ಮೈಸೂರು ದಸರಾದಲ್ಲಿ ಏರಿದ ಟಿಕೆಟ್‌ ದರ | ಅರಮನೆ ವೀಕ್ಷಣೆ ಟಿಕೆಟ್ ದರ ದುಬಾರಿ |

October 18, 2023
10:23 AM

ಮೈಸೂರು ದಸರಾ (Mysuru Dasara) ಅಂದ್ರೆ ಅದು ನಮ್ಮ ನಾಡಿನ ಹೆಮ್ಮೆ. ಒಂಭತ್ತು ದಿನಗಳ ಕಾಲ ನಮ್ಮ ರಾಜ್ಯದ ಸಾಂಸ್ಕೃತಿಕ ಲೋಕವೇ ಅನಾವರಣಗೊಳ್ಳುತ್ತದೆ. ದೇಶ ವಿದೇಶಗಳಿಂದ ಜಂಬೂ ಸವಾರಿ ನೋಡಲು ಬರುತ್ತಾರೆ. ಆದರೆ ಈ ಬಾರಿ ಜಂಬೂ ಸವಾರಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಸರ್ಕಾರ ಶಾಕ್‌ ನೀಡಿದೆ. ಐತಿಹಾಸಿಕ ಮೈಸೂರು ದಸರಾ  ಜಂಬೂಸವಾರಿ ಮೆರವಣಿಗೆ, ಪಂಜಿನ ಕವಾಯತು ವೀಕ್ಷಣೆಗೆ ಇಂದಿನಿಂದ ಟಿಕೆಟ್ (Tickets) ಮಾರಾಟ ಪ್ರಾರಂಭವಾಗಲಿದೆ. ಆದರೆ ಉಚಿತ ಗ್ಯಾರಂಟಿಗಳ ಅಬ್ಬರದಲ್ಲಿ ಮೈಸೂರು ದಸರಾ ಟಿಕೇಟ್‌ ದುಬಾರಿಯಾಗಿದೆ.

Advertisement

ಇಂದು 10 ಗಂಟೆ ನಂತರ ಟಿಕೆಟ್ ಹಾಗೂ ಗೋಲ್ಡ್ ಕಾರ್ಡ್ ಮಾರಾಟವಾಗಲಿದೆ. www.mysoredasara.gov.in ಮೂಲಕ ಟಿಕೆಟ್ ಖರೀದಿ ಮಾಡಬಹುದು. ಆನ್‌ಲೈನ್ ಹೊರತುಪಡಿಸಿ ಬೇರೆ ಕಡೆ ಟಿಕೆಟ್ ಮಾರಾಟ ಇಲ್ಲ. ಒಬ್ಬರಿಗೆ 2 ಗೋಲ್ಡ್ ಕಾರ್ಡ್ ಹಾಗೂ ಒಬ್ಬರಿಗೆ 2 ಪಾಸ್ ಖರೀದಿಗೆ ಅವಕಾಶವಿದೆ. ಗ್ಯಾರಂಟಿ ಸ್ಕೀಂ ಸರ್ಕಾರದಲ್ಲಿ ಅರಮನೆ ಒಳಗೆ ದಸರಾ ಜಂಬೂ ಸವಾರಿ ವೀಕ್ಷಣೆ ದುಬಾರಿ ಎನಿಸಿಕೊಂಡಿದೆ. ಅರಮನೆ ಆವರಣದಲ್ಲಿ ದಸರಾ ವೀಕ್ಷಣೆಗೆ 3 ಹಾಗೂ 2 ಸಾವಿರ ರೂ. ದರ ನಿಗದಿಯಾಗಿದೆ. ಆನ್ ಲೈನ್ ಮೂಲಕ ಟಿಕೆಟ್ ಖರೀದಿಗೆ ಅವಕಾಶವಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಟಿಕೆಟ್ ಖರೀದಿಸಬಹುದು. ಮೈಸೂರುದಸರಾ.ಗವ್.ಇನ್ ವೆಬ್ ಸೈಟ್ ಮೂಲಕ ಟಿಕೆಟ್ ಖರೀದಿ ಮಾಡಬಹುದು.

ಯಾವ ಟಿಕೆಟ್‌ಗೆ ಎಷ್ಟು ಬೆಲೆ?
ಗೋಲ್ಡ್ ಕಾರ್ಡ್ – 6,000 ರೂ.
ಅರಮನೆ ಎ – 3,000 ರೂ.
ಅರಮನೆ ಬಿ – 2,000 ರೂ.
ಪಂಜಿನ ಕವಾಯತು – 500 ರೂ.

ಈ ಹಿಂದೆ 1,000 ರೂ. ಇದ್ದ ಟಿಕೆಟ್ ಬೆಲೆ ಇದೀಗ ಏಕಾಏಕಿ 2-3 ಸಾವಿರ ರೂ.ಗೆ ಏರಿಕೆಯಾಗಿದೆ. ಗೋಲ್ಡ್ ಕಾರ್ಡ್‌ಗೆ 6,000 ರೂ. ದರ ನಿಗದಿಯಾಗಿದ್ದು, ಪಂಜಿನ ಕವಾಯತು ವೀಕ್ಷಣೆಗೆ 500 ರೂ. ದರ ನಿಗದಿಪಡಿಸಲಾಗಿದೆ.

Tickets and gold cards will be sold after 10 am today. Tickets can be purchased through www.mysoredasara.gov.in. Tickets are not available anywhere other than online. One can buy 2 gold cards and 2 passes per person. Dussehra Jambu ride viewing inside the palace has become expensive under the guarantee scheme Govt.
- ಅಂತರ್ಜಾಲ ಮಾಹಿತಿ
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ
May 9, 2025
8:00 PM
by: The Rural Mirror ಸುದ್ದಿಜಾಲ
ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ
May 9, 2025
7:49 PM
by: The Rural Mirror ಸುದ್ದಿಜಾಲ
ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |
May 9, 2025
7:46 AM
by: ದ ರೂರಲ್ ಮಿರರ್.ಕಾಂ
ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ
May 8, 2025
8:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group