Advertisement
MIRROR FOCUS

ಮೈಸೂರು ದಸರಾದಲ್ಲಿ ಏರಿದ ಟಿಕೆಟ್‌ ದರ | ಅರಮನೆ ವೀಕ್ಷಣೆ ಟಿಕೆಟ್ ದರ ದುಬಾರಿ |

Share

ಮೈಸೂರು ದಸರಾ (Mysuru Dasara) ಅಂದ್ರೆ ಅದು ನಮ್ಮ ನಾಡಿನ ಹೆಮ್ಮೆ. ಒಂಭತ್ತು ದಿನಗಳ ಕಾಲ ನಮ್ಮ ರಾಜ್ಯದ ಸಾಂಸ್ಕೃತಿಕ ಲೋಕವೇ ಅನಾವರಣಗೊಳ್ಳುತ್ತದೆ. ದೇಶ ವಿದೇಶಗಳಿಂದ ಜಂಬೂ ಸವಾರಿ ನೋಡಲು ಬರುತ್ತಾರೆ. ಆದರೆ ಈ ಬಾರಿ ಜಂಬೂ ಸವಾರಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಸರ್ಕಾರ ಶಾಕ್‌ ನೀಡಿದೆ. ಐತಿಹಾಸಿಕ ಮೈಸೂರು ದಸರಾ  ಜಂಬೂಸವಾರಿ ಮೆರವಣಿಗೆ, ಪಂಜಿನ ಕವಾಯತು ವೀಕ್ಷಣೆಗೆ ಇಂದಿನಿಂದ ಟಿಕೆಟ್ (Tickets) ಮಾರಾಟ ಪ್ರಾರಂಭವಾಗಲಿದೆ. ಆದರೆ ಉಚಿತ ಗ್ಯಾರಂಟಿಗಳ ಅಬ್ಬರದಲ್ಲಿ ಮೈಸೂರು ದಸರಾ ಟಿಕೇಟ್‌ ದುಬಾರಿಯಾಗಿದೆ.

ಇಂದು 10 ಗಂಟೆ ನಂತರ ಟಿಕೆಟ್ ಹಾಗೂ ಗೋಲ್ಡ್ ಕಾರ್ಡ್ ಮಾರಾಟವಾಗಲಿದೆ. www.mysoredasara.gov.in ಮೂಲಕ ಟಿಕೆಟ್ ಖರೀದಿ ಮಾಡಬಹುದು. ಆನ್‌ಲೈನ್ ಹೊರತುಪಡಿಸಿ ಬೇರೆ ಕಡೆ ಟಿಕೆಟ್ ಮಾರಾಟ ಇಲ್ಲ. ಒಬ್ಬರಿಗೆ 2 ಗೋಲ್ಡ್ ಕಾರ್ಡ್ ಹಾಗೂ ಒಬ್ಬರಿಗೆ 2 ಪಾಸ್ ಖರೀದಿಗೆ ಅವಕಾಶವಿದೆ. ಗ್ಯಾರಂಟಿ ಸ್ಕೀಂ ಸರ್ಕಾರದಲ್ಲಿ ಅರಮನೆ ಒಳಗೆ ದಸರಾ ಜಂಬೂ ಸವಾರಿ ವೀಕ್ಷಣೆ ದುಬಾರಿ ಎನಿಸಿಕೊಂಡಿದೆ. ಅರಮನೆ ಆವರಣದಲ್ಲಿ ದಸರಾ ವೀಕ್ಷಣೆಗೆ 3 ಹಾಗೂ 2 ಸಾವಿರ ರೂ. ದರ ನಿಗದಿಯಾಗಿದೆ. ಆನ್ ಲೈನ್ ಮೂಲಕ ಟಿಕೆಟ್ ಖರೀದಿಗೆ ಅವಕಾಶವಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಟಿಕೆಟ್ ಖರೀದಿಸಬಹುದು. ಮೈಸೂರುದಸರಾ.ಗವ್.ಇನ್ ವೆಬ್ ಸೈಟ್ ಮೂಲಕ ಟಿಕೆಟ್ ಖರೀದಿ ಮಾಡಬಹುದು.

ಯಾವ ಟಿಕೆಟ್‌ಗೆ ಎಷ್ಟು ಬೆಲೆ?
ಗೋಲ್ಡ್ ಕಾರ್ಡ್ – 6,000 ರೂ.
ಅರಮನೆ ಎ – 3,000 ರೂ.
ಅರಮನೆ ಬಿ – 2,000 ರೂ.
ಪಂಜಿನ ಕವಾಯತು – 500 ರೂ.

ಈ ಹಿಂದೆ 1,000 ರೂ. ಇದ್ದ ಟಿಕೆಟ್ ಬೆಲೆ ಇದೀಗ ಏಕಾಏಕಿ 2-3 ಸಾವಿರ ರೂ.ಗೆ ಏರಿಕೆಯಾಗಿದೆ. ಗೋಲ್ಡ್ ಕಾರ್ಡ್‌ಗೆ 6,000 ರೂ. ದರ ನಿಗದಿಯಾಗಿದ್ದು, ಪಂಜಿನ ಕವಾಯತು ವೀಕ್ಷಣೆಗೆ 500 ರೂ. ದರ ನಿಗದಿಪಡಿಸಲಾಗಿದೆ.

Tickets and gold cards will be sold after 10 am today. Tickets can be purchased through www.mysoredasara.gov.in. Tickets are not available anywhere other than online. One can buy 2 gold cards and 2 passes per person. Dussehra Jambu ride viewing inside the palace has become expensive under the guarantee scheme Govt.
- ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

7 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

8 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago