ಕೆಲವು ದಿನಗಳಿಂದ ತಾಪಮಾನದ ಏರಿಕೆಯ ಮೂಲಕ ಸುದ್ದಿಯಾಗಿದ್ದ ಕರಾವಳಿ ಜಿಲ್ಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ. ಸಂಜೆ ಸುಳ್ಯ-ಪುತ್ತೂರು ಹಾಗೂ ಆಸುಪಾಸಿನ ತಾಲೂಕುಗಳಲ್ಲಿ ಮಳೆಯಾಗಿದ್ದರೆ ರಾತ್ರಿ ವೇಳೆ ಎರಡನೇ ಬಾರಿಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ವಿವಿದೆಡೆ ಮಳೆಯಾಗಿದೆ. ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲೂ ಮಳೆಯಾಗಿದೆ. ಕಕ್ಕಿಂಜೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ ಎಂದು ಕೃಷಿಕರು ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ ಕೊಡಗಿನ ಕೆಲವು ಕಡೆ, ಚಿಕ್ಕಮಗಳೂರು , ಮೂಡಿಗೆರೆ ಪ್ರದೇಶದ ಕೆಲವು ಕಡೆ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಿಂದ ಕರಾವಳಿ ಜಿಲ್ಲೆಯ ಜನರು ಆತಂಕಕ್ಕೂ ಒಳಗಾಗಿದ್ದರು. ಕೃಷಿ ನಷ್ಟವಾಗುವ ಆತಂಕ್ಕೆ ಒಳಗಾಗಿದ್ದರು. ಇದೀಗ ಮಳೆಯಾಗುವ ಮೂಲಕ ತಾಪಮಾನ ಇಳಿಕೆಯಾಗಿದೆ, ಆದರೆ ಅಡಿಕೆ ಬೆಳೆಯ ಮೇಲೆ ಪರಿಣಾಮ ಬೀರಬಹುದು ಎನ್ನುವ ಭೀತಿಯನ್ನು ಕೃಷಿಕರು ವ್ಯಕ್ತಪಡಿಸಿದ್ದಾರೆ.………ಮುಂದೆ ಓದಿ……..
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…