ಸುದ್ದಿಗಳು

ಪ್ಲಾಸ್ಟಿಕ್‌ ಮೇಲೆ ಮೇಲೆ ಸಿಟ್ಟು ಬೇಡ- ಐಡಿಯಾ ಮಾಡಿ…! | ಇಲ್ಲೊಂದು ಹೊಸ ಪ್ರಯೋಗ ಮಾಡಿದ್ದಾರೆ… | ಪ್ಲಾಸ್ಟಿಕ್ ತ್ಯಾಜ್ಯದಿಂದ ಟೈಲ್ಸ್…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮ ಪರಿಸರಕ್ಕೆ ಬಹುದೊಡ್ಡ ತಲೆ ನೋವಾಗಿ ಕಾಡ್ತಿರೋದು ಕರಗಿಸಲಾಗ ಪ್ಲಾಸ್ಟಿಕ್ ಗಳು. ಎಷ್ಟೆ ಕಡಿವಾಣ ಹಾಕಿದರೂ ರಕ್ತ ಬೀಜಾಸುರನಂತೆ ಮತ್ತೆ ಹುಟ್ಟಿಕೊಳ್ಳುತ್ತೆ. ಹಾಗೆ ಜನ ಕೂಡ ಪ್ಲಾಸ್ಟಿಕ್‌ ಇಲ್ಲದಿದ್ದರೆ ನಾವು ಬದುಕೋದು ಕಷ್ಟ ಅನ್ನುವಷ್ಟರ ಮಟ್ಟಿಗೆ ಕ್ಲೋಸ್ ಆಗ್ಬಿಟ್ಟಿದ್ದಾರೆ. ಏನೆ ಆದ್ರೂ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಮುಕ್ತಿ ಹಾಡಲೇ ಬೇಕಾಗಿದೆ. ಬೇಡದ ಪ್ಲಾಸ್ಟಿಕ್ ಗಳನ್ನು ಎಷ್ಟುಂತ ಗುಡ್ಡೆ ಹಾಕಬಹುದು…?

Advertisement

ಅದಕ್ಕೆ ಈಗ ಉತ್ತರ ಕನ್ನಡ ಜಿಲ್ಲೆಯ  ಕಾರವಾರದ ನಗರ ಸಭೆ ಹೊಸ ಐಡಿಯಾವೊಂದನ್ನು ಮಾಡಿದೆ. ಸದ್ಯ ಕಾರವಾರ ನಗರಸಭೆ ವ್ಯಾಪ್ತಿಯ ಕಲಿಕಾ ಕೇಂದ್ರದ ಫ್ಲೋರಿಂಗ್​ಗೆ ಪ್ಲಾಸ್ಟಿಕ್​ ವೇಸ್ಟ್​ಗಳನ್ನು ಬಳಸಲಾಗಿದೆ. ಥೇಟ್ ಕಾಂಕ್ರೀಟ್ ಅಥವಾ ಸಿಮೆಂಟ್ ಇಂಟರ್​ಲಾಕ್​ಗಳಂತೆಯೇ ಕಾಣೋ ಪಕ್ಕಾ ಪ್ಲಾಸ್ಟಿಕ್​ನಿಂದ ತಯಾರಿಸಿದ ಟೈಲ್ಸ್ ಗಳನ್ನು ಅಳವಡಿಸಿದೆ.

ನೋಡಲು ಗಟ್ಟಿಮುಟ್ಟಾಗಿ ಕಾಣುವ ಈ ಟೈಲ್ಸ್​ಗಳು ಆಕರ್ಷಕವಾಗಿಯೂ ಇವೆ. ಮೇಲಾಗಿ ಉಳಿದ ಟೈಲ್ಸ್​ನಂತೆ ಇವು ಒಡೆದು ಹೋಗೋದಿಲ್ಲ. ಸಾಮಾನ್ಯವಾಗಿ ನಡೆದಾಡಿಕೊಂಡು ಹೋಗೋರೆಲ್ಲ ಇದೇನೋ ಸಾಮಾನ್ಯ ಸಿಮೆಂಟ್ ಇಂಟರ್​ಲಾಕ್​ಗಳು ಅಂದ್ಕೊಳ್ತಾರೆ. ಆದ್ರೆ ಈ ಇಂಟರ್​ಲಾಕ್ ಅಥವಾ ಟೈಲ್ಸ್​ಗಳು ತಯಾರಿಸಿರೋದು ಪ್ಲಾಸ್ಟಿಕ್ ವೇಸ್ಟೇಜ್​ನಿಂದ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಪ್ಲಾಸ್ಟಿಕ್​ನಿಂದ ಟೈಲ್ಸ್ ಮಾಡುವ ಕಂಪೆನಿಯೊಂದಿದೆ. ಈ ಬಗ್ಗೆ ವಿಷಯ ತಿಳಿದುಕೊಂಡು ಕಾರವಾರ ನಗರಸಭೆಯು ಅಂತಹದ್ದೇ ಪ್ಲಾಂಟ್​ನ್ನ ಕಾರವಾರದಲ್ಲೂ ತಯಾರಿಸಲು ನಿರ್ಧರಿಸಿದೆ. ಈ ಮಧ್ಯೆ ಬೆಳ್ತಂಗಡಿಯಿಂದಲೇ ಟೈಲ್ಸ್ ತರಿಸಿಕೊಂಡು ಕಲಿಕಾಕೇಂದ್ರದ ಫ್ಲೋರಿಂಗ್ ತಯಾರಿಸಲಾಗಿದೆ. ಇನ್ನೇನು ಇದೇ ರೀತಿಯ ಟೈಲ್ಸ್ ತಯಾರಿಕಾ ಘಟಕ ಕಾರವಾರದಲ್ಲೂ ತಲೆ ಎತ್ತಲಿದೆ.

Advertisement

ಹೀಗೆ ಆದಲ್ಲಿ ಕಾರವಾರದಲ್ಲಿ ಪ್ರತಿದಿನ ಸಂಗ್ರಹಿಸುತ್ತಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳಿಗೆ ಮುಕ್ತಿ ಸಿಕ್ಕಂತಾಗುವುದಲ್ಲದೇ, ಪರಿಸರ ಸ್ನೇಹಿ ಅಭಿವೃದ್ಧಿಯೂ ಸಾಧ್ಯವಾಗಲಿದೆ. ಕೇವಲ ಕಾರವಾರದಲ್ಲಿ ಮಾತ್ರವಲ್ಲದೆ ಪ್ರತೀ ನಗರ ಸಭೆ, ವಾರ್ಡ್ಗಳಲ್ಲಿ ಇಂಥ ಘಟಕಗಳನ್ನು ಅಳವಡಿಸಿದ್ರೆ ಅತೀ ಶೀಘ್ರ ಹಾಗೂ ಪರಿಣಾಮಕಾರಿಯಾಗಿ ಪ್ಲಾಸ್ಟಿಕ್ ಎಂಬ ಪೆಡಂಭೂತಕ್ಕೆ ಅಂತ್ಯ ಹಾಡಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

700 ಕ್ಕೂ ಅಧಿಕ ರೆಸಿಪಿ | ದಿವ್ಯ ಮಹೇಶ್‌ ಅವರಿಗೆ “ಪಾಕ ಪ್ರವೀಣೆ” ಪ್ರಶಸ್ತಿ

ದ ರೂರಲ್‌ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…

4 hours ago

ಮಕ್ಕಳ ಪುಟ | ಪಂಜದ ಕ್ರಿಯೇಟಿವ್‌ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ |

ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…

5 hours ago

ವಿಶ್ವದಲ್ಲಿ ಅಡಿಕೆ ಕೃಷಿ ಹೇಗಿದೆ..? ಭಾರತದಲ್ಲಿ ಅಡಿಕೆ ಆಮದು ಎಷ್ಟು..?

ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…

5 hours ago

ಪ್ಲಾಸ್ಟಿಕ್‌ ತ್ಯಾಜ್ಯ ಕಡಿಮೆ ಮಾಡಲು ಏನು ಕ್ರಮ ? ಅಧ್ಯಯನ ವರದಿ ನಿಯಮ ಗ್ರಾಮಗಳಲ್ಲೂ ಜಾರಿಯಾಗಲಿ

ಪ್ಲಾಸ್ಟಿಕ್ ಮಾಲಿನ್ಯವು  ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…

5 hours ago

ಕೃಷಿಯಲ್ಲಿ ಮೀಥೇನ್ ಕಡಿತದ ಗುರಿ | ವಿಯೆಟ್ನಾಂನಲ್ಲಿ ವಿಶೇಷ ಮಾರ್ಗಸೂಚಿ

ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ  ಹೊರಸೂಸುವ ಮೀಥೇನ್ ಅನ್ನು 30% ರಷ್ಟು…

15 hours ago

ಅರ್ಜುನ ಆನೆ ಹೆಸರಿನಲ್ಲಿ ಪ್ರಶಸ್ತಿ

ಆನೆ ಸೆರೆ ಕಾರ್ಯಾಚರಣೆ, ಆನೆಗಳನ್ನು ಪಳಗಿಸುವುದು ಮತ್ತು ಯಶಸ್ವಿಯಾಗಿ ವನ್ಯಜೀವಿ ಸೆರೆ ಕಾರ್ಯಾಚರಣೆಯಲ್ಲಿ…

15 hours ago