ಮೈಸೂರು ದಸರಾದಲ್ಲಿ ಏರಿದ ಟಿಕೆಟ್‌ ದರ | ಅರಮನೆ ವೀಕ್ಷಣೆ ಟಿಕೆಟ್ ದರ ದುಬಾರಿ |

October 18, 2023
10:23 AM

ಮೈಸೂರು ದಸರಾ (Mysuru Dasara) ಅಂದ್ರೆ ಅದು ನಮ್ಮ ನಾಡಿನ ಹೆಮ್ಮೆ. ಒಂಭತ್ತು ದಿನಗಳ ಕಾಲ ನಮ್ಮ ರಾಜ್ಯದ ಸಾಂಸ್ಕೃತಿಕ ಲೋಕವೇ ಅನಾವರಣಗೊಳ್ಳುತ್ತದೆ. ದೇಶ ವಿದೇಶಗಳಿಂದ ಜಂಬೂ ಸವಾರಿ ನೋಡಲು ಬರುತ್ತಾರೆ. ಆದರೆ ಈ ಬಾರಿ ಜಂಬೂ ಸವಾರಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಸರ್ಕಾರ ಶಾಕ್‌ ನೀಡಿದೆ. ಐತಿಹಾಸಿಕ ಮೈಸೂರು ದಸರಾ  ಜಂಬೂಸವಾರಿ ಮೆರವಣಿಗೆ, ಪಂಜಿನ ಕವಾಯತು ವೀಕ್ಷಣೆಗೆ ಇಂದಿನಿಂದ ಟಿಕೆಟ್ (Tickets) ಮಾರಾಟ ಪ್ರಾರಂಭವಾಗಲಿದೆ. ಆದರೆ ಉಚಿತ ಗ್ಯಾರಂಟಿಗಳ ಅಬ್ಬರದಲ್ಲಿ ಮೈಸೂರು ದಸರಾ ಟಿಕೇಟ್‌ ದುಬಾರಿಯಾಗಿದೆ.

Advertisement
Advertisement

ಇಂದು 10 ಗಂಟೆ ನಂತರ ಟಿಕೆಟ್ ಹಾಗೂ ಗೋಲ್ಡ್ ಕಾರ್ಡ್ ಮಾರಾಟವಾಗಲಿದೆ. www.mysoredasara.gov.in ಮೂಲಕ ಟಿಕೆಟ್ ಖರೀದಿ ಮಾಡಬಹುದು. ಆನ್‌ಲೈನ್ ಹೊರತುಪಡಿಸಿ ಬೇರೆ ಕಡೆ ಟಿಕೆಟ್ ಮಾರಾಟ ಇಲ್ಲ. ಒಬ್ಬರಿಗೆ 2 ಗೋಲ್ಡ್ ಕಾರ್ಡ್ ಹಾಗೂ ಒಬ್ಬರಿಗೆ 2 ಪಾಸ್ ಖರೀದಿಗೆ ಅವಕಾಶವಿದೆ. ಗ್ಯಾರಂಟಿ ಸ್ಕೀಂ ಸರ್ಕಾರದಲ್ಲಿ ಅರಮನೆ ಒಳಗೆ ದಸರಾ ಜಂಬೂ ಸವಾರಿ ವೀಕ್ಷಣೆ ದುಬಾರಿ ಎನಿಸಿಕೊಂಡಿದೆ. ಅರಮನೆ ಆವರಣದಲ್ಲಿ ದಸರಾ ವೀಕ್ಷಣೆಗೆ 3 ಹಾಗೂ 2 ಸಾವಿರ ರೂ. ದರ ನಿಗದಿಯಾಗಿದೆ. ಆನ್ ಲೈನ್ ಮೂಲಕ ಟಿಕೆಟ್ ಖರೀದಿಗೆ ಅವಕಾಶವಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಟಿಕೆಟ್ ಖರೀದಿಸಬಹುದು. ಮೈಸೂರುದಸರಾ.ಗವ್.ಇನ್ ವೆಬ್ ಸೈಟ್ ಮೂಲಕ ಟಿಕೆಟ್ ಖರೀದಿ ಮಾಡಬಹುದು.

ಯಾವ ಟಿಕೆಟ್‌ಗೆ ಎಷ್ಟು ಬೆಲೆ?
ಗೋಲ್ಡ್ ಕಾರ್ಡ್ – 6,000 ರೂ.
ಅರಮನೆ ಎ – 3,000 ರೂ.
ಅರಮನೆ ಬಿ – 2,000 ರೂ.
ಪಂಜಿನ ಕವಾಯತು – 500 ರೂ.

ಈ ಹಿಂದೆ 1,000 ರೂ. ಇದ್ದ ಟಿಕೆಟ್ ಬೆಲೆ ಇದೀಗ ಏಕಾಏಕಿ 2-3 ಸಾವಿರ ರೂ.ಗೆ ಏರಿಕೆಯಾಗಿದೆ. ಗೋಲ್ಡ್ ಕಾರ್ಡ್‌ಗೆ 6,000 ರೂ. ದರ ನಿಗದಿಯಾಗಿದ್ದು, ಪಂಜಿನ ಕವಾಯತು ವೀಕ್ಷಣೆಗೆ 500 ರೂ. ದರ ನಿಗದಿಪಡಿಸಲಾಗಿದೆ.

Tickets and gold cards will be sold after 10 am today. Tickets can be purchased through www.mysoredasara.gov.in. Tickets are not available anywhere other than online. One can buy 2 gold cards and 2 passes per person. Dussehra Jambu ride viewing inside the palace has become expensive under the guarantee scheme Govt.
- ಅಂತರ್ಜಾಲ ಮಾಹಿತಿ

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group