ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

March 12, 2025
10:03 PM
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು, ಕೊಡಗು ಭಾಗದ ಕೆಲವು ಕಡೆ ಮಳೆಯಾದ ಬಗ್ಗೆ ವರದಿ ಇದೆ.

ಕೆಲವು ದಿನಗಳಿಂದ ತಾಪಮಾನದ ಏರಿಕೆಯ ಮೂಲಕ ಸುದ್ದಿಯಾಗಿದ್ದ ಕರಾವಳಿ ಜಿಲ್ಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ. ಸಂಜೆ ಸುಳ್ಯ-ಪುತ್ತೂರು ಹಾಗೂ ಆಸುಪಾಸಿನ ತಾಲೂಕುಗಳಲ್ಲಿ ಮಳೆಯಾಗಿದ್ದರೆ ರಾತ್ರಿ ವೇಳೆ ಎರಡನೇ ಬಾರಿಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ವಿವಿದೆಡೆ ಮಳೆಯಾಗಿದೆ. ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲೂ ಮಳೆಯಾಗಿದೆ. ಕಕ್ಕಿಂಜೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ ಎಂದು ಕೃಷಿಕರು ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ ಕೊಡಗಿನ ಕೆಲವು ಕಡೆ, ಚಿಕ್ಕಮಗಳೂರು , ಮೂಡಿಗೆರೆ ಪ್ರದೇಶದ ಕೆಲವು ಕಡೆ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಿಂದ ಕರಾವಳಿ ಜಿಲ್ಲೆಯ ಜನರು ಆತಂಕಕ್ಕೂ ಒಳಗಾಗಿದ್ದರು. ಕೃಷಿ ನಷ್ಟವಾಗುವ ಆತಂಕ್ಕೆ ಒಳಗಾಗಿದ್ದರು. ಇದೀಗ ಮಳೆಯಾಗುವ ಮೂಲಕ ತಾಪಮಾನ ಇಳಿಕೆಯಾಗಿದೆ, ಆದರೆ ಅಡಿಕೆ ಬೆಳೆಯ ಮೇಲೆ ಪರಿಣಾಮ ಬೀರಬಹುದು ಎನ್ನುವ ಭೀತಿಯನ್ನು ಕೃಷಿಕರು ವ್ಯಕ್ತಪಡಿಸಿದ್ದಾರೆ.………ಮುಂದೆ ಓದಿ……..

Advertisement
ಬಂಗಾಳಕೊಲ್ಲಿ ವಾಯುಭಾರಕುಸಿತವು ಅರಬ್ಬೀಸಮುದ್ರದತ್ತ ಚಲಿಸುತ್ತಿರುವಾಗ ಇವತ್ತು ಮಲೆನಾಡು ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಇತ್ತು. ಆದರೆ ನಿರೀಕ್ಷೆಗಿಂತ ಅಧಿಕ ಮಳೆ ಬಂದಿದೆ. ಬೆಳ್ತಂಗಡಿ ಸುಳ್ಯ ತಾಲ್ಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರು ಬಂಟ್ವಾಳ ಮಂಗಳೂರು ತಾಲೂಕುಗಳಲ್ಲಿ ಕಾಸರಗೋಡು ಜಿಲ್ಲೆಯಲ್ಲಿಯೂ ಮಳೆಯಾಗಿದೆ. ಸಂಜೆ ಮತ್ತು ರಾತ್ರಿ 2 ಹಂತದಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ವಿಶ್ಲೇಷಕ ರಘುರಾಮ ಕಂಪದಕೋಡಿ ಹೇಳಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |
April 25, 2025
2:04 PM
by: ಸಾಯಿಶೇಖರ್ ಕರಿಕಳ
ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ
April 25, 2025
7:47 AM
by: The Rural Mirror ಸುದ್ದಿಜಾಲ
ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ
April 25, 2025
7:42 AM
by: The Rural Mirror ಸುದ್ದಿಜಾಲ
ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ
April 25, 2025
7:31 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group