Advertisement
MIRROR FOCUS

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

Share

ಕೆಲವು ದಿನಗಳಿಂದ ತಾಪಮಾನದ ಏರಿಕೆಯ ಮೂಲಕ ಸುದ್ದಿಯಾಗಿದ್ದ ಕರಾವಳಿ ಜಿಲ್ಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ. ಸಂಜೆ ಸುಳ್ಯ-ಪುತ್ತೂರು ಹಾಗೂ ಆಸುಪಾಸಿನ ತಾಲೂಕುಗಳಲ್ಲಿ ಮಳೆಯಾಗಿದ್ದರೆ ರಾತ್ರಿ ವೇಳೆ ಎರಡನೇ ಬಾರಿಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ವಿವಿದೆಡೆ ಮಳೆಯಾಗಿದೆ. ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲೂ ಮಳೆಯಾಗಿದೆ. ಕಕ್ಕಿಂಜೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ ಎಂದು ಕೃಷಿಕರು ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ ಕೊಡಗಿನ ಕೆಲವು ಕಡೆ, ಚಿಕ್ಕಮಗಳೂರು , ಮೂಡಿಗೆರೆ ಪ್ರದೇಶದ ಕೆಲವು ಕಡೆ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಿಂದ ಕರಾವಳಿ ಜಿಲ್ಲೆಯ ಜನರು ಆತಂಕಕ್ಕೂ ಒಳಗಾಗಿದ್ದರು. ಕೃಷಿ ನಷ್ಟವಾಗುವ ಆತಂಕ್ಕೆ ಒಳಗಾಗಿದ್ದರು. ಇದೀಗ ಮಳೆಯಾಗುವ ಮೂಲಕ ತಾಪಮಾನ ಇಳಿಕೆಯಾಗಿದೆ, ಆದರೆ ಅಡಿಕೆ ಬೆಳೆಯ ಮೇಲೆ ಪರಿಣಾಮ ಬೀರಬಹುದು ಎನ್ನುವ ಭೀತಿಯನ್ನು ಕೃಷಿಕರು ವ್ಯಕ್ತಪಡಿಸಿದ್ದಾರೆ.………ಮುಂದೆ ಓದಿ……..

ಬಂಗಾಳಕೊಲ್ಲಿ ವಾಯುಭಾರಕುಸಿತವು ಅರಬ್ಬೀಸಮುದ್ರದತ್ತ ಚಲಿಸುತ್ತಿರುವಾಗ ಇವತ್ತು ಮಲೆನಾಡು ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಇತ್ತು. ಆದರೆ ನಿರೀಕ್ಷೆಗಿಂತ ಅಧಿಕ ಮಳೆ ಬಂದಿದೆ. ಬೆಳ್ತಂಗಡಿ ಸುಳ್ಯ ತಾಲ್ಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರು ಬಂಟ್ವಾಳ ಮಂಗಳೂರು ತಾಲೂಕುಗಳಲ್ಲಿ ಕಾಸರಗೋಡು ಜಿಲ್ಲೆಯಲ್ಲಿಯೂ ಮಳೆಯಾಗಿದೆ. ಸಂಜೆ ಮತ್ತು ರಾತ್ರಿ 2 ಹಂತದಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ವಿಶ್ಲೇಷಕ ರಘುರಾಮ ಕಂಪದಕೋಡಿ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

2 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

7 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago