ಕೊಡಗು ಜಿಲ್ಲೆಯ ಶ್ರೀಮಂಗಲ ಹೋಬಳಿಯ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯಲು ನಡೆಸಲಾಗುತ್ತಿದ್ದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಗ್ರಾಮ ಸಮೀಪದ ಅರಣ್ಯಕ್ಕೆ ಹುಲಿ ತೆರಳಿರುವ ಹೆಜ್ಜೆ ಗುರುತು ಪತ್ತೆಯಾದ ಹಿನ್ನಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 2 ತಿಂಗಳಿನಿಂದ ಶ್ರೀಮಂಗಲ ಹೋಬಳಿ ವ್ಯಾಪ್ತಿಯಲ್ಲಿ 16 ಹಸುಗಳನ್ನು ಹುಲಿ ದಾಳಿ ಮಾಡಿ ಕೊಂದಿತ್ತು. ಕಾರ್ಯಾಚರಣೆ ಮುಗಿದ ಹಿನ್ನೆಲೆಯಲ್ಲಿ ಮತ್ತಿಗೋಡು ಸಾಕಾನೆ ಶಿಬಿರದಿಂದ ಆಗಮಿಸಿದ್ದ ಶ್ರೀರಾಮ ಮತ್ತು ಅಜಯ ಸಾಕಾನೆಗಳು ತಮ್ಮ ಶಿಬಿರಕ್ಕೆ ಮರಳಿವೆ.
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…