟನೆಯಿಂದ ಐವರು ಕೆಲಸ ಮಾಡುವ ಸಂದರ್ಭ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಅದೃಷ್ಟವಶಾತ್ ಕಾರ್ಮಿಕ ರಾಜು ಇತರ ಕಾರ್ಮಿಕರ ಸಹಕಾರದಿಂದ ಮೇಲೆ ಬಂದು ಜೀವ ಉಳಿಸಿಕೊಂಡಿದ್ದಾರೆ. ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡ ಪರಿಣಾಮ ಮೇಲೆ ಬರಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ.

ದುರ್ಘಟನೆ ವೇಳೆ ಸುಮಾರು 8 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊಡಗು ಎಸ್‌ಪಿ ರಾಮರಾಜನ್, ಮಡಿಕೇರಿ ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜು ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾತಾನಾಡಿದ ಎಸ್‌ಪಿ ರಾಮರಾಜನ್, ಇಂದು 15 ಅಡ್ಡಿ ಎತ್ತರದ ತಡೆಗೋಡೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಗುಡ್ಡ ಕುಸಿದು, ಕಾರ್ಮಿಕರ ಮೇಲೆ ಬಿದ್ದಿದೆ. ಅದರಲ್ಲಿ 4 ಜನರ ಮೇಲೆ ಮಣ್ಣು ಬಿದ್ದಿದೆ. ಒಬ್ಬರನ್ನು ಅಲ್ಲಿನ ಸಿಬ್ಬಂದಿಯೇ ರಕ್ಷಣೆ ಮಾಡಿದ್ದಾರೆ. ಉಳಿದ ಮೂವರು 1 ಗಂಟೆ ಕಾಲ ಮಣ್ಣಿನಡಿ ಸಿಲುಕಿದ್ದರು. ಅವರನ್ನು ರಕ್ಷಿಸಲು ಎಲ್ಲರೂ ನಿರಂತರವಾಗಿ ಶ್ರಮಿಸಿದರು ಎಂದು ಹೇಳಿದರು.

The incident took place in Stewart Hill area of ​​Madikeri city where three laborers got trapped under the soil due to a hill collapse during the construction work.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

13 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

14 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

14 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

18 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago