Advertisement
MIRROR FOCUS

ಹುಲಿ ಸಮೀಕ್ಷೆ-2024 ವರದಿ ಬಿಡುಗಡೆ | ಕಳೆದ ವರ್ಷಕ್ಕಿಂತ ಈ ಬಾರಿ ಹುಲಿಗಳ ಸಂಖ್ಯೆ ಇಳಿಮುಖ

Share

ರಾಜ್ಯದಲ್ಲಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿನ ಹುಲಿಗಳ ಗಣತಿ  ಕಾರ್ಯವನ್ನು ನಡೆಸಿದ್ದು,  ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ   ಹುಲಿಗಳ ಸಂಖ್ಯೆ ಕಡಿಮೆಯಾಗಿದೆ . ಕರ್ನಾಟಕ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳ ಹುಲಿಗಳ ಸಮೀಕ್ಷೆ 2024 ವರದಿ ಬಿಡುಗಡೆ ಮಾಡಿದೆ. ವರದಿಯಲ್ಲಿ  ರಾಜ್ಯದಲ್ಲಿ 393 ಹುಲಿಗಳಿವೆ ಎಂದು ತಿಳಿಸಿದೆ.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ , ಎನ್‌ಟಿಸಿಎ ದ ಮಾರ್ಗಸೂಚಿ ಹಾಗೂ ಅಖಿಲ ಭಾರತ ಹುಲಿ ಗಣತಿ ಭಾಗವಾಗಿ ಎಲ್ಲ ರಾಜ್ಯಗಳ ಹುಲಿ ವಾಸಸ್ಥಾನ ಪ್ರದೇಶಗಳಲ್ಲಿ ಪ್ರತಿ 4 ವರ್ಷಕ್ಕೊಮ್ಮೆ ಹುಲಿ, ಆನೆ ಸೇರಿದಂತೆ ಇನ್ನಿತರ ವನ್ಯಜೀವಿಗಳ ಗಣತಿ ನಡೆಸಲಾಗುತ್ತದೆ.  2024ರಲ್ಲಿ ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಮೀಕ್ಷೆ ನಡೆಸಲಾಗಿದ್ದು, 2023ಕ್ಕೆ ಹೋಲಿಸಿದರೆ ಹುಲಿಗಳ ಸಂಖ್ಯೆ 15 ಕಡಿಮೆಯಾಗಿದೆ. ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಾದ ನಾಗರಹೊಳೆ, ಬಂಡೀಪುರ, ಬಿಳಿಗಿರಿ ರಂಗನಾಥ ಸ್ವಾಮಿ ಬೆಟ್ಟ, ಕಾಳಿ ಮತ್ತು ಭದ್ರಾ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಳ್ಳಲಾಗಿದ್ದು,  5 ಹುಲಿ ಸಂರಕ್ಷಿತ ಪ್ರದೇಶದಲ್ಲಿ 2160 ಕ್ಯಾಮರಾ ಟ್ರ್ಯಾಪ್‌ ಅಳವಡಿಸಲಾಗಿದ್ದು, 61 ಲಕ್ಷ ವನ್ಯಜೀವಿ ಚಿತ್ರಗಳನ್ನು ಪಡೆಯಲಾಗಿತ್ತು. ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಾಂಶದ ಮೂಲಕ ಹುಲಿ ಚಿತ್ರಗಳನ್ನು ಪ್ರತ್ಯೇಕಿಸಿ, ಪ್ರತಿ ಹುಲಿ ಪಟ್ಟೆಗಳನ್ನಾಧರಿಸಿ ಹುಲಿಗಳ ಸಂಖ್ಯೆ ಲೆಕ್ಕ ಹಾಕಲಾಗಿದೆ. ಅದರ ಆಧಾರದ ಮೇಲೆ ವಾರ್ಷಿಕ ವರದಿ ಸಿದ್ಧಪಡಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

15 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

20 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago