Advertisement
MIRROR FOCUS

ಮೈಸೂರು ದಸರಾದಲ್ಲಿ ಏರಿದ ಟಿಕೆಟ್‌ ದರ | ಅರಮನೆ ವೀಕ್ಷಣೆ ಟಿಕೆಟ್ ದರ ದುಬಾರಿ |

Share

ಮೈಸೂರು ದಸರಾ (Mysuru Dasara) ಅಂದ್ರೆ ಅದು ನಮ್ಮ ನಾಡಿನ ಹೆಮ್ಮೆ. ಒಂಭತ್ತು ದಿನಗಳ ಕಾಲ ನಮ್ಮ ರಾಜ್ಯದ ಸಾಂಸ್ಕೃತಿಕ ಲೋಕವೇ ಅನಾವರಣಗೊಳ್ಳುತ್ತದೆ. ದೇಶ ವಿದೇಶಗಳಿಂದ ಜಂಬೂ ಸವಾರಿ ನೋಡಲು ಬರುತ್ತಾರೆ. ಆದರೆ ಈ ಬಾರಿ ಜಂಬೂ ಸವಾರಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಸರ್ಕಾರ ಶಾಕ್‌ ನೀಡಿದೆ. ಐತಿಹಾಸಿಕ ಮೈಸೂರು ದಸರಾ  ಜಂಬೂಸವಾರಿ ಮೆರವಣಿಗೆ, ಪಂಜಿನ ಕವಾಯತು ವೀಕ್ಷಣೆಗೆ ಇಂದಿನಿಂದ ಟಿಕೆಟ್ (Tickets) ಮಾರಾಟ ಪ್ರಾರಂಭವಾಗಲಿದೆ. ಆದರೆ ಉಚಿತ ಗ್ಯಾರಂಟಿಗಳ ಅಬ್ಬರದಲ್ಲಿ ಮೈಸೂರು ದಸರಾ ಟಿಕೇಟ್‌ ದುಬಾರಿಯಾಗಿದೆ.

ಇಂದು 10 ಗಂಟೆ ನಂತರ ಟಿಕೆಟ್ ಹಾಗೂ ಗೋಲ್ಡ್ ಕಾರ್ಡ್ ಮಾರಾಟವಾಗಲಿದೆ. www.mysoredasara.gov.in ಮೂಲಕ ಟಿಕೆಟ್ ಖರೀದಿ ಮಾಡಬಹುದು. ಆನ್‌ಲೈನ್ ಹೊರತುಪಡಿಸಿ ಬೇರೆ ಕಡೆ ಟಿಕೆಟ್ ಮಾರಾಟ ಇಲ್ಲ. ಒಬ್ಬರಿಗೆ 2 ಗೋಲ್ಡ್ ಕಾರ್ಡ್ ಹಾಗೂ ಒಬ್ಬರಿಗೆ 2 ಪಾಸ್ ಖರೀದಿಗೆ ಅವಕಾಶವಿದೆ. ಗ್ಯಾರಂಟಿ ಸ್ಕೀಂ ಸರ್ಕಾರದಲ್ಲಿ ಅರಮನೆ ಒಳಗೆ ದಸರಾ ಜಂಬೂ ಸವಾರಿ ವೀಕ್ಷಣೆ ದುಬಾರಿ ಎನಿಸಿಕೊಂಡಿದೆ. ಅರಮನೆ ಆವರಣದಲ್ಲಿ ದಸರಾ ವೀಕ್ಷಣೆಗೆ 3 ಹಾಗೂ 2 ಸಾವಿರ ರೂ. ದರ ನಿಗದಿಯಾಗಿದೆ. ಆನ್ ಲೈನ್ ಮೂಲಕ ಟಿಕೆಟ್ ಖರೀದಿಗೆ ಅವಕಾಶವಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಟಿಕೆಟ್ ಖರೀದಿಸಬಹುದು. ಮೈಸೂರುದಸರಾ.ಗವ್.ಇನ್ ವೆಬ್ ಸೈಟ್ ಮೂಲಕ ಟಿಕೆಟ್ ಖರೀದಿ ಮಾಡಬಹುದು.

Advertisement

ಯಾವ ಟಿಕೆಟ್‌ಗೆ ಎಷ್ಟು ಬೆಲೆ?
ಗೋಲ್ಡ್ ಕಾರ್ಡ್ – 6,000 ರೂ.
ಅರಮನೆ ಎ – 3,000 ರೂ.
ಅರಮನೆ ಬಿ – 2,000 ರೂ.
ಪಂಜಿನ ಕವಾಯತು – 500 ರೂ.

ಈ ಹಿಂದೆ 1,000 ರೂ. ಇದ್ದ ಟಿಕೆಟ್ ಬೆಲೆ ಇದೀಗ ಏಕಾಏಕಿ 2-3 ಸಾವಿರ ರೂ.ಗೆ ಏರಿಕೆಯಾಗಿದೆ. ಗೋಲ್ಡ್ ಕಾರ್ಡ್‌ಗೆ 6,000 ರೂ. ದರ ನಿಗದಿಯಾಗಿದ್ದು, ಪಂಜಿನ ಕವಾಯತು ವೀಕ್ಷಣೆಗೆ 500 ರೂ. ದರ ನಿಗದಿಪಡಿಸಲಾಗಿದೆ.

Advertisement
Tickets and gold cards will be sold after 10 am today. Tickets can be purchased through www.mysoredasara.gov.in. Tickets are not available anywhere other than online. One can buy 2 gold cards and 2 passes per person. Dussehra Jambu ride viewing inside the palace has become expensive under the guarantee scheme Govt.
- ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

9 hours ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

1 day ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

1 day ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

1 day ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

1 day ago