ರಾಜ್ಯದ ವಿವಿಧೆಡೆ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

May 3, 2023
4:47 PM

ಬೆಂಗಳೂರು, ಕೊಡಗು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಕೊಡಗು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ.

Advertisement

ಮಂಡ್ಯ ಕೆವಿಕೆ, ಮಾಲೂರು, ಸರಗೂರಿನಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ, ಮುದಗಲ್, ಕೃಷ್ಣರಾಜಸಾಗರ, ಕನಕಪುರ, ಹರದನಹಳ್ಳಿ, ಗಬ್ಬೂರು, ಜಾಲಹಳ್ಳಿ, ರಾಯಚೂರು, ಸಾಲಿಗ್ರಾಮ, ಶ್ರೀರಂಗಪಟ್ಟಣ, ಬೆಂಗಳೂರು ಕೆಎಎಲ್​, ಬಂಡೀಪುರ, ಕೊಳ್ಳೇಗಾಲ, ಚಾಮರಾಜನಗರ, ಮೈಸೂರು, ಹಲಬರ್ಗಾ, ಹುಲ್ಸೂರು, ಸಾಯಿಗಾಂವ್, ಭಾಲ್ಕಿ, ದೇವದುರ್ಗ, ಕೋಲಾರ, ಗೌರಿಬಿದನೂರು, ತೊಂಡೇಭಾವಿ, ಜ್ಞಾನಭಾರತಿ ವಿವಿ ಕ್ಯಾಂಪಸ್, ಗೋಪಾಲ್​ನಗರ, ಉತ್ತರಹಳ್ಳಿ, ಬೆಂಗಳೂರು ನಗರ, ಮಂಠಾಳ, ನಿಟ್ಟೂರು, ಔರಾದ್, ಕುರ್ಡಿ, ಮಸ್ಕಿ, ಮಾನ್ವಿ, ಕಕ್ಕೇರಿ, ರಾಮನಗರ, ಖಜೂರಿ, ಮುಡಬಿ, ಹೊಸಕೋಟೆ, ಮಂಡ್ಯ, ಬರಗೂರು, ಚಿಕ್ಕಬಳ್ಳಾಪುರ, ಮೂಡಿಗೆರೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿಯಿಂದಲೂ ಮಳೆ ಸುರಿಯುತ್ತಿದೆ, ಮೋಡಕವಿದ ವಾತಾವರಣವಿರಲಿದ್ದು, ಇಡೀ ದಿನವೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆ ಮುನ್ಸೂಚನೆ ದೊರೆತಿದೆ. ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಕೊಡಗು, ಮೈಸೂರು ಹಾಗೂ ತುಮಕೂರು ಜಿಲ್ಲೆಯಲ್ಲಿ ಮೇ 3ರವರೆಗೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ
April 20, 2026
8:08 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror