Advertisement
MIRROR FOCUS

ಹುಲಿ ಸಮೀಕ್ಷೆ-2024 ವರದಿ ಬಿಡುಗಡೆ | ಕಳೆದ ವರ್ಷಕ್ಕಿಂತ ಈ ಬಾರಿ ಹುಲಿಗಳ ಸಂಖ್ಯೆ ಇಳಿಮುಖ

Share

ರಾಜ್ಯದಲ್ಲಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿನ ಹುಲಿಗಳ ಗಣತಿ  ಕಾರ್ಯವನ್ನು ನಡೆಸಿದ್ದು,  ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ   ಹುಲಿಗಳ ಸಂಖ್ಯೆ ಕಡಿಮೆಯಾಗಿದೆ . ಕರ್ನಾಟಕ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳ ಹುಲಿಗಳ ಸಮೀಕ್ಷೆ 2024 ವರದಿ ಬಿಡುಗಡೆ ಮಾಡಿದೆ. ವರದಿಯಲ್ಲಿ  ರಾಜ್ಯದಲ್ಲಿ 393 ಹುಲಿಗಳಿವೆ ಎಂದು ತಿಳಿಸಿದೆ.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ , ಎನ್‌ಟಿಸಿಎ ದ ಮಾರ್ಗಸೂಚಿ ಹಾಗೂ ಅಖಿಲ ಭಾರತ ಹುಲಿ ಗಣತಿ ಭಾಗವಾಗಿ ಎಲ್ಲ ರಾಜ್ಯಗಳ ಹುಲಿ ವಾಸಸ್ಥಾನ ಪ್ರದೇಶಗಳಲ್ಲಿ ಪ್ರತಿ 4 ವರ್ಷಕ್ಕೊಮ್ಮೆ ಹುಲಿ, ಆನೆ ಸೇರಿದಂತೆ ಇನ್ನಿತರ ವನ್ಯಜೀವಿಗಳ ಗಣತಿ ನಡೆಸಲಾಗುತ್ತದೆ.  2024ರಲ್ಲಿ ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಮೀಕ್ಷೆ ನಡೆಸಲಾಗಿದ್ದು, 2023ಕ್ಕೆ ಹೋಲಿಸಿದರೆ ಹುಲಿಗಳ ಸಂಖ್ಯೆ 15 ಕಡಿಮೆಯಾಗಿದೆ. ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಾದ ನಾಗರಹೊಳೆ, ಬಂಡೀಪುರ, ಬಿಳಿಗಿರಿ ರಂಗನಾಥ ಸ್ವಾಮಿ ಬೆಟ್ಟ, ಕಾಳಿ ಮತ್ತು ಭದ್ರಾ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಳ್ಳಲಾಗಿದ್ದು,  5 ಹುಲಿ ಸಂರಕ್ಷಿತ ಪ್ರದೇಶದಲ್ಲಿ 2160 ಕ್ಯಾಮರಾ ಟ್ರ್ಯಾಪ್‌ ಅಳವಡಿಸಲಾಗಿದ್ದು, 61 ಲಕ್ಷ ವನ್ಯಜೀವಿ ಚಿತ್ರಗಳನ್ನು ಪಡೆಯಲಾಗಿತ್ತು. ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಾಂಶದ ಮೂಲಕ ಹುಲಿ ಚಿತ್ರಗಳನ್ನು ಪ್ರತ್ಯೇಕಿಸಿ, ಪ್ರತಿ ಹುಲಿ ಪಟ್ಟೆಗಳನ್ನಾಧರಿಸಿ ಹುಲಿಗಳ ಸಂಖ್ಯೆ ಲೆಕ್ಕ ಹಾಕಲಾಗಿದೆ. ಅದರ ಆಧಾರದ ಮೇಲೆ ವಾರ್ಷಿಕ ವರದಿ ಸಿದ್ಧಪಡಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

13 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

13 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

20 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

22 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

1 day ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

1 day ago