Advertisement
ಸುದ್ದಿಗಳು

ಪ್ಲಾಸ್ಟಿಕ್‌ ಮೇಲೆ ಮೇಲೆ ಸಿಟ್ಟು ಬೇಡ- ಐಡಿಯಾ ಮಾಡಿ…! | ಇಲ್ಲೊಂದು ಹೊಸ ಪ್ರಯೋಗ ಮಾಡಿದ್ದಾರೆ… | ಪ್ಲಾಸ್ಟಿಕ್ ತ್ಯಾಜ್ಯದಿಂದ ಟೈಲ್ಸ್…! |

Share

ನಮ್ಮ ಪರಿಸರಕ್ಕೆ ಬಹುದೊಡ್ಡ ತಲೆ ನೋವಾಗಿ ಕಾಡ್ತಿರೋದು ಕರಗಿಸಲಾಗ ಪ್ಲಾಸ್ಟಿಕ್ ಗಳು. ಎಷ್ಟೆ ಕಡಿವಾಣ ಹಾಕಿದರೂ ರಕ್ತ ಬೀಜಾಸುರನಂತೆ ಮತ್ತೆ ಹುಟ್ಟಿಕೊಳ್ಳುತ್ತೆ. ಹಾಗೆ ಜನ ಕೂಡ ಪ್ಲಾಸ್ಟಿಕ್‌ ಇಲ್ಲದಿದ್ದರೆ ನಾವು ಬದುಕೋದು ಕಷ್ಟ ಅನ್ನುವಷ್ಟರ ಮಟ್ಟಿಗೆ ಕ್ಲೋಸ್ ಆಗ್ಬಿಟ್ಟಿದ್ದಾರೆ. ಏನೆ ಆದ್ರೂ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಮುಕ್ತಿ ಹಾಡಲೇ ಬೇಕಾಗಿದೆ. ಬೇಡದ ಪ್ಲಾಸ್ಟಿಕ್ ಗಳನ್ನು ಎಷ್ಟುಂತ ಗುಡ್ಡೆ ಹಾಕಬಹುದು…?

ಅದಕ್ಕೆ ಈಗ ಉತ್ತರ ಕನ್ನಡ ಜಿಲ್ಲೆಯ  ಕಾರವಾರದ ನಗರ ಸಭೆ ಹೊಸ ಐಡಿಯಾವೊಂದನ್ನು ಮಾಡಿದೆ. ಸದ್ಯ ಕಾರವಾರ ನಗರಸಭೆ ವ್ಯಾಪ್ತಿಯ ಕಲಿಕಾ ಕೇಂದ್ರದ ಫ್ಲೋರಿಂಗ್​ಗೆ ಪ್ಲಾಸ್ಟಿಕ್​ ವೇಸ್ಟ್​ಗಳನ್ನು ಬಳಸಲಾಗಿದೆ. ಥೇಟ್ ಕಾಂಕ್ರೀಟ್ ಅಥವಾ ಸಿಮೆಂಟ್ ಇಂಟರ್​ಲಾಕ್​ಗಳಂತೆಯೇ ಕಾಣೋ ಪಕ್ಕಾ ಪ್ಲಾಸ್ಟಿಕ್​ನಿಂದ ತಯಾರಿಸಿದ ಟೈಲ್ಸ್ ಗಳನ್ನು ಅಳವಡಿಸಿದೆ.

ನೋಡಲು ಗಟ್ಟಿಮುಟ್ಟಾಗಿ ಕಾಣುವ ಈ ಟೈಲ್ಸ್​ಗಳು ಆಕರ್ಷಕವಾಗಿಯೂ ಇವೆ. ಮೇಲಾಗಿ ಉಳಿದ ಟೈಲ್ಸ್​ನಂತೆ ಇವು ಒಡೆದು ಹೋಗೋದಿಲ್ಲ. ಸಾಮಾನ್ಯವಾಗಿ ನಡೆದಾಡಿಕೊಂಡು ಹೋಗೋರೆಲ್ಲ ಇದೇನೋ ಸಾಮಾನ್ಯ ಸಿಮೆಂಟ್ ಇಂಟರ್​ಲಾಕ್​ಗಳು ಅಂದ್ಕೊಳ್ತಾರೆ. ಆದ್ರೆ ಈ ಇಂಟರ್​ಲಾಕ್ ಅಥವಾ ಟೈಲ್ಸ್​ಗಳು ತಯಾರಿಸಿರೋದು ಪ್ಲಾಸ್ಟಿಕ್ ವೇಸ್ಟೇಜ್​ನಿಂದ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಪ್ಲಾಸ್ಟಿಕ್​ನಿಂದ ಟೈಲ್ಸ್ ಮಾಡುವ ಕಂಪೆನಿಯೊಂದಿದೆ. ಈ ಬಗ್ಗೆ ವಿಷಯ ತಿಳಿದುಕೊಂಡು ಕಾರವಾರ ನಗರಸಭೆಯು ಅಂತಹದ್ದೇ ಪ್ಲಾಂಟ್​ನ್ನ ಕಾರವಾರದಲ್ಲೂ ತಯಾರಿಸಲು ನಿರ್ಧರಿಸಿದೆ. ಈ ಮಧ್ಯೆ ಬೆಳ್ತಂಗಡಿಯಿಂದಲೇ ಟೈಲ್ಸ್ ತರಿಸಿಕೊಂಡು ಕಲಿಕಾಕೇಂದ್ರದ ಫ್ಲೋರಿಂಗ್ ತಯಾರಿಸಲಾಗಿದೆ. ಇನ್ನೇನು ಇದೇ ರೀತಿಯ ಟೈಲ್ಸ್ ತಯಾರಿಕಾ ಘಟಕ ಕಾರವಾರದಲ್ಲೂ ತಲೆ ಎತ್ತಲಿದೆ.

ಹೀಗೆ ಆದಲ್ಲಿ ಕಾರವಾರದಲ್ಲಿ ಪ್ರತಿದಿನ ಸಂಗ್ರಹಿಸುತ್ತಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳಿಗೆ ಮುಕ್ತಿ ಸಿಕ್ಕಂತಾಗುವುದಲ್ಲದೇ, ಪರಿಸರ ಸ್ನೇಹಿ ಅಭಿವೃದ್ಧಿಯೂ ಸಾಧ್ಯವಾಗಲಿದೆ. ಕೇವಲ ಕಾರವಾರದಲ್ಲಿ ಮಾತ್ರವಲ್ಲದೆ ಪ್ರತೀ ನಗರ ಸಭೆ, ವಾರ್ಡ್ಗಳಲ್ಲಿ ಇಂಥ ಘಟಕಗಳನ್ನು ಅಳವಡಿಸಿದ್ರೆ ಅತೀ ಶೀಘ್ರ ಹಾಗೂ ಪರಿಣಾಮಕಾರಿಯಾಗಿ ಪ್ಲಾಸ್ಟಿಕ್ ಎಂಬ ಪೆಡಂಭೂತಕ್ಕೆ ಅಂತ್ಯ ಹಾಡಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

11 minutes ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

6 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

6 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

14 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

14 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago