ಸುದ್ದಿಗಳು

ಪ್ಲಾಸ್ಟಿಕ್‌ ಮೇಲೆ ಮೇಲೆ ಸಿಟ್ಟು ಬೇಡ- ಐಡಿಯಾ ಮಾಡಿ…! | ಇಲ್ಲೊಂದು ಹೊಸ ಪ್ರಯೋಗ ಮಾಡಿದ್ದಾರೆ… | ಪ್ಲಾಸ್ಟಿಕ್ ತ್ಯಾಜ್ಯದಿಂದ ಟೈಲ್ಸ್…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮ ಪರಿಸರಕ್ಕೆ ಬಹುದೊಡ್ಡ ತಲೆ ನೋವಾಗಿ ಕಾಡ್ತಿರೋದು ಕರಗಿಸಲಾಗ ಪ್ಲಾಸ್ಟಿಕ್ ಗಳು. ಎಷ್ಟೆ ಕಡಿವಾಣ ಹಾಕಿದರೂ ರಕ್ತ ಬೀಜಾಸುರನಂತೆ ಮತ್ತೆ ಹುಟ್ಟಿಕೊಳ್ಳುತ್ತೆ. ಹಾಗೆ ಜನ ಕೂಡ ಪ್ಲಾಸ್ಟಿಕ್‌ ಇಲ್ಲದಿದ್ದರೆ ನಾವು ಬದುಕೋದು ಕಷ್ಟ ಅನ್ನುವಷ್ಟರ ಮಟ್ಟಿಗೆ ಕ್ಲೋಸ್ ಆಗ್ಬಿಟ್ಟಿದ್ದಾರೆ. ಏನೆ ಆದ್ರೂ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಮುಕ್ತಿ ಹಾಡಲೇ ಬೇಕಾಗಿದೆ. ಬೇಡದ ಪ್ಲಾಸ್ಟಿಕ್ ಗಳನ್ನು ಎಷ್ಟುಂತ ಗುಡ್ಡೆ ಹಾಕಬಹುದು…?

Advertisement
Advertisement

ಅದಕ್ಕೆ ಈಗ ಉತ್ತರ ಕನ್ನಡ ಜಿಲ್ಲೆಯ  ಕಾರವಾರದ ನಗರ ಸಭೆ ಹೊಸ ಐಡಿಯಾವೊಂದನ್ನು ಮಾಡಿದೆ. ಸದ್ಯ ಕಾರವಾರ ನಗರಸಭೆ ವ್ಯಾಪ್ತಿಯ ಕಲಿಕಾ ಕೇಂದ್ರದ ಫ್ಲೋರಿಂಗ್​ಗೆ ಪ್ಲಾಸ್ಟಿಕ್​ ವೇಸ್ಟ್​ಗಳನ್ನು ಬಳಸಲಾಗಿದೆ. ಥೇಟ್ ಕಾಂಕ್ರೀಟ್ ಅಥವಾ ಸಿಮೆಂಟ್ ಇಂಟರ್​ಲಾಕ್​ಗಳಂತೆಯೇ ಕಾಣೋ ಪಕ್ಕಾ ಪ್ಲಾಸ್ಟಿಕ್​ನಿಂದ ತಯಾರಿಸಿದ ಟೈಲ್ಸ್ ಗಳನ್ನು ಅಳವಡಿಸಿದೆ.

ನೋಡಲು ಗಟ್ಟಿಮುಟ್ಟಾಗಿ ಕಾಣುವ ಈ ಟೈಲ್ಸ್​ಗಳು ಆಕರ್ಷಕವಾಗಿಯೂ ಇವೆ. ಮೇಲಾಗಿ ಉಳಿದ ಟೈಲ್ಸ್​ನಂತೆ ಇವು ಒಡೆದು ಹೋಗೋದಿಲ್ಲ. ಸಾಮಾನ್ಯವಾಗಿ ನಡೆದಾಡಿಕೊಂಡು ಹೋಗೋರೆಲ್ಲ ಇದೇನೋ ಸಾಮಾನ್ಯ ಸಿಮೆಂಟ್ ಇಂಟರ್​ಲಾಕ್​ಗಳು ಅಂದ್ಕೊಳ್ತಾರೆ. ಆದ್ರೆ ಈ ಇಂಟರ್​ಲಾಕ್ ಅಥವಾ ಟೈಲ್ಸ್​ಗಳು ತಯಾರಿಸಿರೋದು ಪ್ಲಾಸ್ಟಿಕ್ ವೇಸ್ಟೇಜ್​ನಿಂದ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಪ್ಲಾಸ್ಟಿಕ್​ನಿಂದ ಟೈಲ್ಸ್ ಮಾಡುವ ಕಂಪೆನಿಯೊಂದಿದೆ. ಈ ಬಗ್ಗೆ ವಿಷಯ ತಿಳಿದುಕೊಂಡು ಕಾರವಾರ ನಗರಸಭೆಯು ಅಂತಹದ್ದೇ ಪ್ಲಾಂಟ್​ನ್ನ ಕಾರವಾರದಲ್ಲೂ ತಯಾರಿಸಲು ನಿರ್ಧರಿಸಿದೆ. ಈ ಮಧ್ಯೆ ಬೆಳ್ತಂಗಡಿಯಿಂದಲೇ ಟೈಲ್ಸ್ ತರಿಸಿಕೊಂಡು ಕಲಿಕಾಕೇಂದ್ರದ ಫ್ಲೋರಿಂಗ್ ತಯಾರಿಸಲಾಗಿದೆ. ಇನ್ನೇನು ಇದೇ ರೀತಿಯ ಟೈಲ್ಸ್ ತಯಾರಿಕಾ ಘಟಕ ಕಾರವಾರದಲ್ಲೂ ತಲೆ ಎತ್ತಲಿದೆ.

Advertisement

ಹೀಗೆ ಆದಲ್ಲಿ ಕಾರವಾರದಲ್ಲಿ ಪ್ರತಿದಿನ ಸಂಗ್ರಹಿಸುತ್ತಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳಿಗೆ ಮುಕ್ತಿ ಸಿಕ್ಕಂತಾಗುವುದಲ್ಲದೇ, ಪರಿಸರ ಸ್ನೇಹಿ ಅಭಿವೃದ್ಧಿಯೂ ಸಾಧ್ಯವಾಗಲಿದೆ. ಕೇವಲ ಕಾರವಾರದಲ್ಲಿ ಮಾತ್ರವಲ್ಲದೆ ಪ್ರತೀ ನಗರ ಸಭೆ, ವಾರ್ಡ್ಗಳಲ್ಲಿ ಇಂಥ ಘಟಕಗಳನ್ನು ಅಳವಡಿಸಿದ್ರೆ ಅತೀ ಶೀಘ್ರ ಹಾಗೂ ಪರಿಣಾಮಕಾರಿಯಾಗಿ ಪ್ಲಾಸ್ಟಿಕ್ ಎಂಬ ಪೆಡಂಭೂತಕ್ಕೆ ಅಂತ್ಯ ಹಾಡಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

10 hours ago

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…

10 hours ago

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

10 hours ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

20 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

21 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

23 hours ago