Advertisement
MIRROR FOCUS

ಹುಲಿ ಸಮೀಕ್ಷೆ-2024 ವರದಿ ಬಿಡುಗಡೆ | ಕಳೆದ ವರ್ಷಕ್ಕಿಂತ ಈ ಬಾರಿ ಹುಲಿಗಳ ಸಂಖ್ಯೆ ಇಳಿಮುಖ

Share

ರಾಜ್ಯದಲ್ಲಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿನ ಹುಲಿಗಳ ಗಣತಿ  ಕಾರ್ಯವನ್ನು ನಡೆಸಿದ್ದು,  ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ   ಹುಲಿಗಳ ಸಂಖ್ಯೆ ಕಡಿಮೆಯಾಗಿದೆ . ಕರ್ನಾಟಕ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳ ಹುಲಿಗಳ ಸಮೀಕ್ಷೆ 2024 ವರದಿ ಬಿಡುಗಡೆ ಮಾಡಿದೆ. ವರದಿಯಲ್ಲಿ  ರಾಜ್ಯದಲ್ಲಿ 393 ಹುಲಿಗಳಿವೆ ಎಂದು ತಿಳಿಸಿದೆ.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ , ಎನ್‌ಟಿಸಿಎ ದ ಮಾರ್ಗಸೂಚಿ ಹಾಗೂ ಅಖಿಲ ಭಾರತ ಹುಲಿ ಗಣತಿ ಭಾಗವಾಗಿ ಎಲ್ಲ ರಾಜ್ಯಗಳ ಹುಲಿ ವಾಸಸ್ಥಾನ ಪ್ರದೇಶಗಳಲ್ಲಿ ಪ್ರತಿ 4 ವರ್ಷಕ್ಕೊಮ್ಮೆ ಹುಲಿ, ಆನೆ ಸೇರಿದಂತೆ ಇನ್ನಿತರ ವನ್ಯಜೀವಿಗಳ ಗಣತಿ ನಡೆಸಲಾಗುತ್ತದೆ.  2024ರಲ್ಲಿ ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಮೀಕ್ಷೆ ನಡೆಸಲಾಗಿದ್ದು, 2023ಕ್ಕೆ ಹೋಲಿಸಿದರೆ ಹುಲಿಗಳ ಸಂಖ್ಯೆ 15 ಕಡಿಮೆಯಾಗಿದೆ. ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಾದ ನಾಗರಹೊಳೆ, ಬಂಡೀಪುರ, ಬಿಳಿಗಿರಿ ರಂಗನಾಥ ಸ್ವಾಮಿ ಬೆಟ್ಟ, ಕಾಳಿ ಮತ್ತು ಭದ್ರಾ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಳ್ಳಲಾಗಿದ್ದು,  5 ಹುಲಿ ಸಂರಕ್ಷಿತ ಪ್ರದೇಶದಲ್ಲಿ 2160 ಕ್ಯಾಮರಾ ಟ್ರ್ಯಾಪ್‌ ಅಳವಡಿಸಲಾಗಿದ್ದು, 61 ಲಕ್ಷ ವನ್ಯಜೀವಿ ಚಿತ್ರಗಳನ್ನು ಪಡೆಯಲಾಗಿತ್ತು. ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಾಂಶದ ಮೂಲಕ ಹುಲಿ ಚಿತ್ರಗಳನ್ನು ಪ್ರತ್ಯೇಕಿಸಿ, ಪ್ರತಿ ಹುಲಿ ಪಟ್ಟೆಗಳನ್ನಾಧರಿಸಿ ಹುಲಿಗಳ ಸಂಖ್ಯೆ ಲೆಕ್ಕ ಹಾಕಲಾಗಿದೆ. ಅದರ ಆಧಾರದ ಮೇಲೆ ವಾರ್ಷಿಕ ವರದಿ ಸಿದ್ಧಪಡಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 hour ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

2 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

2 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

9 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

14 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

14 hours ago