Advertisement
ಸುದ್ದಿಗಳು

ಪ್ಲಾಸ್ಟಿಕ್‌ ಮೇಲೆ ಮೇಲೆ ಸಿಟ್ಟು ಬೇಡ- ಐಡಿಯಾ ಮಾಡಿ…! | ಇಲ್ಲೊಂದು ಹೊಸ ಪ್ರಯೋಗ ಮಾಡಿದ್ದಾರೆ… | ಪ್ಲಾಸ್ಟಿಕ್ ತ್ಯಾಜ್ಯದಿಂದ ಟೈಲ್ಸ್…! |

Share

ನಮ್ಮ ಪರಿಸರಕ್ಕೆ ಬಹುದೊಡ್ಡ ತಲೆ ನೋವಾಗಿ ಕಾಡ್ತಿರೋದು ಕರಗಿಸಲಾಗ ಪ್ಲಾಸ್ಟಿಕ್ ಗಳು. ಎಷ್ಟೆ ಕಡಿವಾಣ ಹಾಕಿದರೂ ರಕ್ತ ಬೀಜಾಸುರನಂತೆ ಮತ್ತೆ ಹುಟ್ಟಿಕೊಳ್ಳುತ್ತೆ. ಹಾಗೆ ಜನ ಕೂಡ ಪ್ಲಾಸ್ಟಿಕ್‌ ಇಲ್ಲದಿದ್ದರೆ ನಾವು ಬದುಕೋದು ಕಷ್ಟ ಅನ್ನುವಷ್ಟರ ಮಟ್ಟಿಗೆ ಕ್ಲೋಸ್ ಆಗ್ಬಿಟ್ಟಿದ್ದಾರೆ. ಏನೆ ಆದ್ರೂ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಮುಕ್ತಿ ಹಾಡಲೇ ಬೇಕಾಗಿದೆ. ಬೇಡದ ಪ್ಲಾಸ್ಟಿಕ್ ಗಳನ್ನು ಎಷ್ಟುಂತ ಗುಡ್ಡೆ ಹಾಕಬಹುದು…?

ಅದಕ್ಕೆ ಈಗ ಉತ್ತರ ಕನ್ನಡ ಜಿಲ್ಲೆಯ  ಕಾರವಾರದ ನಗರ ಸಭೆ ಹೊಸ ಐಡಿಯಾವೊಂದನ್ನು ಮಾಡಿದೆ. ಸದ್ಯ ಕಾರವಾರ ನಗರಸಭೆ ವ್ಯಾಪ್ತಿಯ ಕಲಿಕಾ ಕೇಂದ್ರದ ಫ್ಲೋರಿಂಗ್​ಗೆ ಪ್ಲಾಸ್ಟಿಕ್​ ವೇಸ್ಟ್​ಗಳನ್ನು ಬಳಸಲಾಗಿದೆ. ಥೇಟ್ ಕಾಂಕ್ರೀಟ್ ಅಥವಾ ಸಿಮೆಂಟ್ ಇಂಟರ್​ಲಾಕ್​ಗಳಂತೆಯೇ ಕಾಣೋ ಪಕ್ಕಾ ಪ್ಲಾಸ್ಟಿಕ್​ನಿಂದ ತಯಾರಿಸಿದ ಟೈಲ್ಸ್ ಗಳನ್ನು ಅಳವಡಿಸಿದೆ.

ನೋಡಲು ಗಟ್ಟಿಮುಟ್ಟಾಗಿ ಕಾಣುವ ಈ ಟೈಲ್ಸ್​ಗಳು ಆಕರ್ಷಕವಾಗಿಯೂ ಇವೆ. ಮೇಲಾಗಿ ಉಳಿದ ಟೈಲ್ಸ್​ನಂತೆ ಇವು ಒಡೆದು ಹೋಗೋದಿಲ್ಲ. ಸಾಮಾನ್ಯವಾಗಿ ನಡೆದಾಡಿಕೊಂಡು ಹೋಗೋರೆಲ್ಲ ಇದೇನೋ ಸಾಮಾನ್ಯ ಸಿಮೆಂಟ್ ಇಂಟರ್​ಲಾಕ್​ಗಳು ಅಂದ್ಕೊಳ್ತಾರೆ. ಆದ್ರೆ ಈ ಇಂಟರ್​ಲಾಕ್ ಅಥವಾ ಟೈಲ್ಸ್​ಗಳು ತಯಾರಿಸಿರೋದು ಪ್ಲಾಸ್ಟಿಕ್ ವೇಸ್ಟೇಜ್​ನಿಂದ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಪ್ಲಾಸ್ಟಿಕ್​ನಿಂದ ಟೈಲ್ಸ್ ಮಾಡುವ ಕಂಪೆನಿಯೊಂದಿದೆ. ಈ ಬಗ್ಗೆ ವಿಷಯ ತಿಳಿದುಕೊಂಡು ಕಾರವಾರ ನಗರಸಭೆಯು ಅಂತಹದ್ದೇ ಪ್ಲಾಂಟ್​ನ್ನ ಕಾರವಾರದಲ್ಲೂ ತಯಾರಿಸಲು ನಿರ್ಧರಿಸಿದೆ. ಈ ಮಧ್ಯೆ ಬೆಳ್ತಂಗಡಿಯಿಂದಲೇ ಟೈಲ್ಸ್ ತರಿಸಿಕೊಂಡು ಕಲಿಕಾಕೇಂದ್ರದ ಫ್ಲೋರಿಂಗ್ ತಯಾರಿಸಲಾಗಿದೆ. ಇನ್ನೇನು ಇದೇ ರೀತಿಯ ಟೈಲ್ಸ್ ತಯಾರಿಕಾ ಘಟಕ ಕಾರವಾರದಲ್ಲೂ ತಲೆ ಎತ್ತಲಿದೆ.

ಹೀಗೆ ಆದಲ್ಲಿ ಕಾರವಾರದಲ್ಲಿ ಪ್ರತಿದಿನ ಸಂಗ್ರಹಿಸುತ್ತಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳಿಗೆ ಮುಕ್ತಿ ಸಿಕ್ಕಂತಾಗುವುದಲ್ಲದೇ, ಪರಿಸರ ಸ್ನೇಹಿ ಅಭಿವೃದ್ಧಿಯೂ ಸಾಧ್ಯವಾಗಲಿದೆ. ಕೇವಲ ಕಾರವಾರದಲ್ಲಿ ಮಾತ್ರವಲ್ಲದೆ ಪ್ರತೀ ನಗರ ಸಭೆ, ವಾರ್ಡ್ಗಳಲ್ಲಿ ಇಂಥ ಘಟಕಗಳನ್ನು ಅಳವಡಿಸಿದ್ರೆ ಅತೀ ಶೀಘ್ರ ಹಾಗೂ ಪರಿಣಾಮಕಾರಿಯಾಗಿ ಪ್ಲಾಸ್ಟಿಕ್ ಎಂಬ ಪೆಡಂಭೂತಕ್ಕೆ ಅಂತ್ಯ ಹಾಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

35 minutes ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

7 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

8 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

15 hours ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

16 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

16 hours ago