ರಾಜ್ಯದ ವಿವಿಧೆಡೆ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

May 3, 2023
4:47 PM

ಬೆಂಗಳೂರು, ಕೊಡಗು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಕೊಡಗು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ.

ಮಂಡ್ಯ ಕೆವಿಕೆ, ಮಾಲೂರು, ಸರಗೂರಿನಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ, ಮುದಗಲ್, ಕೃಷ್ಣರಾಜಸಾಗರ, ಕನಕಪುರ, ಹರದನಹಳ್ಳಿ, ಗಬ್ಬೂರು, ಜಾಲಹಳ್ಳಿ, ರಾಯಚೂರು, ಸಾಲಿಗ್ರಾಮ, ಶ್ರೀರಂಗಪಟ್ಟಣ, ಬೆಂಗಳೂರು ಕೆಎಎಲ್​, ಬಂಡೀಪುರ, ಕೊಳ್ಳೇಗಾಲ, ಚಾಮರಾಜನಗರ, ಮೈಸೂರು, ಹಲಬರ್ಗಾ, ಹುಲ್ಸೂರು, ಸಾಯಿಗಾಂವ್, ಭಾಲ್ಕಿ, ದೇವದುರ್ಗ, ಕೋಲಾರ, ಗೌರಿಬಿದನೂರು, ತೊಂಡೇಭಾವಿ, ಜ್ಞಾನಭಾರತಿ ವಿವಿ ಕ್ಯಾಂಪಸ್, ಗೋಪಾಲ್​ನಗರ, ಉತ್ತರಹಳ್ಳಿ, ಬೆಂಗಳೂರು ನಗರ, ಮಂಠಾಳ, ನಿಟ್ಟೂರು, ಔರಾದ್, ಕುರ್ಡಿ, ಮಸ್ಕಿ, ಮಾನ್ವಿ, ಕಕ್ಕೇರಿ, ರಾಮನಗರ, ಖಜೂರಿ, ಮುಡಬಿ, ಹೊಸಕೋಟೆ, ಮಂಡ್ಯ, ಬರಗೂರು, ಚಿಕ್ಕಬಳ್ಳಾಪುರ, ಮೂಡಿಗೆರೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿಯಿಂದಲೂ ಮಳೆ ಸುರಿಯುತ್ತಿದೆ, ಮೋಡಕವಿದ ವಾತಾವರಣವಿರಲಿದ್ದು, ಇಡೀ ದಿನವೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆ ಮುನ್ಸೂಚನೆ ದೊರೆತಿದೆ. ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಕೊಡಗು, ಮೈಸೂರು ಹಾಗೂ ತುಮಕೂರು ಜಿಲ್ಲೆಯಲ್ಲಿ ಮೇ 3ರವರೆಗೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
August 31, 2026
2:46 PM
by: ಸಾಯಿಶೇಖರ್ ಕರಿಕಳ
ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror