MIRROR FOCUS

ಮೈಸೂರು ದಸರಾದಲ್ಲಿ ಏರಿದ ಟಿಕೆಟ್‌ ದರ | ಅರಮನೆ ವೀಕ್ಷಣೆ ಟಿಕೆಟ್ ದರ ದುಬಾರಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮೈಸೂರು ದಸರಾ (Mysuru Dasara) ಅಂದ್ರೆ ಅದು ನಮ್ಮ ನಾಡಿನ ಹೆಮ್ಮೆ. ಒಂಭತ್ತು ದಿನಗಳ ಕಾಲ ನಮ್ಮ ರಾಜ್ಯದ ಸಾಂಸ್ಕೃತಿಕ ಲೋಕವೇ ಅನಾವರಣಗೊಳ್ಳುತ್ತದೆ. ದೇಶ ವಿದೇಶಗಳಿಂದ ಜಂಬೂ ಸವಾರಿ ನೋಡಲು ಬರುತ್ತಾರೆ. ಆದರೆ ಈ ಬಾರಿ ಜಂಬೂ ಸವಾರಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಸರ್ಕಾರ ಶಾಕ್‌ ನೀಡಿದೆ. ಐತಿಹಾಸಿಕ ಮೈಸೂರು ದಸರಾ  ಜಂಬೂಸವಾರಿ ಮೆರವಣಿಗೆ, ಪಂಜಿನ ಕವಾಯತು ವೀಕ್ಷಣೆಗೆ ಇಂದಿನಿಂದ ಟಿಕೆಟ್ (Tickets) ಮಾರಾಟ ಪ್ರಾರಂಭವಾಗಲಿದೆ. ಆದರೆ ಉಚಿತ ಗ್ಯಾರಂಟಿಗಳ ಅಬ್ಬರದಲ್ಲಿ ಮೈಸೂರು ದಸರಾ ಟಿಕೇಟ್‌ ದುಬಾರಿಯಾಗಿದೆ.

Advertisement
Advertisement

ಇಂದು 10 ಗಂಟೆ ನಂತರ ಟಿಕೆಟ್ ಹಾಗೂ ಗೋಲ್ಡ್ ಕಾರ್ಡ್ ಮಾರಾಟವಾಗಲಿದೆ. www.mysoredasara.gov.in ಮೂಲಕ ಟಿಕೆಟ್ ಖರೀದಿ ಮಾಡಬಹುದು. ಆನ್‌ಲೈನ್ ಹೊರತುಪಡಿಸಿ ಬೇರೆ ಕಡೆ ಟಿಕೆಟ್ ಮಾರಾಟ ಇಲ್ಲ. ಒಬ್ಬರಿಗೆ 2 ಗೋಲ್ಡ್ ಕಾರ್ಡ್ ಹಾಗೂ ಒಬ್ಬರಿಗೆ 2 ಪಾಸ್ ಖರೀದಿಗೆ ಅವಕಾಶವಿದೆ. ಗ್ಯಾರಂಟಿ ಸ್ಕೀಂ ಸರ್ಕಾರದಲ್ಲಿ ಅರಮನೆ ಒಳಗೆ ದಸರಾ ಜಂಬೂ ಸವಾರಿ ವೀಕ್ಷಣೆ ದುಬಾರಿ ಎನಿಸಿಕೊಂಡಿದೆ. ಅರಮನೆ ಆವರಣದಲ್ಲಿ ದಸರಾ ವೀಕ್ಷಣೆಗೆ 3 ಹಾಗೂ 2 ಸಾವಿರ ರೂ. ದರ ನಿಗದಿಯಾಗಿದೆ. ಆನ್ ಲೈನ್ ಮೂಲಕ ಟಿಕೆಟ್ ಖರೀದಿಗೆ ಅವಕಾಶವಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಟಿಕೆಟ್ ಖರೀದಿಸಬಹುದು. ಮೈಸೂರುದಸರಾ.ಗವ್.ಇನ್ ವೆಬ್ ಸೈಟ್ ಮೂಲಕ ಟಿಕೆಟ್ ಖರೀದಿ ಮಾಡಬಹುದು.

ಯಾವ ಟಿಕೆಟ್‌ಗೆ ಎಷ್ಟು ಬೆಲೆ?
ಗೋಲ್ಡ್ ಕಾರ್ಡ್ – 6,000 ರೂ.
ಅರಮನೆ ಎ – 3,000 ರೂ.
ಅರಮನೆ ಬಿ – 2,000 ರೂ.
ಪಂಜಿನ ಕವಾಯತು – 500 ರೂ.

ಈ ಹಿಂದೆ 1,000 ರೂ. ಇದ್ದ ಟಿಕೆಟ್ ಬೆಲೆ ಇದೀಗ ಏಕಾಏಕಿ 2-3 ಸಾವಿರ ರೂ.ಗೆ ಏರಿಕೆಯಾಗಿದೆ. ಗೋಲ್ಡ್ ಕಾರ್ಡ್‌ಗೆ 6,000 ರೂ. ದರ ನಿಗದಿಯಾಗಿದ್ದು, ಪಂಜಿನ ಕವಾಯತು ವೀಕ್ಷಣೆಗೆ 500 ರೂ. ದರ ನಿಗದಿಪಡಿಸಲಾಗಿದೆ.

Tickets and gold cards will be sold after 10 am today. Tickets can be purchased through www.mysoredasara.gov.in. Tickets are not available anywhere other than online. One can buy 2 gold cards and 2 passes per person. Dussehra Jambu ride viewing inside the palace has become expensive under the guarantee scheme Govt.
- ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

1 hour ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

6 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

7 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

12 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

14 hours ago

ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?

ಜೂನ್ 22, 2025 ರಂದು  6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…

15 hours ago